ಮೀನುಗಾರರು ಸುರಕ್ಷತೆಗೆ ಒತ್ತು ನೀಡಿ: ಲಕ್ಷ್ಮಿ ಹೆಬ್ಬಾಳಕರ -ಕಹಳೆ ನ್ಯೂಸ್
ಉಡುಪಿ: 'ನಿಮ್ಮ ಸುರಕ್ಷತೆ ನಿಮ್ಮ ಜವಾಬ್ದಾರಿ ಎಂದು ಅರಿತುಕೊಂಡು ಮೀನುಗಾರರು ಮೀನುಗಾರಿಕೆಗೆ ತೆರಳುವ ವೇಳೆ ತಪ್ಪದೆ ಜೀವ ರಕ್ಷಕ ಸಾಧನಗಳನ್ನು ಬಳಸಬೇಕು. ಕುಟುಂಬದ ಜವಾಬ್ದಾರಿ ನಿಮ್ಮ ಹೆಗಲ ಮೇಲಿರುತ್ತದೆ, ಅವರನ್ನು ಅನಾಥರನ್ನಾಗಿಸಬೇಡಿ' ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಜಿಲ್ಲಾಡಳಿತ ಮತ್ತು ಮೀನುಗಾರಿಕೆ ಇಲಾಖೆ ವತಿಯಿಂದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ 'ಮೀನುಗಾರಿಕೆಯಲ್ಲಿ ಜೀವರಕ್ಷಕ ಸಾಧನಗಳ ಪ್ರಾಮುಖ್ಯತೆ' ಕುರಿತು ಗುರುವಾರ ಹಮ್ಮಿಕೊಂಡಿದ್ದ...







