ಉಡುಪಿಯ ಜಿಲ್ಲೆಯ ಇನ್ನಂಜೆಯಲ್ಲಿ ಆಟವಾಡುತ್ತಿದ್ದಂತೆ ಕುಸಿದು ಬಿದ್ದು ಕೊನೆಯುಸಿರೆಳೆದ ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ-ಕಹಳೆ ನ್ಯೂಸ್
ಉಡುಪಿ : ಉಡುಪಿಯ ಜಿಲ್ಲೆಯ ಇನ್ನಂಜೆಯಲ್ಲಿ ವಾಲಿಬಾಲ್ ಕೋರ್ಟ್ನ ಪಕ್ಕದಲ್ಲೇ ಅಭ್ಯಾಸ ನಡೆಸುತ್ತಿದ್ದ ಸಂದರ್ಭದಲ್ಲಿ ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ ಆಟವಾಡುತ್ತಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಆಟಗಾರ ಕುರ್ಕಾಲು ಸುಭಾಸ್ ನಗರ ನಿವಾಸಿ 33 ವರ್ಷದ ದೇವು ಯಾನೆ ದೇವರಾಜ್ ಎಂದು ಗುರುತಿಸಲಾಗಿದೆ. ಅವರು ಈ ಹಿಂದೆ ಕಲ್ಲು ಗಣಿಯೊಂದರಲ್ಲಿ ರೈಟರ್ ಆಗಿ ದುಡಿಯುತ್ತಿದ್ದರು. ಶನಿವಾರ ರಾತ್ರಿ ಇನ್ನಂಜೆಯಲ್ಲಿ ನಡೆಯುತ್ತಿದ್ದ ಇನ್ನಂಜೆ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ...







