Tuesday, September 8, 2026

ಉಡುಪಿ

ಉಡುಪಿಸುದ್ದಿ

ವೋಟ್ ಚೋರಿ ಎಂದ ಮಹಾಘಟಬಂಧನಕ್ಕೆ ನಿಜವಾದ ಮರ್ಮಾಘಾತ – ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ಶ್ರೀನಿಧಿ ಹೆಗ್ಡೆ ಅಭಿಪ್ರಾಯ- ಕಹಳೆ ನ್ಯೂಸ್

ಉಡುಪಿ: ಬಿಹಾರ ವಿಧಾನಸಭಾ ಚುನಾವನೆಯಲ್ಲಿ ಬಿಜೆಪಿ, ಜೆಡಿಯು ಮತ್ತು ಎಲ್‌ಜೆಪಿ ಪಕ್ಷಗಳ ಮೈತ್ರಿಕೂಟ ಎನ್‌ಡಿಎ ಭರ್ಜರಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌ನ ಮಹಾಘಟಬಂಧನಕ್ಕೆ ಸ್ಪಷ್ಟವಾದ ಕೊಡಲಿಯೇಟು ನೀಡಿದೆ. ಕಾಂಗ್ರೆಸ್ ನೀಡಿದ ಖಾಲಿ ಭರವಸೆಗಳು ಮತ್ತು ಜನರನ್ನು ಮೋಸಗೊಳಿಸುವ ಪೊಳ್ಳು ಗ್ಯಾರಂಟಿಯ ರಾಜಕೀಯವನ್ನು ಬಿಹಾರದ ಮತದಾರರು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ತಿಳಿಸಿದ್ದಾರೆ. ಬುದ್ಧನ ತವರಾದ ಬಿಹಾರದಲ್ಲಿ ಈ ಬಾರಿ ದಾಖಲೆ ಮಟ್ಟದ...
ಉಡುಪಿಜಿಲ್ಲೆಸುದ್ದಿ

‘ಭಗವದ್ಗೀತೆಯಲ್ಲಿ‌ ಜೀವನ ಪಾಠವಿದೆ’ – ಕಹಳೆ ನ್ಯೂಸ್

ಉಡುಪಿ: ಶ್ರೀಕೃಷ್ಣನ ಸಂದೇಶವಿರುವ ಭಗವದ್ಗೀತೆಯಲ್ಲಿ‌ ಜೀವನ ಪಾಠವಿದೆ. ಅದು ನಮ್ಮ ಎಲ್ಲ ಸಮಸ್ಯೆಗಳಿಗೆ ಉತ್ತರ ನೀಡಬಲ್ಲುದು ಎಂದು ಒಡಿಯೂರು ಗುರುದೇವ ದತ್ತ ಸಂಸ್ಥಾನದ ಗುರು ದೇವಾನಂದ ಸ್ವಾಮೀಜಿ ‌ಹೇಳಿದರು. ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ಶುಕ್ರವಾರ ನಡೆದ ಸಂತ ಸಂದೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತ್ಯಾಗಮಯ‌ ಜೀವನ ನಮ್ಮದಾಗಬೇಕು. ವ್ಯಕ್ತಿಯ ಬೆಳವಣಿಗೆಗೆ ಭಗವದನುಗ್ರಹ‌ ಅಗತ್ಯ ಎಂದರು. ಪರ್ಯಾಯ ಪುತ್ತಿಗೆ ‌ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಮಾತನಾಡಿ,...
ಉಡುಪಿಕಾರ್ಕಳಜಿಲ್ಲೆಸಂತಾಪಸುದ್ದಿ

ಕಾರ್ಕಳ: ಅಮ್ಮ ಹೊಸ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕೆ ಮಗ ಆತ್ಮಹತ್ಯೆ !-ಕಹಳೆ ನ್ಯೂಸ್

ಕಾರ್ಕಳ : ಅಮ್ಮ ಹೊಸ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕಾಗಿ ನಿಟ್ಟೆಯ ಪ್ರಥಮ ಪಿಯುಸಿ ವಿದ್ಯಾರ್ಥಿ ಸುಮಂತ್ ನಂದಳಿಕೆ (16) ನೀರು ನಿಂತಿದ್ದ ಕಲ್ಲುಕೋರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಮಂತ್‌ನ ಮೊಬೈಲ್‌ ಅನ್ನು ದುರಸ್ತಿಗೆ ನೀಡಲಾಗಿದ್ದು, ಹೊಸ ಮೊಬೈಲ್ ಕೊಡಿಸುವಂತೆ ಅಮ್ಮನಲ್ಲಿ ಹಠ ಹಿಡಿದಿದ್ದ. ಕೆಲ ತಿಂಗಳು ಕಳೆದ ಬಳಿಕ ಹೊಸ ಮೊಬೈಲ್ ಕೊಡಿಸುವುದಾಗಿ ಅಮ್ಮ ಸುರೇಖಾ ಭರವಸೆ ನೀಡಿದ್ದಾಗ್ಯೂ ಆತ ಮನೆಬಿಟ್ಟು ತೆರಳಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ....
ಉಡುಪಿಕಾಪುಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಶ್ರೀ ವಿಷ್ಣುಮೂರ್ತಿ ಹಯವದನ ಸ್ವಾಮಿ ಪದವಿ ಪೂರ್ವ ಕಾಲೇಜು ಇನ್ನಂಜ್ ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಶ್ರೀ ವಿಷ್ಣುಮೂರ್ತಿ ಹಯವದನ ಸ್ವಾಮಿ ಪದವಿ ಪೂರ್ವ ಕಾಲೇಜು ಇನ್ನಂಜ್ ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ರಾಜೇಂದ್ರ ಪ್ರಭು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಕೇಶ್ ಕುಂಜುರು ಪತ್ರಕರ್ತರು ಕಾಪು ತಾಲೂಕು ಇವರು ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿ ಗಳ ಪಾತ್ರದ ಬಗ್ಗೆ ತಿಳಿಸುತ್ತಾ,ಮದ್ಯಪಾನ , ದುಮಪಾನ, ಡ್ರಗ್ಸ್,...
ಉಡುಪಿಜಿಲ್ಲೆಸುದ್ದಿ

ಓಬವ್ವ ಬದುಕು ಪ್ರೇರಣೆಯಾಗಲಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ಉಡುಪಿ: ಮಾತೃಭೂಮಿಗಾಗಿ ಒನಕೆ ಹಿಡಿದು ಶತ್ರುಗಳನ್ನು ಸದೆಬಡಿದು ರಾಜ್ಯದ ರಕ್ಷಣೆ ಮಾಡಿದ್ದ ಓಬವ್ವರ ತ್ಯಾಗ, ದೇಶ ಪ್ರೇಮ, ನಿಷ್ಠೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮಣಿಪಾಲದ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಒನಕೆ ಓಬವ್ವ ಆತ್ಮರಕ್ಷಣೆಯ ಪ್ರತೀಕ. ಆಕೆಯ ತ್ಯಾಗ, ಬಲಿದಾನ,...
ಉಡುಪಿಸುದ್ದಿ

ಇತಿಹಾಸ ಪ್ರಸಿದ್ಧ ನಡಿಬೆಟ್ಟು ಸೂರ್ಯ ಚಂದ್ರ ಕಂಬಳ ಸಂಪನ್ನ- ಕಹಳೆ ನ್ಯೂಸ್

ಶಿರ್ವ: ಇತಿಹಾಸ ಪ್ರಸಿದ್ಧ ನಡಿಬೆಟ್ಟು ಸೂರ್ಯ ಚಂದ್ರ ಜೋಡುಕರೆ ಸಾಂಪ್ರದಾಯಿಕ ಕಂಬಳ ಸಂಪನ್ನಗೊಂಡಿತು. ಎಲ್ಲೂರು ವಿಶ್ವೇಶ್ವರ ದೇವಳದ ಮಾಜಿ ಆಡಳಿತ ಮೊಕ್ತೇಸರ ಎಲ್ಲೂರುಗುತ್ತು ಪ್ರಫುಲ್ಲ ಶೆಟ್ಟಿ ದೀಪ ಬೆಳಗಿಸಿ, ಕಾಯಿ ಒಡೆದು ಚಾಲನೆ ನೀಡಿದರು. ನಡಿಬೆಟ್ಟು ಚಾವಡಿಯ ಜುಮಾದಿ ದೈವಕ್ಕೆ ಪೂಜೆ, ಬಳಿಕ ಬಂಟಕೋಲ ನಡೆದು ಮೆರವಣಿಗೆಯಲ್ಲಿ ಡೋಲು, ಕೊಂಬು ವಾದ್ಯ ಘೋಷದೊಂದಿಗೆ ಕೋಣಗಳನ್ನು ಗದ್ದೆಗೆ ಇಳಿಸಲಾಯಿತು. ಹಗ್ಗ ಕಿರಿಯ ವಿಭಾಗದಲ್ಲಿ 50 ಜತೆ ಕೋಣಗಳು, ಹಿರಿಯ ವಿಭಾಗದಲ್ಲಿ 100 ಜತೆ...
ಉಡುಪಿಜಿಲ್ಲೆಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷರಾಗಿ ಸುಜಿ ಕುರ್ಯ ಪ್ರ.ಕಾರ್ಯದರ್ಶಿಯಾಗಿ ನಝೀರ್ ಪೊಲ್ಯ, ಕೋಶಾಧಿಕಾರಿಯಾಗಿ ಹರೀಶ್ ಆಯ್ಕೆ – ಕಹಳೆ ನ್ಯೂಸ್

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆಯ ಉಡುಪಿ ಜಿಲ್ಲಾ ಹಿರಿಯ ವರದಿಗಾರ ಸುಬ್ರಹ್ಮಣ್ಯ ಜಿ.ಭಟ್(ಸುಜಿ ಕುರ್ಯ), ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರ ನಝೀರ್ ಪೊಲ್ಯ ಹಾಗೂ ಕೋಶಾಧಿಕಾರಿಯಾಗಿ ಸುವರ್ಣ ಚಾನೆಲ್ ಉಡುಪಿ ಜಿಲ್ಲಾ ವಿಡಿಯೋ ಜರ್ನಲಿಸ್ಟ್ ಹರೀಶ್ ಕುಂದರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-2028ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಈ ಆಯ್ಕೆ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ನ. 28: ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಭೇಟಿ… ಜಿಲ್ಲಾಡಳಿತದಿಂದ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಮಣಿಪಾಲ : ಉಡುಪಿ ಶ್ರೀಕೃಷ್ಣ ಮಠದಲ್ಲಿ ಬೃಹತ್ ‌ ಗೀತೋತ್ಸವದ ನಿಮಿತ್ತ ನ . 28 ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬರಲಿದ್ದು , ಆ ಸಂಬಂಧ ಜಿಲ್ಲಾಡಳಿತ , ಪೊಲೀಸ್ ‌ ಇಲಾಖೆಯಿಂದ ನಡೆಯುತ್ತಿರುವ ಸಿದ್ಧತೆಗಳ ಬಗ್ಗೆ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳ ಸಭೆ ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು . ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ...
1 10 11 12 13 14 124
Page 12 of 124