Friday, July 24, 2026

ಉಡುಪಿ

ಉಡುಪಿಸುದ್ದಿ

ಮಲ್ಪೆ: ಕಡಲ ಕಿನಾರೆ ಬಳಿ ಸಿದ್ದವಾಗುತ್ತಿದೆ ಸುಂದರ ಉದ್ಯಾನವನ, ಬಯಲು ರಂಗ ಮಂದಿರ-ಕಹಳೆ ನ್ಯೂಸ್

 ಉಡುಪಿ ಜಿಲ್ಲೆಯ ಮಲ್ಪೆ ಸೀವಾಕ್‌ ವೇ ಸಮೀಪ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮಲ್ಪೆ ಬೀಚ್‌ ಅಭಿವೃದ್ಧಿ ಸಮಿತಿಯ ಅನುದಾನದಲ್ಲಿ ಸುಮಾರು 2 ಕೋ.ರೂ. ವೆಚ್ಚದಲ್ಲಿ ಸುಂದರ ಕಲಾಕೃತಿಗಳೊಂದಿಗೆ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿದ್ದು, ಈಗಾಗಲೇ ಭರದಿಂದ ಕೆಲಸಗಳು ಸಾಗುತ್ತಿದೆ. ಸುಮಾರು 600 ಮೀ. ಪ್ರದೇಶದಲ್ಲಿ ಅಭಿವೃದ್ಧಿ ಕೆಲಸಗಳಾಗುತ್ತಿವೆ. ಇಲ್ಲಿ ಪ್ರಮುಖವಾಗಿ ಜಟಾಯು ಪ್ರತಿಮೆ ಪ್ರವಾಸಿಗರನ್ನು ಆಕರ್ಷಿಸಲಿದೆ. ಸುಮಾರು 15 ಅಡಿಗಳ ಎತ್ತರವಿರುವ ಸಿಮೆಂಟ್‌ ಕಲಾಕೃತಿಯ ಜಟಾಯು ಪ್ರತಿಮೆಯನ್ನು ಕಲಾವಿದ ಪುರುಷೋತ್ತಮ ಅಡ್ವೆ...
ಉಡುಪಿ

ತನ್ನೂರನ್ನು ಬೆಳಗುತ್ತಿರುವ ಉಡುಪಿ ಎಂಬಿಎ ಪದವೀಧರೆ -ಕಹಳೆ ನ್ಯೂಸ್

ಎಂಬಿಎ ಪದವಿ ಪಡೆದ ಈ ಯುವತಿಗೆ ಮುಂಬೈ‌ನಲ್ಲಿ ಕಾರ್ಪೋರೇಟ್ ಕಂಪೆನಿಯಲ್ಲಿ‌ ಕೈತುಂಬಾ ಸಂಬಳ ಬರುವ ಉದ್ಯೋಗ ಇತ್ತು. ಆದರೆ ತನ್ನೂರಿನ "ಉಡುಪಿ ಸೀರೆ" ಯನ್ನು ಉಳಿಸಿ ಬೆಳಸಬೇಕು ಅಂತ ಪಣತೊಟ್ಟಿರುವ ಯುವತಿ, ಮಗ್ಗದ ಸೀರೆಗೆ ಮಾರ್ಡನ್ ವಿನ್ಯಾಸ ರೂಪಿಸಿ, ಆನ್​​ಲೈನ್ನಲ್ಲಿ ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಇಷ್ಟೇ ಅಲ್ಲ ತನ್ನೂರಿನ ನೇಕಾರನ್ನು ಸೇರಿಸಿ ಪಾರಂಪರಿಕ ಉಡುಪಿ ಸೀರೆಗೆ ಮಾಡರ್ನ್ ಟಚ್ ನೀಡುತ್ತಿದ್ದಾರೆ. ಇವರ ಹೆಸರು ಮಹಾಲಸ ಕಿಣಿ. ಉಡುಪಿ ಜಿಲ್ಲೆಯ ಮಣಿಪಾಲ ನಿವಾಸಿಯಾಗಿರುವ...
ಉಡುಪಿಸುದ್ದಿ

ಮಲ್ಪೆ ಮೀನುಗಾರರ ಬಲೆಗೆ ಬಿತ್ತು 750 ಕೆ.ಜಿ ತೂಕದ ಮೀನು -ಕಹಳೆ ನ್ಯೂಸ್

 ಉಡುಪಿ ಜಿಲ್ಲೆ ಮಲ್ಪೆಯ ಸರ್ವ ಋತು ಬಂದರಿನಲ್ಲಿ ಆಗಾಗ ಅಪರೂಪದ ಮೀನುಗಳು ಬಲೆಗೆ ಬೀಳುವುದುಂಟು. ಕೆಲವೊಮ್ಮೆ ಭಾರೀ ಗಾತ್ರದ ಮೀನುಗಳು ಬಲೆಗೆ ಬಿದ್ದರೆ, ಇನ್ನು ಕೆಲವೊಮ್ಮೆ ಅಪರೂಪದ, ವಿಚಿತ್ರ ಮೀನುಗಳು ಸಿಕ್ಕಿ ಗಮನ ಸೆಳೆಯುತ್ತವೆ. ಆದರೆ ಮಲ್ಪೆ ಮೀನುಗಾರರಿಗೆ ಬುಧವಾರ ಸಿಕ್ಕ ಮೀನು ಮಾತ್ರ ಬಲು ಅಪರೂಪವಾಗಿದ್ದು ಮಾತ್ರವಲ್ಲ, ಗಾತ್ರದಲ್ಲೂ ದಾಖಲೆ ನಿರ್ಮಿಸಿದೆ. ಈ ಮೀನನ್ನು ಕರಾವಳಿಗರು ತೊರಕೆ ಮೀನು ಎನ್ನುತ್ತಾರೆ. ಬಹಳ ರುಚಿಯಾದ ಮೀನಿದು, ಇಂದು ಸಿಕ್ಕಿದ ಮೀನು...
ಉಡುಪಿಕಾಸರಗೋಡುದಕ್ಷಿಣ ಕನ್ನಡ

ತುಳುನಾಡ್ದಕಲೆಗ್ ತುಳು ಬಾಸೆಡ್ ಶಿಕ್ಷಣ ಕೊರೊಡು ಪಂದ್ ನಮ ಹಕ್ಕೊತ್ತಾಯ ಮಲ್ಪುಗ ಆಗಸ್ಟ್ 16 ತಾರೀಕ್ ಐತಾರೊದಾನಿ ಕಾಂಡೆ 6 ಗಂಟೆರ್ದ್ ರಾತ್ರೆ 12 ಗಂಟೆ ಮುಟ್ಟ ಟ್ವೀಟ್ ತುಳುನಾಡ್ ಅಭಿಯಾನ-ಕಹಳೆ ನ್ಯೂಸ್

ಕೇಂದ್ರ ಸರಕಾರ ಕಂದಿನಂಚಿನ ರಾಷ್ಟ್ರೀಯ ಶಿಕ್ಷಣ ನೀತಿಡ್ ಪ್ರತಿಯೊರಿಯಗ್ಲಾ ಅಪ್ಪೆ ಬಾಸೆಡ್ ಅತ್ತ್ಂಡ ಪ್ರಾದೇಶಿಕ ಬಾಸೆಡ್ ಶಿಕ್ಷಣ ಕೊರೊಡುಂದು ಪಂದ್ ಉಂಡು. ಅಂಚಾದ್ ತುಳುನಾಡ್ದಕಲೆಗ್ ತುಳು ಬಾಸೆಡ್ ಶಿಕ್ಷಣ ಕೊರೊಡು ಪಂದ್ ನಮ ಹಕ್ಕೊತ್ತಾಯ ಮಲ್ಪುಗ ಜನಜಾಗೃತಿ ಮಲ್ಪುಗ. ಈ ದಿಟ್ಟಿಡ್ ಆಗಸ್ಟ್ 16 ತಾರೀಕ್ ಐತಾರೊದಾನಿ ಕಾಂಡೆ 6 ಗಂಟೆರ್ದ್ ರಾತ್ರೆ 12 ಗಂಟೆ ಮುಟ್ಟ ಟ್ವೀಟ್ ತುಳುನಾಡ್ ಅಭಿಯಾನ ನಡಪರೆ ಉಂಡು ಈ ಅಭಿಯಾನೊಡು #EducationInTulu ಪನ್ಪಿನ...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ; ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ವರುಣನ ಆರ್ಭಟ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಚನ್ನಬಸವನಗೌಡ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಮಳೆಯ ತೀವ್ರತೆಯ ಮುನ್ಸೂಚನೆ ನೀಡಿದ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆಉತ್ತರ ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಶಿವಮೊಗ್ಗ , ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಗಳಲ್ಲೂ ಭಾರೀ...
ಉಡುಪಿರಾಜ್ಯಸುದ್ದಿ

ಶ್ರೀಕೃಷ್ಣನ ಅನುಗ್ರಹದಿಂದ ಕೊರೊನಾ ಗೆದ್ದುಬಂದ ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ; ಶ್ರೀಗಳು ಫೀಟ್ ಆಂಡ್ ಫೈನ್ – ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ – ಕಹಳೆ ನ್ಯೂಸ್

ಉಡುಪಿ, ಆ. 02 : ಕೊರೊನಾ ಸೋಂಕು ದೃಢಪಟ್ಟಿದ್ದ ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು 12 ದಿನಗಳ ಚಿಕಿತ್ಸೆ ಪಡೆದ ಬಳಿಕ ಆಗಸ್ಟ್ 1 ರ ಶನಿವಾರ ಇಲ್ಲಿನ ಕೆಎಂಸಿ ಮಣಿಪಾಲದಿಂದ ಬಿಡುಗಡೆ ಆಗಿದ್ದಾರೆ. ಕೊರೊನಾ ಸೋಂಕು ಲಕ್ಷಣ ಕಾರಣ ಜುಲೈ 21 ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಸ್ಪತ್ರೆಯಲ್ಲಿಯೂ ಅವರು ತಮ್ಮ ನಿತ್ಯ ಪೂಜೆಗಳನ್ನು ಮಾಡುತ್ತಿದ್ದರು. ತಮ್ಮ ವಾರ್ಷಿಕ ಚಾರ್ತುಮಾಸ ವ್ರತವನ್ನು ಆಸ್ಪತ್ರೆಯಲ್ಲಿಯೂ ಮಾಡುತ್ತಿದ್ದರು. ಈಗ ಅವರು...
ಉಡುಪಿರಾಷ್ಟ್ರೀಯ

‘ ರಾಮ ಮಂದಿರ ಭೂಮಿ ಪೂಜೆಯನ್ನು ಹಬ್ಬವಾಗಿ ಆಚರಿಸೋಣ’ ; ಸುದ್ದಿಗೋಷ್ಠಿಯಲ್ಲಿ ಪೇಜಾವರ ಸ್ವಾಮೀಜಿ – ಕಹಳೆ ನ್ಯೂಸ್

ಉಡುಪಿ, ಆ. 02 : ''ಅಯೋಧ್ಯೆಯಲ್ಲಿರುವ ರಾಮ ಮಂದಿರವು ಇಡೀ ಹಿಂದೂ ಸಮಾಜದ ಕನಸಾಗಿದ್ದು ಆಗಸ್ಟ್ 5 ರಂದು ನಡೆಯುವ ಭವ್ಯ ದೇವಾಲಯದ ಭೂಮಿ ಪೂಜೆಯ ಸಮಾರಂಭವನ್ನು ಪ್ರತಿಯೊಬ್ಬರು ಹಬ್ಬವಾಗಿ ಆಚರಿಸಬೇಕು'' ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಕರೆ ನೀಡಿದ್ದಾರೆ.       "ಭಗವಂತ ರಾಮನ ಆರಾಧನೆಯನ್ನು ನಾವು ಮುಂದುವರೆಸಬೇಕು. ಕೊರೊನಾ ಪರಿಸ್ಥಿತಿಯ ಸಂದರ್ಭದಲ್ಲಿಯೂ...
ಉಡುಪಿದಕ್ಷಿಣ ಕನ್ನಡ

ದ.ಕ. ಜಿಲ್ಲೆಯಲ್ಲಿ 139 ;ಉಡುಪಿಯಲ್ಲಿ ಮತ್ತೆ 136 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿದ್ದು ಇಂದು 139 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,852 ಕ್ಕೆ ಏರಿಕೆಯಾಗಿದೆ. ಇನ್ನು ಶನಿವಾರ 6 ಕೊರೊನಾ ಸಾವುಗಳು ವರದಿಯಾಗಿದ್ದು ಜಿಲ್ಲೆಯಲ್ಲಿ ಈವರೆಗೆ 159 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 54 ಮಂದಿ ಗುಣಮುಖರಾಗಿದ್ದು ಈವರೆಗೆ 2685 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 3008 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಮಂಗಳೂರಿನಲ್ಲಿ 91, ಬಂಟ್ವಾಳದಲ್ಲಿ...
1 118 119 120 121 122 123
Page 120 of 123