ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಡಿಸಿ ; ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಡಾ.ವಿದ್ಯಾ ಕುಮಾರಿ –ಕಹಳೆ ನ್ಯೂಸ್
ಉಡುಪಿ, ಮೇ 17: ಉಡುಪಿ ಜಿಲ್ಲೆಯ ಕೆಲವು ಗ್ರಾಪಂ ಹಾಗೂ ಉಡುಪಿ ಮತ್ತು ಬೈಂದೂರು ಸ್ಥಳೀಯಾಡಳಿತ ವ್ಯಾಪ್ತಿಯ ಕೆಲವು ಕಡೆ ಈ ಬಾರಿ ನೀರಿನ ಸಮಸ್ಯೆ ತಲೆದೋರಿದ್ದು, ಅಲ್ಲಿಗೆ ನೀರು ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಜಿಲ್ಲೆಯ...