Recent Posts

Saturday, April 25, 2026

ಉಡುಪಿ

ಉಡುಪಿಕುಂದಾಪುರಜಿಲ್ಲೆಸುದ್ದಿ

ನಮ್ಮ ಸುತ್ತಲಿನ ಪರಿಸರವನ್ನು ಹಸಿರುಗೊಳಿಸುವುದರಿಂದ ಮಾತ್ರ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು: ಶಾಸಕ ಎ.ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ : ವಿಜಯ ಕರ್ನಾಟಕ ಐಎಂಜೆ ಇನ್ಸ್ಟಿ ಟ್ಯೂಷನ್ಸ್ ಮೂಡ್ಲಕಟ್ಟೆ ಕರ್ನಾಟಕ ಅರಣ್ಯ ಇಲಾಖೆ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮೂಡ್ಲಕಟ್ಟೆ ಎಂ.ಐ.ಟಿ. ಆವರಣದಲ್ಲಿ ಸಸಿ ನೆಡುವ ಮೂಲಕ ದೀಪವನ್ನು ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಪರಿಸರ ದಿನಾಚರಣೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ನಮ್ಮ ಸುತ್ತಲಿನ ಪರಿಸರವನ್ನು ಹಸಿರುಗೊಳಿಸುವುದರಿಂದ ಮಾತ್ರ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು. ಗಿಡ...
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಓರಿಯೆಂಟೇಶನ್ ಕಾರ್ಯಕ್ರಮ ; ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ;ಸಿಎ ದೀಪಿಕಾ ವಸನಿ -ಕಹಳೆ ನ್ಯೂಸ್

ಕುಂದಾಪುರ : ಯಡಾಡಿ-ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಜುಲೈ 28ರಂದು ಸಿಎ ಹಾಗೂ ಸಿಎಸ್ ಫೌಂಡೇಶನ್ ಕೋರ್ಸ್ನ ಓರಿಯೆಂಟೇಶನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕೆ.ವಿ.ಸಿ ಸಂಸ್ಥೆಯ ಸಿ.ಎ. ದೀಪಿಕಾ ವಸನಿಯವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಪ್ರತಾಪ್ಚಂದ್ರ ಶೆಟ್ಟಿ ಮತ್ತು ಖಜಾಂಚಿ ಭರತ್ ಶೆಟ್ಟಿ, ಮಂಗಳೂರಿನ ಕೆ.ವಿ.ಸಿ ಅಕಾಡೆಮಿಯ ನಿರ್ದೇಶಕರಾದ ಸಿಎ ಜೇಸನ್ ಕ್ಯಾಸ್ತಲಿನೊ,...
ಉಡುಪಿಜಿಲ್ಲೆಸುದ್ದಿ

ಅಮೆರಿಕಾದ ಬೋಸ್ಟನ್ ನಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಯ್ಕೆ – ಕಹಳೆ ನ್ಯೂಸ್

ಉಡುಪಿ : ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಅಮೆರಿಕಾದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಪ್ರಥಮ ಬಾರಿಗೆ ಆಯ್ಕೆಯಾಗಿರುವ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಅವಕಾಶ ಪಡೆದಿದ್ದಾರೆ. ಕರ್ನಾಟಕದ ವಿಧಾನಸಭೆಯ 224 ಸದಸ್ಯರುಗಳಲ್ಲಿ 14 ಶಾಸಕರು ಆಯ್ಕೆಯಾಗಿದ್ದು ಅದರಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕೂಡ...
ಉಡುಪಿಜಿಲ್ಲೆಸುದ್ದಿ

ಧಾರಾಕಾರ ಮಳೆಗೆ ಮನೆ ಕುಸಿತ ಮನೆ ಮಂದಿ ಅಪಾಯದಿಂದ ಪಾರು : ಸ್ಥಳಕ್ಕೆ ಶಾಸಕ ಎ.ಕಿರಣ್ ಕೊಡ್ಗಿ ಬೇಟಿ -ಕಹಳೆ ನ್ಯೂಸ್

ಕೋಟ: ಕಳೆದ ರಾತ್ರಿಯಿಂದ ಧಾರಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನಲೆ ಮನೆ ಕುಸಿತವಾಗಿರುವ ಘಟನೆ ಕೋಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಿಳಿಯಾರಿನ ಹರ್ತಟ್ಟು ನಿವಾಸಿ ಸೀತಾರಾಮ್ ದೇವಾಡಿಗ ಅವರ ಮನೆ ಮಳೆಗೆ ಸಂಪೂರ್ಣ ನೆಲಸಮವಾಗಿದ್ದು ಸ್ಥಳಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿ ಮನೆ ಕುಸಿತದಿಂದ ಮನೆಯಲ್ಲಿ ಇದ್ದ ವಸ್ತುಗಳು ಸಂಪೂರ್ಣ ಹಾನಿಯಾಗಿದ್ದು ಅದೃಷ್ಟವಶಾತ್ ಮನೆಯವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ‌. ಮಳೆಯ ಅವಘಡದಿಂದ ಮನೆ ಕಳೆದುಕೊಂಡ...
ಉಡುಪಿಜಿಲ್ಲೆಸುದ್ದಿ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಆ.1ರಿಂದ 48 ದಿನಗಳ ಜನ್ಮಾಷ್ಟಮಿ ಮಂಡಲೋತ್ಸವ -ಕಹಳೆ ನ್ಯೂಸ್

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠವು ಈ ವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅದ್ಧೂರಿಯಾಗಿ ಆಚರಿಸಲಿದ್ದು, ಆಗಸ್ಟ್ 1 ರಿಂದ ಸೆಪ್ಟೆಂಬರ್ 17 ರವರೆಗೆ 48 ದಿನಗಳ ಕಾಲ ಉತ್ಸವಗಳು ನಡೆಯಲಿವೆ. ಜುಲೈ 23 ರಂದು ಗೀತಾ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪುತ್ತಿಗೆ ಮಠದ ಪರ್ಯಾಯ ಪೀಠಾಧಿಪತಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು, ಮೊದಲ ಬಾರಿಗೆ ಎರಡು ಜನ್ಮಾಷ್ಟಮಿ ದಿನಾಂಕಗಳು-ಚಂದ್ರ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಸೆಪ್ಟೆಂಬರ್ 15...
ಉಡುಪಿಜಿಲ್ಲೆಸುದ್ದಿ

ಸಹಕಾರಿ ಲೆಕ್ಕಪರಿಶೋಧನ ಇಲಾಖೆಯ ಉಪನಿರ್ದೇಶಕಿ ರೇಣುಕಾ ಸಹಿತ ಇಬ್ಬರು ಲೋಕಾಯುಕ್ತ ಬಲೆಗೆ -ಕಹಳೆ ನ್ಯೂಸ್

ಉಡುಪಿ : ಸೌಹಾರ್ದ ಸಹಕಾರ ಸಂಘದ ಆಡಳಿತ ಚುನಾವಣೆಯ ನಡೆಸಿಕೊಡಲು ಲಂಚದ ಬೇಡಿಕೆ ಇಟ್ಟ ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪ ನಿರ್ದೇಶಕಿ ರೇಣುಕಾ ಹಾಗೂ ಪ್ರಥಮ ದರ್ಜೆ ಸಹಾಯಕ ಜಯರಾಮ್ ಅವರನ್ನು ಜು.24ರಂದು ಉಡುಪಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಸೌಹಾರ್ದ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ಮಾಡಿ ಕೊಡಲು ತಲಾ 5000 ರಂತೆ ಒಟ್ಟು 10,000ರೂ ಲಂಚಕ್ಕೆ ಬೇಡಿಕೆ ಆರೋಪಿಗಳು ಇಟ್ಟಿದ್ದರು. ಈ...
ಉಡುಪಿಜಿಲ್ಲೆಸುದ್ದಿ

ನಿವೇಶನ ರಹಿತರಿಗೆ ನಿವೇಶನ ಮಂಜೂರುಗೊಳಿಸಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ -ಕಹಳೆನ್ಯೂಸ್

ಕಾಪು : ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ನಿವೇಶನ ಗುರುತಿಸಿ, ನಿವೇಶನ ರಹಿತರಿಗೆ ನಿವೇಶನ ಮಂಜೂರು ಮಾಡಬೇಕು ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಕಾಪು ತಾಲ್ಲೂಕಿನ 16 ಗ್ರಾಮ ಪಂಚಾಯಿತಿ ಹಾಗೂ ಕಾಪು ಪುರಸಭೆ ವ್ಯಾಪ್ತಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಶನಿವಾರ ತಹಶೀಲ್ದಾರ್‌ರ ಕಚೇರಿಯಲ್ಲಿ ಸಭೆ ನಡೆಸಿದರು. ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡುವ ಬಗ್ಗೆ...
ಉಡುಪಿಸುದ್ದಿ

ಉಡುಪಿಯ ಕಲಾಲೋಕದ ಆಡುಂಬೊಲವಾಗಿರುವ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜು. 25 ಮತ್ತು 26ರಂದು  “ಸಂಸ್ಕೃತಿ ಸಂಭ್ರಮ”ದ ಸಡಗರ-ಕಹಳೆ ನ್ಯೂಸ್

ಉಡುಪಿ : ಕರಾವಳಿಯ ಉಡುಪಿ ನಗರದೊಳಗೆ ಅಷಾಢದ ಮಳೆಯ ನಡುವೆ ಸಂಸ್ಕೃತಿ ಸಂಭ್ರಮದ ರಂಗೇರುತ್ತಿದೆ. ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡಮಿ, ಕರ್ನಾಟಕ ಜಾನಪದ ಅಕಾಡಮಿ ಮತ್ತು ಕರ್ನಾಟಕ ನಾಟಕ ಅಕಾಡಮಿ ಹಾಗೂ ರಂಗಭೂಮಿ (ರಿ.) ಉಡುಪಿ, ಇವರೆಲ್ಲರ ಸಹಯೋಗದಲ್ಲಿ ಗೊಂಬೆಯಾಟ, ಜಾನಪದ ಕಲೆ, ಸಂಗೀತ, ನಾಟಕಗಳು ಮೇಲೈಸಿದ ಸಮರಸದ ರಸಪಾಕ ಸಿದ್ಧವಾಗುತ್ತಿದೆ. ಉಡುಪಿಯ ಕಲಾಲೋಕದ ಆಡುಂಬೊಲವಾಗಿರುವ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ...
1 15 16 17 18 19 120
Page 17 of 120