ಮಲ್ಪೆ: ಕಡಲ ಕಿನಾರೆ ಬಳಿ ಸಿದ್ದವಾಗುತ್ತಿದೆ ಸುಂದರ ಉದ್ಯಾನವನ, ಬಯಲು ರಂಗ ಮಂದಿರ-ಕಹಳೆ ನ್ಯೂಸ್
ಉಡುಪಿ ಜಿಲ್ಲೆಯ ಮಲ್ಪೆ ಸೀವಾಕ್ ವೇ ಸಮೀಪ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯ ಅನುದಾನದಲ್ಲಿ ಸುಮಾರು 2 ಕೋ.ರೂ. ವೆಚ್ಚದಲ್ಲಿ ಸುಂದರ ಕಲಾಕೃತಿಗಳೊಂದಿಗೆ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿದ್ದು, ಈಗಾಗಲೇ ಭರದಿಂದ ಕೆಲಸಗಳು ಸಾಗುತ್ತಿದೆ. ಸುಮಾರು 600 ಮೀ. ಪ್ರದೇಶದಲ್ಲಿ ಅಭಿವೃದ್ಧಿ ಕೆಲಸಗಳಾಗುತ್ತಿವೆ. ಇಲ್ಲಿ ಪ್ರಮುಖವಾಗಿ ಜಟಾಯು ಪ್ರತಿಮೆ ಪ್ರವಾಸಿಗರನ್ನು ಆಕರ್ಷಿಸಲಿದೆ. ಸುಮಾರು 15 ಅಡಿಗಳ ಎತ್ತರವಿರುವ ಸಿಮೆಂಟ್ ಕಲಾಕೃತಿಯ ಜಟಾಯು ಪ್ರತಿಮೆಯನ್ನು ಕಲಾವಿದ ಪುರುಷೋತ್ತಮ ಅಡ್ವೆ...







