ಏಸಿ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ: ಕೃಷ್ಣರಾಜ ತಂತ್ರಿ -ಕಹಳೆ ನ್ಯೂಸ್
ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ. ಇದರಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯುವುದಿಲ್ಲ ಎಂದು ಮೋಲ್ಟೋಕೇರ್ ಪ್ರಾಪರ್ಟಿ ಸರ್ವೀಸ್ನ ನಿರ್ದೇಶಕ ಕೃಷ್ಣರಾಜ ತಂತ್ರಿ ಹೇಳಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬ್ರಹ್ಮಗಿರಿಯ ಉಡುಪಿ ಪತ್ರಿಕಾ ಭವನದಲ್ಲಿ ಬುಧವಾರ ಆಯೋಜಿಸಲಾದ ಏರ್ ಕಂಡೀಷನರ್ ಕಾರ್ಯನಿರ್ವಹಣೆ: ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಏಸಿಯು ಕೋಣೆಯಲ್ಲಿರುವ ಗಾಳಿಯನ್ನು ಶುದ್ಧಗೊಳಿಸಿ ತಂಪು ಮಾಡುತ್ತದೆ. ಹೊರತು...







