Monday, April 27, 2026

ಉಡುಪಿ

ಉಡುಪಿಜಿಲ್ಲೆಸುದ್ದಿ

ಉಡುಪಿ ಮತ್ತು ಮಣಿಪಾಲ ಜ್ಞಾನಸುಧಾ ಪ.ಪೂ.ಕಾಲೇಜುಗಳ ಪ್ರಾರಂಭೋತ್ಸವ : ಅರ್ಹ ವಿದ್ಯಾರ್ಥಿಗಳಿಗೆ 47.87 ಲಕ್ಷ ರೂ. ವಿದ್ಯಾರ್ಥಿ ವೇತನ -ಕಹಳೆ ನ್ಯೂಸ್

ಉಡುಪಿ : ಭಗವಂತನ ಸೃಷ್ಟಿಯಲ್ಲಿ ನಾವೆಲ್ಲರೂ ವಿಭಿನ್ನರು. ನಮ್ಮಲ್ಲಿರುವ ವಿಶೇಷತೆಯನ್ನು ಅರಿತು, ಕಾಯಕವೇ ಕೈಲಾಸ ಎಂಬುದನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು. ಶಿಕ್ಷಣ ಒಂದು ತಪಸ್ಸು ಇದ್ದಂತೆ ಅದನ್ನು ಸಾಧಿಸುವ ಮನೋಧೈರ್ಯ ನಮ್ಮಲ್ಲಿರಬೇಕು. ತಮ್ಮ ಸಾಧನೆಯನ್ನು ಹೆತ್ತವರ ಪಾದಗಳಿಗೆ ಅರ್ಪಿಸಿ ಅದರಿಂದ ಸಿಗುವ ಪರಮಸುಖವನ್ನು ಅನುಭವಿಸುವ ಶ್ರೇಷ್ಠ ಮಕ್ಕಳೆನಿಸಿಕೊಳ್ಳಿ ಎಂದು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಯವರು ಹೇಳಿದರು. ಇವರು ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜಿನಲ್ಲಿ ನಡೆದ...
ಉಡುಪಿಕುಂದಾಪುರಜಿಲ್ಲೆಸುದ್ದಿ

ವಿಶ್ವಕರ್ಮ ಯೋಜನೆಯ ಟೂಲ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ: ಶಾಸಕ ಎ.ಕಿರಣ್ ಕೊಡ್ಗಿ ಭಾಗಿ-ಕಹಳೆ ನ್ಯೂಸ್

ಸಾಲಿಗ್ರಾಮ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಆಯೋಜಿಸಲಾದ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪಿಎಂ ವಿಶ್ವಕರ್ಮ ಯೋಜನೆಯ ಟೂಲ್ ಕಿಟ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಉಡುಪಿ ಜಿಲ್ಲೆಯಲ್ಲಿ ಪಿಎಂ ವಿಶ್ವಕರ್ಮ ಯೋಜನೆ ಯಶಸ್ವಿಯಾಗಿ ಜಾರಿಯಾಗಿದೆ. ಬ್ಯಾಂಕಿನ ಮುಖ್ಯಸ್ಥರು ಯೋಜನೆಯ ಅನುಷ್ಠಾನ ಇಲಾಖೆಯ ಅಧಿಕಾರಿಗಳು ಯಾವುದೇ ಫಲಾನುಭವಿಗಳಿಗೆ ಸೂಕ್ತ ಸಹಕಾರ ನೀಡಬೇಕು ಎಂದು...
ಉಡುಪಿಜಿಲ್ಲೆಸುದ್ದಿ

ಹಿಂದೂ ಕಾರ್ಯಕರ್ತರಿಗೆ ಹಿಂಸಿಸುತ್ತಿರುವ ಪೊಲೀಸರ ಮೇಲೆ ಕ್ರಮಕೈಗೊಳ್ಳಿ ; ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ-ಕಹಳೆ ನ್ಯೂಸ್

ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವು ಬೆಳವಣಿಗೆಗಳು ನಾಗರಿಕ ಸಮಾಜದಲ್ಲಿ ಭೀತಿಯ ವಾತಾವರಣವನ್ನು ಉಂಟು ಮಾಡಿದ್ದು, ನಾಗರಿಕರ ಖಾಸಗಿ ಜೀವನ ಮತ್ತು ವ್ಯಕ್ತಿತ್ವದ ಗೌರವವನ್ನು ಘನತೆಯನ್ನು ಹಾಳು ಮಾಡುತ್ತಿದೆ. ಪೊಲೀಸರು ಕಳೆದ ಒಂದು ವಾರದಿಂದ ಕೋಮುಸೌಹಾರ್ದವನ್ನು ಕಾಪಾಡುವ ನೆಪದಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಹಿಂದೂ ಕಾರ್ಯಕರ್ತರ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಮಾಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯ ಮೇರೆಗೆ ಹಿಂದೂ ಕಾರ್ಯಕರ್ತರಿಗೆ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಕಾಮೆಡ್-ಕೆ ನಡೆಸಿದ ಪರೀಕ್ಷೆಯಲ್ಲಿ ಎಕ್ಸಲೆಂಟ್ ಮೂಡುಬಿದಿರೆಗೆ ರಾಷ್ಟ್ರಮಟ್ಟದಲ್ಲಿ ಮೊದಲ ರ‍್ಯಾಂಕ್-ಕಹಳೆ ನ್ಯೂಸ್

ಮೂಡುಬಿದಿರೆ : ಖಾಸಗಿ ಎಂಜಿನಿಯರಿಂಗ್  ಪದವಿ ಕಾಲೇಜುಗಳಲ್ಲಿ ಸೀಟ್ ಪಡೆಯಲು ಕಾಮೆಡ್-ಕೆ ನಡೆಸಿದ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಶಿಶಿರ್ ಹೆಚ್ ಶೆಟ್ಟಿ ಮೊದಲ ರ‍್ಯಾಂಕ್ ಗಳಿಸಿದ್ದಾರೆ. ರಾಷ್ಟ್ರದಾದ್ಯಂತ 1,13,111 ವಿದ್ಯಾರ್ಥಿಗಳು ಬರೆದ ಈ ಪರೀಕ್ಷೆಯನ್ನು ಬರೆದಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜ್ ಗಮನಾರ್ಹ ಸಾಧನೆ ಮಾಡಿದೆ. ಮೂಡುಬಿದಿರೆ ಹರೀಶ ಶೆಟ್ಟಿ ಮತ್ತು ಸುಮಿತಾ ಶೆಟ್ಟಿ ಮಗನಾದ ಶಿಶಿರ್ ಹೆಚ್ ಶೆಟ್ಟಿ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 664 ನೇ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಮೋಹನ ಆಳ್ವರಿಗೆ ಡಾ.ಜಿ.ಪಿ ರಾಜರತ್ನಂ ಪ್ರಶಸ್ತಿ -ಕಹಳೆ ನ್ಯೂಸ್

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಡಾ.ಮೋಹನ ಆಳ್ವ ಅವರಿಗೆ ಕನ್ನಡ ಪುಸ್ತಕ ಪ್ರಾಧಿಕಾರ ನೀಡಿದ 2020-21ನೇ ಸಾಲಿನ ಡಾ.ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಯನ್ನು ಬೆಂಗಳೂರಿನ ರವೀಂದ್ರ ಕಲಾ ಕೇತ್ರದಲ್ಲಿ ಈಚೆಗೆ ಪ್ರದಾನ ಮಾಡಲಾಯಿತು.‌ 17 ವರ್ಷಗಳಿಂದ ನಡೆದುಕೊಂಡು ಬಂದ 'ಆಳ್ವಾಸ್ ನುಡಿಸಿರಿ' ಕನ್ನಡ ಸಾಹಿತ್ಯ ಸಮ್ಮೇಳನ, 30 ವರ್ಷಗಳಿಂದ ನಿರಂತರರ ಆಯೋಜನೆಗೊಳ್ಳುತ್ತಿರುವ 'ಆಳ್ವಾಸ್ ವಿರಾಸತ್' ಸಾಂಸ್ಕೃತಿಕ ಕಾರ್ಯಕ್ರಮ, ರಾಜ್ಯದ ನಂ. 1 ಕನ್ನಡ ಮಾಧ್ಯಮ ಶಾಲೆಯೆಂದು...
ಉಡುಪಿಕಾಪುಜಿಲ್ಲೆಸುದ್ದಿ

ಕಾಪುವಿನ ಪ್ರಜಾಸೌಧ ಆವರಣದಲ್ಲಿ ಉದ್ಯಾನ: ಸಾರ್ವಜನಿಕರ ಸಹಕಾರವೂ ಅಗತ್ಯ – ತಹಶೀಲ್ದಾರ್ ಪ್ರತಿಭಾ ಆರ್ -ಕಹಳೆ ನ್ಯೂಸ್

ಕಾಪು (ಪಡುಬಿದ್ರಿ): ಕಾಪುವಿನ ಪ್ರಜಾಸೌಧದ ಆವರಣದಲ್ಲಿ ಉದ್ಯಾನ ನಿರ್ಮಿಸಲಾಗುವುದು. ಅದಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯ ಎಂದು ತಹಶೀಲ್ದಾರ್ ಪ್ರತಿಭಾ ಆರ್. ತಿಳಿಸಿದರು. ಕಾಪು ತಾಲ್ಲೂಕು ಆಡಳಿತದಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಟ್ಟು ಅವರು ಮಾತನಾಡಿದರು. ಸಾರ್ವಜನಿಕರಿಗೆ ಶಿಕ್ಷಣ ನೀಡುವುದರ ಜತೆಗೆ ಗಣನೀಯ ನೀತಿ, ಸುಧಾರಣೆಗಳನ್ನು ಜಾರಿಗೆ ತರಲು ಪರಿಸರ ದಿನಾಚರಣೆಯು ಪ್ರೋತ್ಸಾಹಿಸುತ್ತದೆ. ಸ್ವಚ್ಛತಾ ಕಾರ್ಯಕ್ರಮ, ನೆಡುತೋಪು, ಜಾಗೃತಿ ಅಭಿಯಾನ, ಶಾಲಾ ಕಾರ್ಯಕ್ರಮ ಮತ್ತು ಪರಿಸರಕ್ಕೆ ಪ್ರಯೋಜನಕಾರಿ ಬದ್ಧತೆಗಳನ್ನು...
ಉಡುಪಿಸಿನಿಮಾಸುದ್ದಿ

ರಾಕೇಶ್‌ ಪೂಜಾರಿ ನಿವಾಸಕ್ಕೆ ರಿಷಬ್‌ ಶೆಟ್ಟಿ ದಂಪತಿ ಭೇಟಿ : ತಾಯಿ, ತಂಗಿಗೆ ಸಾಂತ್ವನ ಹೇಳಿದ ನಟ- ಕಹಳೆ ನ್ಯೂಸ್

ಇತ್ತೀಚೆಗಷ್ಟೇ ನಿಧನರಾದ ʻಕಾಮಿಡಿ ಕಿಲಾಡಿʼ ಸೀಸನ್‌ 3 ವಿನ್ನರ್‌, ಕನ್ನಡದ ಕಿರುತೆರೆಯ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ (Rakesh Poojary) ಅವರ ನಿವಾಸಕ್ಕೆ ಡಿವೈನ್‌ ನಟ ರಿಷಭ್‌ ಶೆಟ್ಟಿ ದಂಪತಿ ಭೇಟಿ ನೀಡಿದ್ದಾರೆ. ರಿಷಬ್ ಶೆಟ್ಟಿ ಹಾಗೂ ಪ್ರಗತಿ ರಿಷಬ್ ಶೆಟ್ಟಿ ಅವರು ಇಂದು ನೀಡಿ ರಾಕೇಶ್ ಅವರ ತಾಯಿ ಮತ್ತು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ರಾಕೇಶ್‌ ತಂಗಿ ಮದುವೆಗೂ ಆರ್ಥಿಕ ಸಹಾಯ ಮಾಡಿದ್ದಾರೆ. ಮುಂದಿನ ದಿನದಲ್ಲಿ ನಿರ್ಮಾಣವಾಗುವ...
ಉಡುಪಿಜಿಲ್ಲೆಸುದ್ದಿ

ಕಿಂಡಿ ಅಣೆಕಟ್ಟಿಗೆ ತಹಶಿಲ್ದಾರ್ ಪ್ರತಿಭಾ ಭೇಟಿ- ನೆರೆ ಮುಂಜಾಗ್ರತಾ ಕ್ರಮಗಳ ಪರಿಶೀಲನೆ -ಕಹಳೆ ನ್ಯೂಸ್

ಉಡುಪಿ : ಪ್ರತಿವರ್ಷ ಮುಂಗಾರು ಮಳೆಯ ಸಂದರ್ಭದಲ್ಲಿ ಉಡುಪಿ ಜಿಲ್ಲೆ ಕಾಪು ತಾಲೂಕು ಫಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಿಕೂರು ಗ್ರಾಮದ ಪುಂಜಮಾರು ಹಾಗೂ ಪಲಿಮಾರು ಗ್ರಾಮದ ಕಿಂಡಿ ಅಣೆಕಟ್ಟು ಪ್ರದೇಶಕ್ಕೆ ಇಂದು ತಹಶೀಲ್ದಾರ್ ಪ್ರತಿಭಾ ಆರ್ ಭೇಟಿ ನೀಡಿ ಪರಿಶೀಲಿಸಿದರು. ಪ್ಲಾಸ್ಟಿಕ್, ಮರದ ಕೊಬೆ ಮುಂತಾದ ಘನ ತ್ಯಾಜ್ಯಗಳು ಕಿಂಡಿ ಅಣೆಕಟ್ಟು ನೀರು ಹರಿವಿನ ಜಾಗದಲ್ಲಿ ಜಮಾವಣೆಗೊಂಡಿದ್ದು ನೀರಿನ ರಭಸಕ್ಕೆ ತಡೆಯೊಡ್ಡುತ್ತಿವೆ. ಕೂಡಲೇ ಈ ತ್ಯಾಜ್ಯವನ್ನು ಸ್ವಚ್ಚಗೊಳಿಸಿ ನೀರಿನ...
1 19 20 21 22 23 120
Page 21 of 120