ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ- ನೀರು ಪೂರೈಕೆ ಸ್ಥಗಿತದ ಎಚ್ಚರಿಕೆ -ಕಹಳೆ ನ್ಯೂಸ್
ಉಡುಪಿ : ಹಲವು ಬೇಡಿಕೆಗಳನ್ನು ಮುಂದಿಟ್ಟು ಪೌರ ಕಾರ್ಮಿಕರು ಅನಿರ್ದಿಷ್ಟಾವಧಿ ಧರಣಿಗೆ ಇಳಿದಿದ್ದಾರೆ. ಉಡುಪಿ ನಗರಸಭೆ ಮುಂಭಾಗ ಇಂದು ಧರಣಿ ಆರಂಭಗೊಂಡಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು,ವಾಹನ ಚಾಲಕರು, ಸೂಪರ್ವೈಸರ್ಸ್, ಕಂಪ್ಯೂಟರ್ ಆಪರೇಟರ್ಸ್ ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ಕಾರ್ಮಿಕರನ್ನು ನೇರ...







