Monday, April 27, 2026

ಉಡುಪಿ

ಉಡುಪಿಶಿಕ್ಷಣಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿಗೆ ಪ್ರಥಮ‌ ಸ್ಥಾನ : ಹರ್ಷ ವ್ಯಕ್ತಪಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – ಕಹಳೆ ನ್ಯೂಸ್

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಮುಂದಿದ್ದು, ಜಿಲ್ಲೆಯ ಮಕ್ಕಳ ಸಾಧನೆ ನಿಜಕ್ಕೂ ಮೆಚ್ಚುವಂಥದ್ದು. ಮಕ್ಕಳ ಭವಿಷ್ಯ ಉಜ್ವಲವಾಗಲಿ. ಪ್ರಥಮ ಸ್ಥಾನ ಪಡೆಯಲು ಶ್ರಮಿಸಿದ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೋಷಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ....
ಉಡುಪಿಜಿಲ್ಲೆಸುದ್ದಿ

ಬಿಎಸ್‌ಎನ್‌ಎಲ್‌ ಟವರ್‌ ಶೀಘ್ರ 4ಜಿಗೆ ಅಪ್‌ಗ್ರೇಡ್: ಸಂಸದ ಕೋಟ ಸೂಚನೆ – ಕಹಳೆ ನ್ಯೂಸ್

ಉಡುಪಿ: ಜಿಲ್ಲೆಯಲ್ಲಿ ತಾಂತ್ರಿಕ ಕಾರಣದಿಂದ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ 4ಜಿಗೆ ಅಪ್‌ಡೇಟ್‌ ಆಗದ ಸೈಟ್‌ಗಳನ್ನು ಆದಷ್ಟು ಶೀಘ್ರ ಅಪ್‌ಡೇಟ್‌ ಮಾಡಿ ಗ್ರಾಹಕರಿಗೆ ಗುಣಮಟ್ಟದ ಸೇವೆ ಒದಗಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿ.ಪಂ. ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಬಿಎಸ್‌ಎನ್‌ಎಲ್‌ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಖಾಸಗಿ ಟೆಲಿಕಾಂ ಸಂಸ್ಥೆಗಳು ಈಗಾಗಲೇ 5ಜಿ ಸೇವೆ ಒದಗಿಸುತ್ತಿವೆ. ಸರಕಾರಿ ಸಂಸ್ಥೆಯಾಗಿ ಬಿಎಸ್‌ಎನ್‌ಎಲ್‌ ಇನ್ನೂ 4ಜಿ ಸೇವೆಯನ್ನೇ...
ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ

ರಾಜ್ಯದಲ್ಲಿ  ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 'ಎಲ್ಲೋ' ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ...
ಉಡುಪಿಕ್ರೈಮ್ಯಕ್ಷಗಾನ / ಕಲೆಸುದ್ದಿ

ಕುಂದಾಪುರ ರಸ್ತೆ ಅಪಘಾತದಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದ ದುರ್ಮರಣ – ಕಹಳೆ ನ್ಯೂಸ್

ಕುಂದಾಪುರ : ಪ್ರಸಿದ್ಧ ಯಕ್ಷಗಾನ ಕಲಾವಿದರೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಅರಾಟೆ ಸೇತುವೆ ಬಳಿ ಶನಿವಾರ ರಾತ್ರಿ ನಡೆದಿದೆ. ಮೃತಪಟ್ಟ ಕಲಾವಿದರನ್ನು ಹಟ್ಟಿಯಂಗಡಿ ಮೇಳದ ಪ್ರಧಾನ ಮದ್ದಳೆಗಾರ ನಾರಾಯಣ ಪೂಜಾರಿ (40) ಎಂದು ಗುರುತಿಸಲಾಗಿದೆ. ಶಿರೂರಿನ ತೂದಳ್ಳಿಯಲ್ಲಿ ನಡೆಯಬೇಕಿದ್ದ ಹಟ್ಟಿಯಂಗಡಿ ಮೇಳದ ಆಟ ಭಾರೀ ಮಳೆಯಿಂದಾಗಿ ರದ್ದಾಗಿತ್ತು. ಕಾರ್ಯಕ್ರಮ ರದ್ದಾದ ನಂತರ ಮೇಳದ ಪ್ರಧಾನ ಮದ್ದಳೆಗಾರ ನಾರಾಯಣ ಪೂಜಾರಿ ಅವರು ಬೈಕ್ ನಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ಅರಾಟೆ ಸೇತುವೆಯಲ್ಲಿ ದುರಸ್ತಿ...
ಉಡುಪಿಜಿಲ್ಲೆಸುದ್ದಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಏಷ್ಯಾದ ಮೊದಲ ಮಾಮಾ ಅನ್ನಿ ಹೈ-ಫಿಡೆಲಿಟಿ ಬರ್ತಿಂಗ್ ಸಿಮ್ಯುಲೇಟರ್ ಪರಿಚಯ-ಕಹಳೆ ನ್ಯೂಸ್

ಮಣಿಪಾಲ :ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಏಷ್ತಾದ ಮೊದಲ ಮಾಮಾ ಅನ್ನಿ ಹೈ-ಫಿಡೆಲಿಟಿ ಬರ್ತಿಂಗ್ ಸಿಮ್ಯುಲೇಟರ್ ಅನ್ನು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಪರಿಚಯಿಸಲಾಗಿದೆ. ಈ ಮೂಲಕ ವೈದ್ಯಕೀಯ ಶಿಕ್ಷಣ ಮತ್ತು ತಾಯಂದಿರ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಜಾಗತಿಕ ಆರೋಗ್ಯ ಸಿಮ್ಯುಲೇಶನ್ ನಲ್ಲಿ ನಾಯಕನಾಗಿರುವ ಲಾರ್ಡಾಲ್, ಈ ಅತ್ಯಾಧುನಿಕ ಸಿಮ್ಯುಲೇಟರ್ ವಿನ್ಯಾಸ ಮಾಡಿದೆ. ಇದನ್ನು ಆರೋಗ್ಯ ವಲಯದ ವೃತ್ತಿಪರರಿಗೆ ತರಬೇತಿ ನೀಡುವುದರೊಂದಿಗೆ ತಾಯಂದಿರ ಪ್ರಸೂತಿ...
ಉಡುಪಿಜಿಲ್ಲೆಸುದ್ದಿ

ಟೈಮಿಂಗ್‌ ವಿಚಾರದಲ್ಲಿ ಗಲಾಟೆ; ಡ್ರೈವರ್-ಕಂಡಕ್ಟರ್‌ ಬಂಧನ–ಕಹಳೆ ನ್ಯೂಸ್

ಉಡುಪಿ: ಮಣಿಪಾಲದ ಟೈಗರ್‌ ಸರ್ಕಲ್‌ ಖಾಸಗಿ ಬಸ್‌ ನಿಲ್ದಾಣದ ಬಳಿ ಗಲಾಟೆ ಮಾಡಿದ ಚಾಲಕ ಮತ್ತು ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ. ಇವರ ಗಲಾಟೆಯ ವಿಡಿಯೋ ವೈರಲ್‌ ಆಗಿತ್ತು. ಬಂಧಿತರನ್ನು ಮಂಜುನಾಥ ಬಸ್ಸಿನ ಚಾಲಕ ಉಚ್ಚಿಲದ ಮೊಹಮ್ಮದ್‌ ಆಲ್ಪಾಜ್‌ (25), ಹಾಗೂ ಆನಂದ ಬಸ್ಸಿನ ಕಂಡಕ್ಟರ್‌ ಚಿತ್ರದುರ್ಗದ ವಿಜಯಕುಮಾರ್‌ (25) ಎಂದು ಗುರುತಿಸಲಾಗಿದೆ. ಮಣಿಪಾಲದ ಟೈಗರ್‌ ಸರ್ಕಲ್‌ ಬಳಿ ಇರುವ ಖಾಸಗಿ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸುವ ಟೈಮಿಂಗ್‌ ವಿಚಾರದಲ್ಲಿ ಆನಂದ್‌...
ಉಡುಪಿಜಿಲ್ಲೆಬೈಂದೂರುಸುದ್ದಿ

ಚಿನ್ನ, ಬೆಳ್ಳಿಯ ಅಭರಣ, ನಗದು ಮತ್ತು ಲ್ಯಾಪ್‌ಟಾಪ್‌ ಕಳವು ;ಆರೋಪಿಗಳ ಬಂಧನ -ಕಹಳೆ ನ್ಯೂಸ್

ಬೈಂದೂರು: ಉಪ್ಪುಂದ ಗ್ರಾಮದ ಬಪ್ಪೆಹಕ್ಕುವಿನ ಜನಾರ್ದನ ಗಾಣಿಗ ಅವರ ಮನೆಗೆ ಬೀಗ ಮುರಿದು ಕಪಾಟಿನಲ್ಲಿರಿಸಿದ್ದ ಚಿನ್ನ, ಬೆಳ್ಳಿಯ ಅಭರಣ, ನಗದು ಮತ್ತು ಲ್ಯಾಪ್‌ಟಾಪ್‌ ಕಳವು ಮಾಡಿದ್ದ ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಯತಿರಾಜ್‌ ಜಿ. ಉಪ್ಪುಂದ, ಮಹೇಶ್‌ ಯಳಜಿತ್‌ ಹಾಗೂ ಕಾರ್ತಿಕ್‌ ನಾಗೂರು ಬಂಧಿತರು. ಕಳವು ಮಾಡಲಾಗಿದ್ದ ಚಿನ್ನಾಭರಣ, ಲ್ಯಾಪ್‌ಟಾಪ್‌ ಮತ್ತು ಕೃತ್ಯಕ್ಕೆ ಬಳಸಿದ್ದ ಮೊಬೈಲ್‌ಗ‌ಳು ಸಹಿತ ಸುಮಾರು 3 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಂದೂರು ವೃತ್ತ...
ಉಡುಪಿಜಿಲ್ಲೆಸುದ್ದಿ

ಹೆರವಳ್ಳಿಯಲ್ಲಿ ವಿಜಯನಗರ ಕಾಲದ ಶಾಸನ ಪತ್ತೆ – ಕಹಳೆ ನ್ಯೂಸ್

ಉಡುಪಿ: ಕುಂದಾಪುರ ತಾಲೂಕು ಶಂಕರನಾರಾಯಣ ಗ್ರಾಮದ ಹೆರವಳ್ಳಿಯಲ್ಲಿ ವಿಜಯನಗರ ಕಾಲದ ಶಾಸನ ಪತ್ತೆಯಾಗಿದೆ. ಶಾಸನದಲ್ಲಿ ಶೃಂಗೇರಿ ಮಠದ 14ನೇ ಶ್ರೀಗಳಾದ ಶ್ರೀ ನರಸಿಂಹ ಭಾರತಿ ಶ್ರೀಪಾದರು (ಹಾಲಾಡಿ ಒಡೆಯರು) ಭೂ ದಾನ ನೀಡಿರುವ ಸಾಧ್ಯತೆಯ ಬಗ್ಗೆ ಶೃಂಗೇರಿ ಮಠದ ಸಂಶೋಧಕರು ಹೇಳಿದ್ದಾರೆ. ಪುರಾತನ ಈ ಶಿಲಾಶಾಸನ ಶ್ರೀ ಶಂಕರ ನಾರಾಯಣ ಕ್ಷೇತ್ರ ಮತ್ತು ಪಂಚಗ್ರಾಮ ಬ್ರಾಹ್ಮಣ ಸಮುದಾಯದ ಪುರಾವೆಗಳಿಗೆ ಪೂರಕವಾಗುವ ಸಾಧ್ಯತೆ ಇದೆ. ಹೆರವಳ್ಳಿಯ ಪ್ರಶಾಂತ್‌ ಹೆಗ್ಡೆ ಅವರ ಮನೆಯ...
1 25 26 27 28 29 120
Page 27 of 120