ಸುಜ್ಞಾನ ಪಿಯು ಕಾಲೇಜಿನಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ ;ವಿದ್ಯಾರ್ಥಿಗಳು ಕಲೆಯನ್ನು ಅಸ್ವಾಧಿಸುವ ಗುಣವನ್ನು ಬೆಳೆಸಿಕೊಳ್ಳಲಿ-ಡಾ.ರಮೇಶ್ ಶೆಟ್ಟಿ – ಕಹಳೆ ನ್ಯೂಸ್
ಕುಂದಾಪುರ: ಆಗಷ್ಟೇ ಜಡಿ ಮಳೆ ಸುರಿದು ಧರೆಯಲ್ಲಾ ತಂಪಾದ ಗಳಿಗೆ! ಒಂದು ಕಡೆ ಮಕ್ಕಳೆಲ್ಲಾ ಹೊಸ ಬಟ್ಟೆ ತೊಟ್ಟುಕೊಂಡು ಖುಷಿಯಿಂದ ಓಡಾಡುತ್ತಿದ್ದರೆ, ಇನ್ನೊಂದು ಕಡೆ ಘಂ ಎನ್ನುವ ಹಬ್ಬದೂಟದ ಪರಿಮಳ. ಪೂಜೆ ಪುನಸ್ಕಾರಗಳು ಮತ್ತೊಂದು ಕಡೆ...ಅರೇ ಏನಿದು ಸಂಭ್ರಮ, ಸಡಗರವೆಂದು ಎಲ್ಲರೊಳಗೊಂದು ಕುತೂಹಲ! ಇದು ಯಡಾಡಿ-ಮತ್ಯಾಡಿಯ ಸುಂದರವಾದ ಪರಿಸರದಲ್ಲಿರುವ ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆ ಹಾಗೂ ಸುಜ್ಞಾನ ಪಿಯು ಕಾಲೇಜಿನಲ್ಲಿ ಕಂಡು ಬಂದ ಗೌರಿ-ಗಣೇಶ ಹಬ್ಬದ ಸಂಭ್ರಮ....







