ಉಡುಪಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ ; 30 ಸಾವಿರ ರೂ. ಮೌಲ್ಯದ ಗಾಂಜಾ ವಶ-ಕಹಳೆ ನ್ಯೂಸ್
ಉಡುಪಿ : ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಡ್ಯ ಜಿಲ್ಲೆಯ ಪಾಂಡವಪುರ ನಿವಾಸಿ 23 ವರ್ಷದ ಕೆ ಎಸ್ ಗೌತಮ್ ಗೌಡ ಮತ್ತು ಬೆಳಗಾವಿ ನಿವಾಸಿ 21 ವರ್ಷದ ವಿಕ್ಕಿ ದಯಾಳ್ ಅಲಿಯಾಸ್ ವಿಕ್ಕಿ ಎಂದು ಗುರುತಿಸಲಾಗಿದೆ. ಮಾರ್ಚ್ 16ರಂದು ಮಧ್ಯಾಹ್ನ 1.30ರ ಸುಮಾರಿಗೆ ಉಡುಪಿಯ ಕುಂಜಿಬೆಟ್ಟು ಕೆಇಬಿ ವಸತಿ ಗೃಹದ ಬಳಿ ಇರುವ ವಿಮಲಾ ಪದ್ಮನಾಭ ಕಟ್ಟಡದ ಬಳಿ ಇಬ್ಬರು ವ್ಯಕ್ತಿಗಳು...







