ಉಡುಪಿ ಮತ್ತು ಮಣಿಪಾಲ ಜ್ಞಾನಸುಧಾ ಪ.ಪೂ.ಕಾಲೇಜುಗಳ ಪ್ರಾರಂಭೋತ್ಸವ : ಅರ್ಹ ವಿದ್ಯಾರ್ಥಿಗಳಿಗೆ 47.87 ಲಕ್ಷ ರೂ. ವಿದ್ಯಾರ್ಥಿ ವೇತನ -ಕಹಳೆ ನ್ಯೂಸ್
ಉಡುಪಿ : ಭಗವಂತನ ಸೃಷ್ಟಿಯಲ್ಲಿ ನಾವೆಲ್ಲರೂ ವಿಭಿನ್ನರು. ನಮ್ಮಲ್ಲಿರುವ ವಿಶೇಷತೆಯನ್ನು ಅರಿತು, ಕಾಯಕವೇ ಕೈಲಾಸ ಎಂಬುದನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು. ಶಿಕ್ಷಣ ಒಂದು ತಪಸ್ಸು ಇದ್ದಂತೆ ಅದನ್ನು ಸಾಧಿಸುವ ಮನೋಧೈರ್ಯ ನಮ್ಮಲ್ಲಿರಬೇಕು. ತಮ್ಮ ಸಾಧನೆಯನ್ನು ಹೆತ್ತವರ ಪಾದಗಳಿಗೆ ಅರ್ಪಿಸಿ ಅದರಿಂದ ಸಿಗುವ ಪರಮಸುಖವನ್ನು ಅನುಭವಿಸುವ ಶ್ರೇಷ್ಠ ಮಕ್ಕಳೆನಿಸಿಕೊಳ್ಳಿ ಎಂದು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಯವರು ಹೇಳಿದರು. ಇವರು ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜಿನಲ್ಲಿ ನಡೆದ...







