Friday, July 24, 2026

ಉಡುಪಿ

ಉಡುಪಿ

ಕಳೆದ ಜು. 03ರ ಮಳೆಗೆ ಕೊಚ್ಚಿಹೋಗಿದ್ದ ವ್ಯಕ್ತಿಯ ಅಸ್ಥಿಪಂಜರ ಕಾಪುವಿನಲ್ಲಿ ಪತ್ತೆ-ಕಹಳೆ ನ್ಯೂಸ್

ಉಡುಪಿ : ಮಹಾಮಳೆಯ ಸಂದರ್ಭದಲ್ಲಿ ಕಾಣೆಯಾಗಿದ್ದ ವ್ಯಕ್ತಿಯೋರ್ವರ ಅಸ್ತಿ ಪಂಜರವು ಹೊಳೆಯ ಸಮೀಪ ಪತ್ತೆಯಾದ ಘಟನೆ ಕಾಪುವಿನಲ್ಲಿ ನಡೆದಿದೆ. ಮೃತರನ್ನು 72 ವರ್ಷದ ಶ್ರೀನಿವಾಸ ನಾಯ್ಕ ಎಂದು ಗುರುತಿಸಲಾಗಿದೆ. ಇವರು 2020 ರ ಜು. 03ರಂದು ಕೊಡಂಗಳ ವಿಷ್ಣುಮೂರ್ತಿ ದೇವಸ್ಥಾನದ ಸಮೀಪದಲ್ಲಿರುವ ಹೊಳೆಯ ಸೇತುವೆ ಬದಿಯಲ್ಲಿ ಕಾಣೆಯಾಗಿದ್ದವರು ಈವರೆಗೆ ಪತ್ತೆಯಾಗಿಲ್ಲ. ಆದರೆ ನಿನ್ನೆ ಬೆಳಿಗ್ಗೆ ಶ್ರೀನಿವಾಸ ಅವರ ಪತ್ನಿ ರತ್ನ ಎಂಬವರಿಗೆ ಸ್ಥಳೀಯರೊಬ್ಬರು ಕರೆಮಾಡಿ ಮಣಿಪುರದ ಮೂಡು ಕಲ್ಮಂಜೆ ಹೊಳೆಯ...
ಉಡುಪಿ

ಮನೆಯ ಎದುರು ನಿಲ್ಲಿಸಿದ್ದ ರಿಕ್ಷಾಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು-ಕಹಳೆ ನ್ಯೂಸ್

ಉಡುಪಿ : ಮನೆಯ ಎದುರು ನಿಲ್ಲಿಸಲಾದ ಅಟೋ ರಿಕ್ಷಾಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ 76ನೆ ಬಡಗುಬೆಟ್ಟು ಗ್ರಾಮದ ಬೈಲೂರು ಎನ್‍ಜಿಓ ಕಾಲನಿಯಲ್ಲಿ ನಡೆದಿದೆ. ಮನೆಯ ಗೇಟಿನ ಎದುರು ನಿಲ್ಲಿಸಿದ್ದ ಅಬ್ದುಲ್ ರಶೀದ್ ಎಂಬವರ ಅಟೋ ರಿಕ್ಷಾಕ್ಕೆ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಇದರಿಂದ ರಿಕ್ಷಾ ಸಂಪೂರ್ಣ ಸುಟ್ಟು ಹೋಗಿ ಸುಮಾರು 2,25,000ರೂ. ನಷ್ಟ ಉಂಟಾಗಿದೆ ಎನ್ನಲಾಗಿದೆ. ಇನ್ನು ಈ ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ...
ಉಡುಪಿ

ಉಡುಪಿಯ ಕಾಪುವಿನ ಮುದರಂಗಡಿಯಲ್ಲಿ ಆಕಸ್ಮಿಕವಾಗಿ ಜಾರಿ ಬಾವಿಗೆ ಬಿದ್ದು ಎರಡೂವರೆ ವರ್ಷದ ಮಗು ಮೃತ್ಯು-ಕಹಳೆ ನ್ಯೂಸ್

ಉಡುಪಿ : ಉಡುಪಿಯ ಕಾಪುವಿನ ಮುದರಂಗಡಿಯಲ್ಲಿ ಆಕಸ್ಮಿಕವಾಗಿ ಜಾರಿ ತೆರೆದ ಬಾವಿಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಏಪ್ರಿಲ್ 3 ರಂದು ಸಂಜೆ ನಡೆದಿದೆ. ಮೃತ ಮಗುವನ್ನು ಅದಮಾರಿನ ಜಯಲಕ್ಷ್ಮಿ ಮತ್ತು ಕೃಷ್ಣ ದಂಪತಿಗಳ ಪುತ್ರಿ ಪ್ರಿಯಾಂಕಾ ಎಂದು ಗುರುತಿಸಲಾಗಿದೆ. ಶನಿವಾರ, ಇವರ ಕುಟುಂಬವು ನಗರದಲ್ಲಿ ಮಾರುಕಟ್ಟೆಗೆ ಬಂದಿದ್ದು, ಈ ಸಂದರ್ಭದಲ್ಲಿ ಮಗು ಆಡುವಾಗ ಬಾವಿಗೆ ಬಿದ್ದಿದೆ ಎಂದು ಶಂಕಿಸಲಾಗಿದೆ. ಪೋಷಕರು ವಸ್ತುಗಳನ್ನು ಖರೀದಿ ಮಾಡುತ್ತಿದ್ದ ಅಂಗಡಿಯ...
ಉಡುಪಿ

ಮಲ್ಪೆ ಬೀಚ್‍ನಲ್ಲಿ ನಿಲ್ಲಿಸಿದ್ದ ಬೀಚ್ ಕ್ಲೀನಿಂಗ್ ಯಂತ್ರಕ್ಕೆ ಬಳಸುವ ಟ್ರ್ಯಾಕ್ಟರ್ ಅಗ್ನಿಗಾಹುತಿ-ಕಹಳೆ ನ್ಯೂಸ್

ಉಡುಪಿ : ಗುರುವಾರ ಮುಂಜಾನೆ ಸುಮಾರು 4 ಗಂಟೆಗೆ ಮಲ್ಪೆ ಬೀಚ್‍ನಲ್ಲಿ ನಿಲ್ಲಿಸಿದ್ದ ಬೀಚ್ ಕ್ಲೀನಿಂಗ್ ಯಂತ್ರಕ್ಕೆ ಬಳಸುವ ಟ್ರ್ಯಾಕ್ಟರ್ ಅಗ್ನಿಗಾಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಮಲ್ಪೆ ಬೀಚ್‍ನಲ್ಲಿರುವ ಕಸಗಳನ್ನು ತೆಗೆಯುವ ಯಂತ್ರವನ್ನು ಎಳೆದೊಯ್ಯುವ ಟ್ರ್ಯಾಕ್ಟರನ್ನು ಯಂತ್ರದೊಂದಿಗೆ ನಿಲ್ಲಿಸಲಾಗಿತ್ತು. ಆದರೆ ಗುರುವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಟ್ಯ್ರಾಕ್ಟರ್ ಅಗ್ನಿಗಾಹುತಿಯಾಗಿದೆ. ಇದು ಆಕಸ್ಮಿಕ ಘಟನೆಯೇ ಅಥವಾ ದುಷ್ಕರ್ಮಿಗಳ ಕೃತ್ಯವೇ ಎಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಇನ್ನು ಟ್ಯ್ರಾಕ್ಟರ್...
ಉಡುಪಿ

ಉಡುಪಿ ಬಸ್ಸಿನಲ್ಲಿ ಅನ್ಯಕೋಮಿನ ಯುವಕ ಹಾಗೂ ಹಿಂದೂ ಯುವತಿಯ ಸರಸಸಲ್ಲಾಪ; ಯುವಕ-ಯುವತಿಯನ್ನು ಪೋಲಿಸರಿಗೆ ಒಪ್ಪಿಸಿದ ಬಜರಂಗದಳ ಕಾರ್ಯಕರ್ತರು- ಕಹಳೆ ನ್ಯೂಸ್

ಉಡುಪಿ: ಉಡುಪಿಯಿಂದ ಮಂಗಳೂರಿಗೆ ಬರುವ ಬಸ್ಸಿನಲ್ಲಿ ಸರಸಸಲ್ಲಾಪದಲ್ಲಿ ನಿರತರಾಗಿದ್ದ ಅನ್ಯಕೋಮಿನ ಜೋಡಿಯನ್ನು ಸುರತ್ಕಲ್ ಬಳಿ ಬಸ್ ತಡೆದು ಬಜರಂಗದಳದ ಕಾರ್ಯಕರ್ತರು ಪೋಲೀಸರ ವಶಕ್ಕೆ ನೀಡಿದ ಘಟನೆ ವರದಿಯಾಗಿದೆ. ಹಿಂದು ಹೆಣ್ಣುಮಕ್ಕಳನ್ನು ಪುಸಲಾಯಿಸಿ ಲವ್ ಜಿಹಾದ್ ಮಾಡುತ್ತಿರುವ ಪ್ರಕರಣ ಮತ್ತೆ ಮತ್ತೆ ಮರುಕಳಿಸುತ್ತಿದ್ದು, ಇನ್ನು ಲವ್ ಜಿಹಾದ್ ನಿರಂತರವಾಗಿ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಮತ್ತೆ ಲವ್ ಜಿಹಾದ್ ಪ್ರಕರಣ ಕಂಡು ಬಂದರೆ ಮತ್ತೆ ನೇರ ಕಾರ್ಯಾಚರಣೆಯ...
ಉಡುಪಿ

ಉಡುಪಿಯ ಜಿಲ್ಲೆಯ ಇನ್ನಂಜೆಯಲ್ಲಿ ಆಟವಾಡುತ್ತಿದ್ದಂತೆ ಕುಸಿದು ಬಿದ್ದು ಕೊನೆಯುಸಿರೆಳೆದ ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ-ಕಹಳೆ ನ್ಯೂಸ್

ಉಡುಪಿ : ಉಡುಪಿಯ ಜಿಲ್ಲೆಯ ಇನ್ನಂಜೆಯಲ್ಲಿ ವಾಲಿಬಾಲ್ ಕೋರ್ಟ್‍ನ ಪಕ್ಕದಲ್ಲೇ ಅಭ್ಯಾಸ ನಡೆಸುತ್ತಿದ್ದ ಸಂದರ್ಭದಲ್ಲಿ ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ ಆಟವಾಡುತ್ತಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಆಟಗಾರ ಕುರ್ಕಾಲು ಸುಭಾಸ್ ನಗರ ನಿವಾಸಿ 33 ವರ್ಷದ ದೇವು ಯಾನೆ ದೇವರಾಜ್ ಎಂದು ಗುರುತಿಸಲಾಗಿದೆ. ಅವರು ಈ ಹಿಂದೆ ಕಲ್ಲು ಗಣಿಯೊಂದರಲ್ಲಿ ರೈಟರ್ ಆಗಿ ದುಡಿಯುತ್ತಿದ್ದರು. ಶನಿವಾರ ರಾತ್ರಿ ಇನ್ನಂಜೆಯಲ್ಲಿ ನಡೆಯುತ್ತಿದ್ದ ಇನ್ನಂಜೆ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ...
ಉಡುಪಿ

ಉಡುಪಿಯ ಮಠದಬೆಟ್ಟು ಎಂಬಲ್ಲಿ ಕಟ್ಟಡದ ಮೇಲಿನಿಂದ ಹಾರಿ ಪೆಟ್ರೋಲ್ ಬಂಕ್ ಮಾಲೀಕ ಆತ್ಮಹತ್ಯೆ-ಕಹಳೆ ನ್ಯೂಸ್

ಉಡುಪಿ : ಉಡುಪಿಯ ಮಠದಬೆಟ್ಟು ಎಂಬಲ್ಲಿ ನಿನ್ನೆ ಕಟ್ಟಡದ ಮೇಲಿನಿಂದ ಹಾರಿ ಪೆಟ್ರೋಲ್ ಬಂಕ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯನ್ನು 30 ವರ್ಷದ ಉತ್ತಮ್ ನಾಯಕ್ ಎಂದು ಗುರುತಿಸಲಾಗಿದೆ. ಇವರು ಆತ್ರಾಡಿಯಲ್ಲಿ ಪೆಟ್ರೋಲ್ ಬಂಕ್ ಮಾಲೀಕರಾಗಿದ್ದು, ನಾಲ್ಕೈದು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಅವರ ಪತ್ನಿ ಮುಂಬೈನಲ್ಲಿ ನೆಲೆಸಿದ್ದರು, ಮತ್ತು ಇವರು ಮಠದ ಬೆಟ್ಟುವಿನಲ್ಲಿರುವ ಫ್ಯ್ಲಾಟ್ ನ 3 ನೇ ಮಹಡಿಯಲ್ಲಿ ವಾಸವಾಗಿದ್ದರು. ಆದರೆ, ನಿನ್ನೆ...
ಉಡುಪಿ

ಉಡುಪಿಯಲ್ಲಿ ಕಾಡಹಂದಿ ಹಿಡಿಯಲು ಇಟ್ಟಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು-ಕಹಳೆ ನ್ಯೂಸ್

ಉಡುಪಿ : ಹಂದಿ ಹಿಡಿಯಲು ಇಟ್ಟಿದ್ದ ಉರುಳಿಗೆ ಚಿರತೆಯೊಂದು ಬಿದ್ದು ಸಾವನಪ್ಪಿರುವ ಘಟನೆ ಉಡುಪಿಯ ಹಿರೇಬೆಟ್ಟು ಗ್ರಾಮದ ಕಂಚಿನಬೈಲು ಎಂಬಲ್ಲಿ ನಡೆದಿದೆ. ಸರಕಾರಿ ಜಾಗದಲ್ಲಿ ಹಂದಿ ಹಿಡಿಯಲು ತಂತಿ ಉರುಳನ್ನು ಮರಕ್ಕೆ ಕಟ್ಟಲಾಗಿತ್ತು, ಆ ದಾರಿಯಲ್ಲಿ ಬಂದ ಚಿರತೆ ಉರುಳು ಕಾಣದೆ, ಮೇಲಿನಿಂದ ತಗ್ಗಿಗೆ ಇಳಿಯುವಾಗ ಉರುಳಿನಲ್ಲಿ ಸಿಕ್ಕಿ ಹಾಕಿಕೊಂಡಿದೆ. ಉರಳು ಸೊಂಟಕ್ಕೆ ಬಿಗಿದು, ಚಿರತೆ ತಗ್ಗಿನಲ್ಲಿ ನೇತಾಡುತ್ತಾ, ನೆಲ ಮುಟ್ಟುವುದಕ್ಕೆ ಶತಪ್ರಯತ್ನ ಮಾಡಿ, ಸಾಧ್ಯವಾಗದೇ ಒದ್ದಾಡುತ್ತಾ ಅಲ್ಲಿಯೇ ಪ್ರಾಣ...
1 113 114 115 116 117 123
Page 115 of 123