Tuesday, April 28, 2026

ಉಡುಪಿ

ಉಡುಪಿಸುದ್ದಿ

ಉಡುಪಿ: ವಿಶ್ವನಾಥ್ ಶೆಣೈ ಅವರಿಂದ ಉಡುಪಿ ಪತ್ರಕರ್ತರ ಸಂಘಕ್ಕೆ ದೇಣಿಗೆ-ಕಹಳೆ ನ್ಯೂಸ್

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನದಲ್ಲಿರುವ ಉಡುಪಿ ಪತ್ರಿಕಾ ಭವನದ ಅಭಿವೃದ್ಧಿ ಕಾರ್ಯಗಳಿಗೆ ಉಡುಪಿ ವಿಶ್ವ ಸಂಸ್ಕೃತಿ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ ಶೆಣೈ ದೊಡ್ಡ ಮೊತ್ತದ ದೇಣಿಗೆಯನ್ನು ನೀಡಿದರು. ಉಡುಪಿ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ವಿಶ್ವನಾಥ್ ಶೆಣೈ, ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ, ಸಹ ಸಂಚಾಲಕ ಅಂಕಿತ್ ಶೆಟ್ಟಿ ಅವರಿಗೆ ಚೆಕ್ ಹಸ್ತಾಂತರಿಸಿದರು. ಈ...
ಉಡುಪಿಸುದ್ದಿ

ಡಿ.1ರಿಂದ ನಗರಸಭೆ ಕುಡಿಯುವ ನೀರಿನ ದರದಲ್ಲಿ ಶೇ. 18 ರಿಂದ ಶೇ. 25 ರ ವರೆಗೆ ಕಡಿತ ಜಾರಿ : ಯಶ್ ಪಾಲ್ ಸುವರ್ಣ-ಕಹಳೆ ನ್ಯೂಸ್

ಉಡುಪಿ : ನಗರಸಭೆ ಗೃಹ ಬಳಕೆ , ವಾಣಿಜ್ಯ, ಕೈಗಾರಿಕಾ ಸಂಪರ್ಕದ ಕುಡಿಯುವ ನೀರಿನ ದರದಲ್ಲಿ ಕಡಿತಗೊಳಿಸಲಾಗಿದ್ದು, ಡಿ.1 ರಿಂದ ಜಾರಿಯಾಗಲಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ ತಿಳಿಸಿದ್ದಾರೆ. ನಗರಸಭೆ ಆಡಳಿತಾಧಿಕಾರಿ ಅವಧಿಯಲ್ಲಿ ಅವೈಜ್ಞಾನಿಕ ಕುಡಿಯುವ ನೀರಿನ ದರ ಏರಿಕೆಯಿಂದ ಸಾರ್ವಜನಿಕರಿಗೆ ಆರ್ಥಿಕ ಹೊರೆಯಾಗಿರುವ ಹಿನ್ನಲೆಯಲ್ಲಿ ಉಡುಪಿ ಜನತೆಯ ಹಿತದೃಷ್ಟಿಯಿಂದ ಗೃಹ ಬಳಕೆಯ ಸಂಪರ್ಕಕ್ಕೆ ನೀರಿನ ಬಳಕೆಗೆ ಅನುಗುಣವಾಗಿ...
ಉಡುಪಿಸುದ್ದಿ

ಉಡುಪಿ ಜ್ಞಾನಸುಧಾ ಮತ್ತು ಮಣಿಪಾಲ ಜ್ಞಾನಸುಧಾ ಜಂಟಿಕಾಲೇಜು ವಾರ್ಷಿಕೋತ್ಸವ : ಜ್ಞಾನಸಂಭ್ರಮ-ಕಹಳೆ ನ್ಯೂಸ್

ಉಡುಪಿ: ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿಯೂ ಗಣನೀಯವಾಗಿ ಸಾಧನೆಗೈಯಲು ಪ್ರೋತ್ಸಾಹ ನೀಡುತ್ತಾ ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ಮನೆಮಾತಾಗಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ನಿಜವಾಗಿಯೂ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಅತ್ಯಮೂಲ್ಯ ಕೊಡುಗೆ ಕೊಡುತ್ತಿದೆ. ಇಂತಹ ಸಂಸ್ಕಾರಯುತ ಶಿಕ್ಷಣ ಪಡೆದ ವಿದ್ಯಾರ್ಥಿ ಸಮೂಹ ದೇಶದ ಬಲವರ್ದನೆಗೆ ದುಡಿಯಬೇಕು ಎಂದು ಎನ್.ಎಸ್.ಎಸ್. ಮಾಜಿ ರಾಜ್ಯ ಸಂಯೋಜನಾಧಿಕಾರಿಗಳು, ನಿವೃತ್ತ ಪ್ರಾಂಶುಪಾಲರಾಗಿರುವ ಡಾ.ಗಣನಾಥ ಎಕ್ಕಾರು ಹೇಳಿದರು. ಅವರು ಉಡುಪಿ ಜ್ಞಾನಸುಧಾ ಮತ್ತು ಮಣಿಪಾಲ ಜ್ಞಾನಸುಧಾ...
ಉಡುಪಿಮೂಡಬಿದಿರೆಸುದ್ದಿ

ಮನಸ್ಸು ಮತ್ತು ದೇಹ ಸದೃಢವಾಗಿದ್ದರೆ ಮಾತ್ರ ಸಾಧನೆ ಸಾಧ್ಯ -ಪಿ. ಶ್ರೀಧರ್ ಆಭಿಮತ

ಮೂಡುಬಿದಿರೆ:ಎಲ್ಲರನ್ನು ಗೌರವಿಸುವ ಮನೋಭಾವವನ್ನು ಮೈಗೂಡಿಸಿಕೊಂಡಾಗ ಬದುಕು ಸೃಜನಾತ್ಮಕವಾಗುತ್ತದೆ. ಮನುಷ್ಯ ದೈಹಿಕವಾಗಿ ಆರೋಗ್ಯವಾಗಿದ್ದರೆ ಶೈಕ್ಷಣಿಕವಾಗಿ ಏನನ್ನಾದರೂ ಸಾಧಿಸಬಹುದು. ಅಂತಹ ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗುತ್ತದೆ. ಮನಸ್ಸು ಮತ್ತು ದೇಹ ಸದೃಢವಾಗಿದ್ದರೆ ಮಾತ್ರ ಸಾಧನೆ ಸಾಧ್ಯ. ಮನುಷ್ಯನ ಉತ್ತಮ ಆರೋಗ್ಯಕ್ಕೆ ಉತ್ತಮ ಬೆಳಕು ಗಾಳಿ ನೀರು ಬಹಳ ಮುಖ್ಯ ಅಂತಹ ವಾತವರಣ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿದೆ. ನಾವು ಗಡಿಯಾರದ ಸಂಖ್ಯೆಗಳಾಗದೆ ಮುಳ್ಳುಗಳ ಹಾಗೆ ಜೀವಿಸಬೇಕು. ಎಂದು ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ ವಾರ್ಷಿಕ ಕ್ರೀಡೋತ್ಸವದಲ್ಲಿ ಮುಖ್ಯ...
ಉಡುಪಿಸುದ್ದಿ

ಉಡುಪಿಯ ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಸನ್ಮಾನ ಪಡೆದ ಹಿನ್ನೆಲೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು. ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲಾ ರಾಜ್ಯೋತ್ಸವ ಸನ್ಮಾನ ಪುರಸ್ಕೃತ ಹಿರಿಯ ಪತ್ರಕರ್ತ ಪ್ರಭಾಕರ ಆಚಾರ್ಯ ಚಿತ್ತೂರು ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ...
ಉಡುಪಿಕ್ರೀಡೆಸುದ್ದಿ

ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಶಾಲೆಯ ವೈಭವದ ಕ್ರೀಡಾಕೂಟ – ಕಹಳೆ ನ್ಯೂಸ್

ಕುಂದಾಪುರ: ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಇದರ ವಾರ್ಷಿಕ ಕ್ರೀಡಾ ಕೂಟವು ಕುಂದಾಪುರ ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು. ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಲೋಕ ಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಯವರು" ಸಾಧನೆಯಲ್ಲಿ ಛಲವಿದ್ದವರಿಗೆ ಯಾವುದೂ ಹಿನ್ನಡೆಯಾಗುವುದಿಲ್ಲ.ನಿರ್ದಿಷ್ಟವಾದ ಗುರಿ ಉದ್ದೇಶದಿಂದ ಸ್ಪಷ್ಟವಾದ ದಾರಿಯಲ್ಲಿ ಸಾಗಿದಾಗ ಯಶಸ್ಸು ಖಂಡಿತ ಸಿಗುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಸೋಲು ಮತ್ತು...
ಉಡುಪಿಕ್ರೈಮ್ರಾಜ್ಯಸಿನಿಮಾಸುದ್ದಿ

ಕೊಲ್ಲೂರು ಸಮೀಪ ರಿಷಬ್​ ಶೆಟ್ಟಿ ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಅಪಘಾತ – ಹಲವು ಕಲಾವಿದರಿಗೆ ಗಂಭೀರ ಗಾಯ ; ಎಚ್ಚರಿಕೆ ನೀಡಿತಾ ದೈವ..?? – ಕಹಳೆ ನ್ಯೂಸ್

ಉಡುಪಿ: ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ನಟಿಸುತ್ತಿರುವ ಕಲಾವಿದರ ಬಸ್​ ಅಪಘಾತ ಆಗಿದೆ. ಶೂಟಿಂಗ್ ಸಲುವಾಗಿ ಜ್ಯೂನಿಯರ್​ ಕಲಾವಿದರನ್ನು ಕರೆದುಕೊಂಡು ಹೋಗಿದ್ದ ಮಿನಿ ಬಸ್​ ಪಲ್ಟಿ ಆಗಿದೆ.   ಕೊಲ್ಲೂರು ಸಮೀಪದ ಜಡ್ಕಳ್ ಬಳಿ ಪಲ್ಟಿಯಾದ ಬಸ್​ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾಂತಾರಾ...
ಉಡುಪಿಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾದ ಸಿಮೆಂಟ್ ಲಾರಿ – ಕಹಳೆ ನ್ಯೂಸ್

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿಯೊಂದು ರಸ್ತೆ ವಿಭಜಕದ ಮಧ್ಯೆ ಪಲ್ಟಿಯಾದ ಘಟನೆ ನಡೆದಿದೆ. ಗುರುವಾರ ರಾತ್ರಿ ಅಂಬಾಗಿಲು-ಮಣಿಪಾಲ ರಸ್ತೆಯ ಅಂಬಾಗಿಲು ಸುಜಾತಾ ಕಟ್ಟಡದ ಬಳಿ ಈ ಘಟನೆ ನಡೆದಿದೆ. ಅಂಬಾಗಿಲು ಕಡೆಯಿಂದ ಬರುತ್ತಿದ್ದ ಲಾರಿ ಅಂಬಾಗಿಲು - ಮಣಿಪಾಲ ರಸ್ತೆ ಪ್ರವೇಶಿಸುತ್ತಿತ್ತು. ಟ್ರಕ್ ಚಾಲಕ ಏಕಾಏಕಿ ಓವರ್ ಸ್ಪೀಡ್ ಟರ್ನ್ ಮಾಡಿ ನಿಯಂತ್ರಣ ತಪ್ಪಿದ ಪರಿಣಾಮ ಟ್ರಕ್ ಡಿವೈಡರ್ ಮೇಲೆ ಪಲ್ಟಿಯಾಗಿದೆ. ಈ ಘಟನೆ ಸಮೀಪದ ಕಟ್ಟಡದ...
1 39 40 41 42 43 120
Page 41 of 120