ಕಳೆದ ಜು. 03ರ ಮಳೆಗೆ ಕೊಚ್ಚಿಹೋಗಿದ್ದ ವ್ಯಕ್ತಿಯ ಅಸ್ಥಿಪಂಜರ ಕಾಪುವಿನಲ್ಲಿ ಪತ್ತೆ-ಕಹಳೆ ನ್ಯೂಸ್
ಉಡುಪಿ : ಮಹಾಮಳೆಯ ಸಂದರ್ಭದಲ್ಲಿ ಕಾಣೆಯಾಗಿದ್ದ ವ್ಯಕ್ತಿಯೋರ್ವರ ಅಸ್ತಿ ಪಂಜರವು ಹೊಳೆಯ ಸಮೀಪ ಪತ್ತೆಯಾದ ಘಟನೆ ಕಾಪುವಿನಲ್ಲಿ ನಡೆದಿದೆ. ಮೃತರನ್ನು 72 ವರ್ಷದ ಶ್ರೀನಿವಾಸ ನಾಯ್ಕ ಎಂದು ಗುರುತಿಸಲಾಗಿದೆ. ಇವರು 2020 ರ ಜು. 03ರಂದು ಕೊಡಂಗಳ ವಿಷ್ಣುಮೂರ್ತಿ ದೇವಸ್ಥಾನದ ಸಮೀಪದಲ್ಲಿರುವ ಹೊಳೆಯ ಸೇತುವೆ ಬದಿಯಲ್ಲಿ ಕಾಣೆಯಾಗಿದ್ದವರು ಈವರೆಗೆ ಪತ್ತೆಯಾಗಿಲ್ಲ. ಆದರೆ ನಿನ್ನೆ ಬೆಳಿಗ್ಗೆ ಶ್ರೀನಿವಾಸ ಅವರ ಪತ್ನಿ ರತ್ನ ಎಂಬವರಿಗೆ ಸ್ಥಳೀಯರೊಬ್ಬರು ಕರೆಮಾಡಿ ಮಣಿಪುರದ ಮೂಡು ಕಲ್ಮಂಜೆ ಹೊಳೆಯ...







