Wednesday, May 22, 2024

ಉಡುಪಿ

ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ; ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ವರುಣನ ಆರ್ಭಟ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಚನ್ನಬಸವನಗೌಡ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಮಳೆಯ ತೀವ್ರತೆಯ ಮುನ್ಸೂಚನೆ ನೀಡಿದ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆಉತ್ತರ ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಶಿವಮೊಗ್ಗ , ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಗಳಲ್ಲೂ ಭಾರೀ...
ಉಡುಪಿರಾಜ್ಯಸುದ್ದಿ

ಶ್ರೀಕೃಷ್ಣನ ಅನುಗ್ರಹದಿಂದ ಕೊರೊನಾ ಗೆದ್ದುಬಂದ ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ; ಶ್ರೀಗಳು ಫೀಟ್ ಆಂಡ್ ಫೈನ್ – ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ – ಕಹಳೆ ನ್ಯೂಸ್

ಉಡುಪಿ, ಆ. 02 : ಕೊರೊನಾ ಸೋಂಕು ದೃಢಪಟ್ಟಿದ್ದ ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು 12 ದಿನಗಳ ಚಿಕಿತ್ಸೆ ಪಡೆದ ಬಳಿಕ ಆಗಸ್ಟ್ 1 ರ ಶನಿವಾರ ಇಲ್ಲಿನ ಕೆಎಂಸಿ ಮಣಿಪಾಲದಿಂದ ಬಿಡುಗಡೆ ಆಗಿದ್ದಾರೆ. ಕೊರೊನಾ ಸೋಂಕು ಲಕ್ಷಣ ಕಾರಣ ಜುಲೈ 21 ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಸ್ಪತ್ರೆಯಲ್ಲಿಯೂ ಅವರು ತಮ್ಮ ನಿತ್ಯ ಪೂಜೆಗಳನ್ನು ಮಾಡುತ್ತಿದ್ದರು. ತಮ್ಮ ವಾರ್ಷಿಕ ಚಾರ್ತುಮಾಸ ವ್ರತವನ್ನು ಆಸ್ಪತ್ರೆಯಲ್ಲಿಯೂ ಮಾಡುತ್ತಿದ್ದರು. ಈಗ ಅವರು...
ಉಡುಪಿರಾಷ್ಟ್ರೀಯ

‘ ರಾಮ ಮಂದಿರ ಭೂಮಿ ಪೂಜೆಯನ್ನು ಹಬ್ಬವಾಗಿ ಆಚರಿಸೋಣ’ ; ಸುದ್ದಿಗೋಷ್ಠಿಯಲ್ಲಿ ಪೇಜಾವರ ಸ್ವಾಮೀಜಿ – ಕಹಳೆ ನ್ಯೂಸ್

ಉಡುಪಿ, ಆ. 02 : ''ಅಯೋಧ್ಯೆಯಲ್ಲಿರುವ ರಾಮ ಮಂದಿರವು ಇಡೀ ಹಿಂದೂ ಸಮಾಜದ ಕನಸಾಗಿದ್ದು ಆಗಸ್ಟ್ 5 ರಂದು ನಡೆಯುವ ಭವ್ಯ ದೇವಾಲಯದ ಭೂಮಿ ಪೂಜೆಯ ಸಮಾರಂಭವನ್ನು ಪ್ರತಿಯೊಬ್ಬರು ಹಬ್ಬವಾಗಿ ಆಚರಿಸಬೇಕು'' ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಕರೆ ನೀಡಿದ್ದಾರೆ.       "ಭಗವಂತ ರಾಮನ ಆರಾಧನೆಯನ್ನು ನಾವು ಮುಂದುವರೆಸಬೇಕು. ಕೊರೊನಾ ಪರಿಸ್ಥಿತಿಯ ಸಂದರ್ಭದಲ್ಲಿಯೂ...
ಉಡುಪಿದಕ್ಷಿಣ ಕನ್ನಡ

ದ.ಕ. ಜಿಲ್ಲೆಯಲ್ಲಿ 139 ;ಉಡುಪಿಯಲ್ಲಿ ಮತ್ತೆ 136 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿದ್ದು ಇಂದು 139 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,852 ಕ್ಕೆ ಏರಿಕೆಯಾಗಿದೆ. ಇನ್ನು ಶನಿವಾರ 6 ಕೊರೊನಾ ಸಾವುಗಳು ವರದಿಯಾಗಿದ್ದು ಜಿಲ್ಲೆಯಲ್ಲಿ ಈವರೆಗೆ 159 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 54 ಮಂದಿ ಗುಣಮುಖರಾಗಿದ್ದು ಈವರೆಗೆ 2685 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 3008 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಮಂಗಳೂರಿನಲ್ಲಿ 91, ಬಂಟ್ವಾಳದಲ್ಲಿ...
ಉಡುಪಿ

ಉಡುಪಿ ಜಿಲ್ಲೆಯಲ್ಲಿ ರವಿವಾರ 169 ಮಂದಿಗೆ ಕೊರೋನ ಪಾಸಿಟಿವ್-ಕಹಳೆ ನ್ಯೂಸ್

ಉಡುಪಿ, ಜು.26: ಜಿಲ್ಲೆಯಲ್ಲಿ ರವಿವಾರ 169 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಅಲ್ಲದೇ ದಿನದಲ್ಲಿ 706 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ. ರವಿವಾರ ಕೊರೋನ ಸೋಂಕು ಪತ್ತೆಯಾದ 169 ಮಂದಿಯಲ್ಲಿ ಉಡುಪಿ ತಾಲೂಕಿನ 86 ಮಂದಿ, ಕುಂದಾಪುರ ತಾಲೂಕಿನ 31 ಮಂದಿ ಹಾಗೂ ಕಾರ್ಕಳ ತಾಲೂಕಿನ 52 ಮಂದಿ ಸೇರಿದ್ದಾರೆ. 89...
ಉಡುಪಿಸುದ್ದಿ

ಉಡುಪಿ ಜಿಲ್ಲೆಯಲ್ಲಿಂದು 160 ಮಂದಿಗೆ ಕೊರೊನಾ ಪಾಸಿಟಿವ್ ; ಓರ್ವ ಮಹಿಳೆ ಸಾವು – ಕಹಳೆ ನ್ಯೂಸ್

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಅಬ್ಬರ ಜೋರಾಗಿದ್ದು ಗುರುವಾರ 160 ಮಂದಿಯಲ್ಲಿ ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ದೃಢಪಟ್ಟಿವೆ. 70 ವರ್ಷದ ಮಹಿಳೆಯೊಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬುಧವಾರ ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಕರಣಗಳು ದೃಢಪಟ್ಟಿದು ಇಂದು ಮತ್ತೆ 160 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಪಡುಬಿದ್ರಿ ಪರಿಸರದಲ್ಲಿ 12 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ, ಇಲ್ಲಿನ ಪ್ರಾಥಮಿಕ ಅರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹೆಜಮಾಡಿ, ಉಚ್ಚಿಲ, ನಡ್ಸಾಲ್, ಗ್ರಾಮಗಳ ವ್ಯಕ್ತಿಗಳಲ್ಲಿ ಸೋಂಕು ಹರಡಿದ್ದು ಇವರೆಲ್ಲರೂ...
ಉಡುಪಿಸುದ್ದಿ

ಉಡುಪಿಯಲ್ಲಿ ಒಂದೇ ದಿನ 281 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಉಡುಪಿ, ಜು. 22 : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗಿದೆ. ಬುಧವಾರದಂದು ಒಂದೇ ದಿನ 281 ಹೊಸ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ.   ಬುಧವಾರದಂದು ಅತ್ಯಧಿಕ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 2686ಕ್ಕೆ ಏರಿಕೆಯಾಗಿದೆ. ಈ ನಡುವೆ, 135 ಮಂದಿಯ ಪರೀಕ್ಷಾ ವರದಿ ಬುಧವಾರದಂದು ನೆಗೆಟಿವ್ ಆಗಿದೆ. ಜಿಲ್ಲೆಯಲ್ಲಿ ಬುಧವಾರದಂದು 24 ಮಂದಿ ಗುಣಮುಖರಾಗಿದ್ದು, ಆ ಮೂಲಕ ಒಟ್ಟು 1369 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ....
ಉಡುಪಿಬೈಂದೂರುಸಿನಿಮಾ

ಉಡುಪಿ ಜಿಲ್ಲೆಯ ಬೈಂದೂರಿನ ಗಂಟಿಹೊಳೆಯಲ್ಲಿರುವ ತಮ್ಮ ಗದ್ದೆಯಲ್ಲಿ ಗೊಬ್ಬರ ಹೊತ್ತು ಬೆವರು ಸುರಿಸಿ ನಾಟಿ ಮಾಡಿದ ಭೂಮಿ ಶೆಟ್ಟಿ – ಕಹಳೆ ನ್ಯೂಸ್

ಉಡುಪಿ: ಕೊರೊನಾ ಎಂಬ ಮಹಾಮಾರಿ ರಾಜ್ಯಕ್ಕೆ ಕಾಲಿಟ್ಟು ಲಾಕ್‍ಡೌನ್ ಘೋಷಣೆಯಾದ ಬಳಿಕ ಉದ್ಯೋಗಕ್ಕೆಂದು ಮನೆ ಬಿಟ್ಟು ಹೊರ ಹೋದವರು ತಮ್ಮ ತಮ್ಮ ಮನೆಗೆ ವಾಪಸ್ಸಾಗಿದ್ದಾರೆ. ಅಲ್ಲದೇ ತಮ್ಮನ್ನು ತಾವು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದೇ ರೀತಿ ನಟನೆ, ವಿದ್ಯಾಭ್ಯಾಸ ಎಂದು ಸಿಲಿಕಾನ್ ಸಿಟಿಗೆ ತೆರಳಿದ್ದ ಬಿಗ್‍ಬಾಸ್ 7ರ ಸ್ಪರ್ಧಿ ಭೂಮಿ ಶೆಟ್ಟಿ ಕೂಡ ಇದೀಗ ಮನೆಗೆ ಬಂದಿದ್ದು, ಗದ್ದೆ ನಾಟಿ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಹೌದು. ಓದಿನ ಜೊತೆಗೆ ನಟನೆ ಮಾಡಿಕೊಂಡು...
1 45 46 47 48 49 50
Page 47 of 50