ಉಡುಪಿ ಜಿಲ್ಲೆಯಾದ್ಯಂತ ಸುರಿದ ಮಳೆಯಿಂದಾಗಿ ಅಪಾರ ಹಾನಿ-ಕಹಳೆ ನ್ಯೂಸ್
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಹಾಗೂ ಮಂಗಳವಾರ ಮುಂಜಾನೆ ಧಾರಾಕಾರ ಮಳೆ ಸುರಿದು ಮನೆ ಹಾನಿಯಾಗಿ, ಮರಗಳು ಬಿದ್ದ ಘಟನೆ ನಡೆದಿದೆ. ಮಿಂಚಿನಿಂದಾಗಿ ಬ್ರಹ್ಮಾವರ ತಾಲೂಕಿನ ನಾಗರತ್ನ ಭುಜಂಗ ಶೆಟ್ಟಿಗೆ ಸೇರಿದ ಮನೆ ಹಾನಿಯಾಗಿದ್ದು, ಈ ಘಟನೆ ನಡೆದಾಗ ಮನೆಯಲ್ಲಿ 6 ಜನರಿದ್ದು ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಮನೆಯ ಅನೇಕ ಉಪಕರಣಗಳು ಹಾನಿಗೊಂಡಿದ್ದು, ಮರವೊಂದು ಕೆಮ್ಮಣ್ಣುವಿನ ಮುಖ್ಯ ರಸ್ತೆಯಲ್ಲಿ ಬಿದ್ದಿದ್ದು, ಸಂಚಾರ ವ್ಯವಸ್ಥೆ ಸ್ಥಗಿತಗೊಳಿಸಿ ಬಳಿಕ ಸ್ಥಳೀಯ ಪಂಚಾಯತ್...







