ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ : `ಮಹೇಶ್ ಶೆಟ್ಟಿ ತಿಮರೋಡಿ’ ಪೊಲೀಸರ ವಶಕ್ಕೆ.- ಕಹಳೆ ನ್ಯೂಸ್
ಉಡುಪಿ: ಧರ್ಮಸ್ಥಳದ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಜಿರೆಯ ನಿವಾಸದಲ್ಲಿ ಬ್ರಹ್ಮಾವರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಮಹೇಶ್ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ....







