Monday, April 27, 2026

ಉಡುಪಿ

ಉಡುಪಿಕಾರ್ಕಳಜಿಲ್ಲೆ

ಜ್ಞಾನಸುಧಾದ 47 ಜೆ.ಇ.ಇ ಮೈನ್ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ 3.075ಲಕ್ಷ ರೂಪಾಯಿ ಪ್ರೋತ್ಸಾಹ ಧನ ವಿತರಣೆ; ನಾಲ್ವರು ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ನಗದು ಪುರಸ್ಕಾರ -ಕಹಳೆ ನ್ಯೂಸ್

ಕಾರ್ಕಳ: ತಂದೆ-ತಾಯಿ-ಗುರುಗಳಿಗೆ ವಂದಿಸಿ ಪಡೆದ ವಿದ್ಯೆಯು ವಿದ್ಯಾರ್ಥಿಯ ಸಾಧನೆಗೆ ಕಾರಣವಾಗುತ್ತದೆ. ಸಂಕಲ್ಪ ಶುದ್ಧದಿಂದ ಇಟ್ಟಹೆಜ್ಜೆಯು ಯಶಸ್ಸನ್ನೇ ತಂದುಕೊಡುತ್ತದೆ. ಯಶಸ್ವಿ ಬದುಕಿನ ಸಾರ್ಥಕತೆ ಪೋಷಕರದಾಗುತ್ತದೆ ಎಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಹೇಳಿದರು. ಅವರು ರಾಷ್ಟ್ರೀಯ ಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕೆ ಎನ್.ಟಿ.ಎ ನಡೆಸಿದ ಪ್ರಥಮ ಹಂತದ ಜೆ.ಇ.ಇ ಮೈನ್ ಫಲಿತಾಂಶದಲ್ಲಿ 97ಕ್ಕೂ ಅಧಿಕ ಪರ್ಸಂಟೈಲ್ ಗಳಿಸಿದ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 47 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು....
ಉಡುಪಿಜಿಲ್ಲೆಸುದ್ದಿ

ಗುಜರಿ ಅಂಗಡಿ ಗೋಡೌನ್‌ನಲ್ಲಿ ಭಾರೀ ಬೆಂಕಿ ಅವಘಡ-ಕಹಳೆ ನ್ಯೂಸ್

ಉಡುಪಿ : ಉಡುಪಿ ನಗರದ ಅಂಬಾಗಿಲು - ಪೆರಂಪಳ್ಳಿ ರಸ್ತೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪೆರಂಪಳ್ಳಿ ಸಮೀಪದ ಗುಜರಿ ಅಂಗಡಿಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹನೀಫ್ ಎಂಬುವರಿಗೆ ಸೇರಿದ ಗುಜರಿ ಅಂಗಡಿ ಇದಾಗಿದೆ. ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ಬಳಿಕ ಆಸುಪಾಸಿಗೂ ವ್ಯಾಪಿಸಿದೆ. ಭಾರೀ ಹೊಗೆಯಿಂದ ಈ ಪ್ರದೇಶ ಆವರಿಸಿಕೊಂಡಿದ್ದು ಅಕ್ಕ ಪಕ್ಕದ ಮನೆಯವರನ್ನು ಅಗ್ನಿಶಾಮಕ ಸಿಬ್ಬಂದಿ ತೆರವು ಮಾಡಿದರು. ಬೆಂಕಿ...
ಉಡುಪಿಜಿಲ್ಲೆಸುದ್ದಿ

ಪಾಂಗಾಳ ಆರ್ಯಡಿ ಶ್ರೀ ಆದಿ ಜನಾರ್ಧನ ದೇವರ ಸನ್ನಿಧಿಯ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶದ ಪೂರ್ವ ತಯಾರಿ ಸಭೆ-ಕಹಳೆ ನ್ಯೂಸ್

ಉಡುಪಿ:ಮಧ್ವ ಪೂಜಿತ, ರಾಜವಂದಿತ ಎಲ್ಲರ ಒಡೆಯ ಪಾಂಗಾಳ ಆರ್ಯಡಿ ಶ್ರೀ ಆದಿ ಜನಾರ್ಧನ ದೇವರ ಸನ್ನಿಧಿಯ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶದ ಪೂರ್ವ ತಯಾರಿ ಸಭೆಯನ್ನು ಕಾಪು ಕ್ಷೇತ್ರದ ಮಾನ್ಯ ಶಾಸಕರಾದ ಗುರ್ಮೇ ಸುರೇಶ್ ಶೆಟ್ಟಿ ಯವರು ನಡೆಸಿ ಕೊಟ್ಟರು. ತುಳುನಡಿನ ಜನರ ಬಕ್ತಿ ಬಾವನೆಗಳೇ ಇಷ್ಟೊಂದು ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಕಾರಣ. ಇಲ್ಲಿಯ ಕಲ್ಲು ಮಣ್ಣು ಮರಗಳನ್ನು ದೈವತ್ವದಿಂದ ಪೂಜಿಸುವ ಮನಸ್ಸುಗಳನ್ನು ನಮ್ಮ ಹಿರಿಯರು ನಿರ್ಮಾಣ ಮಾಡಿದ್ದಾರೆ. ನಾನು ಚಿಕ್ಕದಿರುವಾಗ ನಾವು...
ಉಡುಪಿಕುಂದಾಪುರಜಿಲ್ಲೆಸುದ್ದಿ

ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶೀನ ಪೂಜಾರಿ, ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ ಆಯ್ಕೆ-ಕಹಳೆ ನ್ಯೂಸ್

ಕುಂದಾಪುರ, : ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶೀನ ಪೂಜಾರಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂಜೀವ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸೋಮವಾರ ನಡೆಯಿತು. ಸಮಬಲದ ನಿರ್ದೇಶಕರನ್ನು ಹೊಂದಿದ್ದ ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಸಮಬಲದ ಸ್ಥಾನ ಪಡೆದಿದ್ದರು. ಹಾಗಾಗಿ ಅಧ್ಯಕ್ಷ ಸ್ಥಾನದ ಬಗ್ಗೆ ಕುತೂಹಲ ಕೆರಳಿಸಿತ್ತು. ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶೀನ ಪೂಜಾರಿ ಅವರಿಗೆ ಬಿಜೆಪಿ ಬೆಂಬಲಿತ ಸದಸ್ಯರು ಬೆಂಬಲ ನೀಡಿದ್ದರು. ಹಾಗಾಗಿ ಶೀನ ಪೂಜಾರಿ...
ಉಡುಪಿಸುದ್ದಿ

ತಡರಾತ್ರಿವರೆಗೆ ಯಕ್ಷಗಾನ – ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿ ಯಕ್ಷಗಾನ ನಿಲ್ಲಿಸಿದ ಪೊಲೀಸರು – ಕಹಳೆನ್ಯೂಸ್

ಉಡುಪಿ : ಉಡುಪಿಯ ಅಲೆವೂರಿನಲ್ಲಿ ತಡರಾತ್ರಿ ನಡೆಯುತ್ತಿದ್ದ ಯಕ್ಷಗಾನವನ್ನು ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಬಂದು ನಿಲ್ಲಿಸಿದ ಪ್ರಸಂಗ ನಡೆದಿದೆ. ಅಲೆವೂರಿನ ಸಂಕಲ್ಪ‌ ಸಂಭಾಂಗಣದಲ್ಲಿ 12-30 ತನಕ ಯಕ್ಷಗಾನ ನಡೆಯುತ್ತಿತ್ತು. ಮಡಾಮಕ್ಕಿ ಮೇಳದವರು ಈ ಯಕ್ಷಗಾನ ಪ್ರಸಂಗ ನಡೆಸುತ್ತಿದ್ದರು. ತಡರಾತ್ರಿಯಾದ ಕಾರಣ ಯಾರೋ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಯಕ್ಷಗಾನ ನಿಲ್ಲಿಸುವಂತೆ ಮನವಿ ಮಾಡಿದ್ದು, ಅದರಂತೆ ಯಕ್ಷಗಾನ ನಿಲ್ಲಿಸಲಾಯಿತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ....
ಉಡುಪಿಜಿಲ್ಲೆಸುದ್ದಿ

ದಿ ಕಾಮನ್ ಪೀಪಲ್ ವೆರ್ ಫೌಂಡೇಶನ್ ಮತ್ತು ತುಳುನಾಡ ರಕ್ಷಣಾ ವೇದಿಕೆ ಜಂಟಿ ಯಾಗಿ ಉಡುಪಿ ಜಿಲ್ಲಾ ಧಿಕಾರಿಯವರ ಕಚೇರಿ ಮುಂದೆ ಬ್ರಹತ್ ಮುಸ್ಕರ ಮತ್ತು ಉಪವಾಸ ಸತ್ಯಾಗ್ರಹ ಕಾರ್ಯಕ್ರಮ-ಕಹಳೆ ನ್ಯೂಸ್

ಉಡುಪಿ : ಕಾರ್ಮಿಕರಿಗೆ ಮೋಸ ವಾಗುತ್ತಿದೆ, ಎಲ್ಲಾ ರೀತಿ ಯ ಸವಲತ್ತು ಗಳಿಂದಲು ವಂಚನೆ ಯಾಗುತ್ತಿದೆ ಸರಕಾರ ವಾಗಲಿ, ಅಧಿಕಾರಿಗಳಗಲಿ ಕಾರ್ಮಿಕ ರೊಂದಿಗೆ ಸರಿಯಾಗಿ ನಡೆದು ಕೊಲ್ಲದಿದ್ದ ರೆ ಉಗ್ರ ಹೋರಾಟ ಮೂಲಕ ನ್ಯಾಯ ದೊರಕಿಸಿ ಕೊಳ್ಳುವಲ್ಲಿ ನಾವು ಸದಾ ಸಿದ್ದ ಎಂದು ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ಯ ಕಾರ್ಮಿಕ ಸಂಘ ಟನೆ ಯ ಅಧ್ಯಕ್ಷ ರಾದ ಜಯ ಪೂಜಾರಿ ಎಚ್ಚರಿಕೆ ನೀಡಿದರು. ದಿ ಕಾಮನ್ ಪೀಪಲ್...
ಉಡುಪಿಕಾಪುಜಿಲ್ಲೆಸುದ್ದಿ

ಹಿಂದೂ ರಾಷ್ಟ್ರ ಮತ್ತು ಹಿಂದೂ ಧರ್ಮದ ಬಗ್ಗೆ ಜನಜಾಗೃತಿ ಮೂಡಿಸಲು ಕಾಪುವಿನಲ್ಲಿ ಫೆ.8 ರಂದು ಹಿಂದೂ ರಾಷ್ಟ್ರ-ಜಾಗೃತಿ ಸಭೆ-ಕಹಳೆ ನ್ಯೂಸ್

ಕಾಪು : ಹಿಂದೂ ಧರ್ಮದ ಮೇಲೆ ಆನೇಕ ರೀತಿಯಲ್ಲಿ ಆಕ್ರಮಣಗಳು ನಡೆಯುತ್ತಿದೆ. ಲವ್ ಜಿಹಾದ್, ಲ್ಯಾಂಡ್ ಜಿಹಾದ್, ಹಲಾಲ್ ಜಿಹಾದ್, ಮತಾಂತರ, ಧರ್ಮದ ಅಪಮಾನ ಮಾಡುವುದು, ಹಿಂದೂ ನಾಯಕರ ಬರ್ಬರ ಹತ್ಯೆ, ಹಿಂದೂ ದೇವಸ್ಥಾನಗಳ ಸರಕಾರಿಕರಣ, ಗೋಹತ್ಯೆ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲೆ ನಿರಂತರ ಆಕ್ರಮಣ, ಮುಂತಾದ ಸಮಸ್ಯೆಗಳು ಮುಗಿಲು ಮುಟ್ಟಿದೆ. ಅದಕ್ಕಾಗಿ ಹಿಂದೂಗಳನ್ನು ಜಾಗೃತ ಗೊಳಿಸುವುದು, ಧರ್ಮದ ಆಧಾರದ ಮೇಲೆ ಹಿಂದೂ ಸಮಾಜವನ್ನು ಸಂಘಟಿತಗೊಳಿಸಿ, ಭಾರತವನ್ನು ಹಿಂದೂ...
ಉಡುಪಿಜಿಲ್ಲೆಸುದ್ದಿ

ಕೋಟೇಶ್ವರ ಅಳಿವೆ ಕಡಲ ತೀರದಲ್ಲಿ ಅರಳಿದ ಮಹಾಕುಂಭಮೇಳದ ಮರಳು ಶಿಲ್ಪ-ಕಹಳೆ ನ್ಯೂಸ್

ಉಡುಪಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಐತಿಹಾಸಿಕ ಮಹಾಕುಂಭಮೇಳ ನಡೆಯುತ್ತಿದೆ. 144 ವರ್ಷಗಳ ನಂತರ ನಡೆಯುತ್ತಿರುವ ಅತ್ಯಂತ ಅಪರೂಪದ ಕುಂಭಮೇಳ ಇದಾಗಿದ್ದು, ಈವರೆಗೆ ಸುಮಾರು ಕೋಟ್ಯಾಂತರ ಜನರು ಪುಣ್ಯ ಸ್ನಾನ ಮಾಡಿದ್ದಾರೆ. ಉಡುಪಿಯ ಸ್ಯಾಂಡ್ ಥೀಮ್ ತಂಡ ಕೋಟೇಶ್ವರದ ಹಳೆಅಳಿವೆ ಕಡಲ ತೀರದಲ್ಲಿ "ಅಮೃತ ಸ್ನಾನ" ಧ್ಯೇಯದೊಂದಿಗೆ ರಚಿಸಿದ ಮಹಾಕುಂಭಮೇಳದ ಮರಳು ಶಿಲ್ಪ ಕಣ್ಮನ ಸೆಳೆಯುತ್ತಿದೆ. 144 ವರ್ಷಕ್ಕೊಮ್ಮೆ ನಡೆಯುವ ಅಮೃತಸ್ನಾನದ ಪಾಪ ಕರ್ಮ-ಮೋಕ್ಷಗಳ ಸಾಕಾರಗೊಳಿಸುವ ಮಹಾಕುಂಭ ಮೇಳವನ್ನು...
1 31 32 33 34 35 120
Page 33 of 120