Recent Posts

Saturday, May 9, 2026

ಉಡುಪಿ

ಉಡುಪಿ

ಉಡುಪಿ ಅಕ್ರಮ ಪ್ರಾರ್ಥನಾ ಮಂದಿರ, ಕಟ್ಟಡಗಳ ನಿರ್ಮಾಣಕ್ಕೆ ಸಹಕರಿಸಿದ ಅಧಿಕಾರಿಗಳನ್ನು ಅಮಾನತು ಮಾಡಿ: ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ – ಕಹಳೆ ನ್ಯೂಸ್

ನ್ಯಾಯಮೂರ್ತಿಗಳ ನೇತೃತ್ವದ ಆಯೋಗದ ತನಿಖೆಯ ಹಿನ್ನೆಲೆಯಲ್ಲಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರನ್ನು ಜಿಲ್ಲಾಧಿಕಾರಿಗಳು ಅಮಾನತು ಮಾಡಿದಂತೆ ಅಕ್ರಮ ಪ್ರಾರ್ಥನಾ ಮಂದಿರ, ರೆಸಾರ್ಟ್ ನಿರ್ಮಾಣಕ್ಕೆ ಕಾನೂನುಬಾಹಿರವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಹಕಾರ ನೀಡಿರುವ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಿ ತನಿಖೆ ನಡೆಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಿದ್ದಾರೆ. ಉಡುಪಿ ನಗರಸಭೆ ವ್ಯಾಪ್ತಿಯ ಚಿಟ್ಪಾಡಿಯಲ್ಲಿ ಅಕ್ರಮವಾಗಿ ನಿರ್ಮಿಸುತ್ತಿದ್ದ ಪ್ರಾರ್ಥನಾ ಮಂದಿರಕ್ಕೆ ನಿಯಮಬಾಹಿರವಾಗಿ ಅನುಮತಿ ನೀಡಿ, ನ್ಯಾಯಾಲಯಕ್ಕೂ ತಪ್ಪು ಮಾಹಿತಿ...
ಉಡುಪಿಸುದ್ದಿ

ಸರ್ವ ಸ್ಪರ್ಶಿ, ದೂರ ದೃಷ್ಟಿಯ ಅಭಿವೃದ್ಧಿ ಪರ ಬಜೆಟ್: ಕಿಶೋರ್ ಕುಮಾರ್ ಕುಂದಾಪುರ- ಕಹಳೆ ನ್ಯೂಸ್

ಕೇಂದ್ರ ವಿತ್ತ ಸಚಿವರು ಮಂಡಿಸಿದ 2024-25ನೇ ಸಾಲಿನ ಬಜೆಟ್ ದೇಶವನ್ನು 2047ಕ್ಕೆ ಅಭಿವೃದ್ಧಿ ಹೊಂದಿದ ದೇಶವಾಗಿ ರೂಪಿಸುವಲ್ಲಿ ಕೊಟ್ಟಂತಹ ಒಂದು ರೋಡ್ ಮ್ಯಾಪ್ ಎಂದೇ ಪರಿಗಣಿಸಬಹುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ದೇಶದ ಆದ್ಯತೆಗಳನ್ನು 9 ಕ್ಷೇತ್ರಗಳನ್ನಾಗಿ ವಿಂಗಡಿಸಿ ಅದರಲ್ಲಿ ಸಂಶೋಧನೆ, ವಿಕಾಸ, ಉದ್ಯೋಗ ಸೃಷ್ಟಿ, ಉದ್ಯೋಗಿಗಳಿಗೆ ಬೇಕಾದ ತಂತ್ರಜ್ಞಾನ ಮತ್ತು ಪ್ರೋತ್ಸಾಹ ಧನ ನೀಡುವ ಸರ್ವಾಂಗೀಣ ಅಭಿವೃದ್ಧಿಯ ಬಜೆಟ್ ಇದಾಗಿದೆ. ಮಧ್ಯಮ ವರ್ಗದವರಿಗೂ...
ಉಡುಪಿಸುದ್ದಿ

ಉಡುಪಿ ಶಾಸಕರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರ ಸರ್ಟಿಫಿಕೇಟ್ ಅಗತ್ಯವಿಲ್ಲ : ಜನತೆಯ ಧ್ವನಿಯಾಗಿ ಶಾಸಕರು ಉಸ್ತುವಾರಿ ಸಚಿವರನ್ನು ಪ್ರಶ್ನಿಸುವುದೇ ತಪ್ಪೇ..??? : ಜಿಲ್ಲೆಯಲ್ಲಿ 5 ಬಿಜೆಪಿ ಶಾಸಕರು ಎಂಬ ಕಾರಣಕ್ಕೆ ಸಚಿವರ ಸರ್ವಾಧಿಕಾರಿ ಧೋರಣೆ ಸರಿಯೇ..??? : ಸಂಧ್ಯಾ ರಮೇಶ್ ಆಕ್ರೋಶ- ಕಹಳೆ ನ್ಯೂಸ್

ಉಡುಪಿ ಜಿಲ್ಲೆಯ ಬಗ್ಗೆ ನಿರಂತರವಾಗಿ ನಿರ್ಲಕ್ಷ್ಯ ವಹಿಸುತ್ತ ಸ್ವಪಕ್ಷದ ಕಾರ್ಯಕರ್ತರ ಗೋ ಬ್ಯಾಕ್ ಅಭಿಯಾನಕ್ಕೆ ಓಡೋಡಿ ಬಂದು ಕಾಟಾಚಾರಕ್ಕೆ ಪ್ರಾಕೃತಿಕ ವಿಕೋಪದ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡೆಯನ್ನು ಖಂಡಿಸಿದ ಉಡುಪಿ ಶಾಸಕರ ವಿರುದ್ಧ ಕಾಂಗ್ರೆಸ್ ಮುಖಂಡರು ಹತಾಶ ಹೇಳಿಕೆ ನೀಡುತ್ತಿದ್ದು, ಶಾಸಕರ ಕಾರ್ಯ ವೈಖರಿ, ಹಾಗೂ ಸಿದ್ಧಾಂತ ವಿಚಾರದಲ್ಲಿನ ಬದ್ಧತೆಯ ಬಗ್ಗೆ ಕಾಂಗ್ರೆಸ್ ನಾಯಕರ ಸರ್ಟಿಫಿಕೇಟ್ ಅಗತ್ಯವಿಲ್ಲ ಎಂದು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ...
ಉಡುಪಿಸುದ್ದಿ

ವಾರಿಸುದಾರರಿಲ್ಲದ ಶವದ ಸಂಸ್ಕಾರ ನೆರವೇರಿಸಿದ ವಿಶು ಶೆಟ್ಟಿ – ಕಹಳೆ ನ್ಯೂಸ್

ಉಡುಪಿ: ಕಳೆದ 4 ವರ್ಷಗಳಿಂದ ಹೊಸಬೆಳಕು ಆಶ್ರಮದಲ್ಲಿ ಆಶ್ರಯ ಪಡೆದ ವೃದ್ಧರು ನಿಧನ ಹೊಂದಿದ್ದು, ಸಂಬಂಧಿಕರ ಪತ್ತೆಯಾಗದೆ ಇರುವುದರಿಂದ ವಿಶು ಶೆಟ್ಟಿಯವರು ವೃದ್ಧರ ಶವ ಸಂಸ್ಕಾರವನ್ನು ಬೀಡಿನ ಗುಡ್ಡೆ ರುದ್ರಭೂಮಿಯಲ್ಲಿ ನೆರವೇರಿಸಿದರು. ಮೃತ ವೃದ್ಧ ನಾಗಪ್ಪ ನಾಡಾರ್ (85), ಅವರ ಸಂಬಂಧಿಕರ ಪತ್ತೆಗೆ ಮಾಧ್ಯಮ ಪ್ರಕಟಣೆ ನೀಡಿದರೂ ಸಂಬಂಧಿಕರು ಪತ್ತೆ ಆಗಲಿಲ್ಲ. ಶವ ಸಂಸ್ಕಾರದಲ್ಲಿ ಆಶ್ರಮದ ಮುಖ್ಯಸ್ಥರಾದ ಶ್ರೀಮತಿ ತನುಲ ಹಾಗೂ ಆಶ್ರಮ ವಾಸಿಗಳು ಸಹಕರಿಸಿದರು. ಅಂಬಲಪಾಡಿ ಕೃಷ್ಣ ರವರು...
ಉಡುಪಿ

ಪತ್ರಿಕೋದ್ಯಮವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಕೊಂಡಿ : ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ -ಕಹಳೆ ನ್ಯೂಸ್

ಉಡುಪಿ: ಪತ್ರಿಕೋದ್ಯಮವು ಸಮಾಜದಲ್ಲಿನ ಜನಸಾಮಾನ್ಯರ ಆಗು-ಹೋಗುಗಳು ಸೇರಿದಂತೆ ಪ್ರತಿಯೊಂದು ಆಯಾಮಗಳನ್ನು ರಚನಾತ್ಮಕವಾಗಿ ರಚಿಸಿ, ಅವರುಗಳ ಆಶೋತ್ತರಗಳಿಗೆ ಸ್ಪಂದಿಸುವ ಕೊಂಡಿಯ ರೀತಿಯಲ್ಲಿ ದಿನನಿತ್ಯ ಕೆಲಸ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಅಜ್ಜರಕಾಡಿನ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ...
ಉಡುಪಿಸುದ್ದಿ

ಜು.25ರಿಂದ ಉಡುಪಿಯಲ್ಲಿ ಭಂಡಾರಕೇರಿ ಮಠಾಧೀಶರಾದ ವಿದ್ವೇಶತೀರ್ಥ ಶ್ರೀಪಾದರ 45ನೇ ಚಾರ್ತುಮಾಸ್ಯ ವೃತ ಆರ0ಭ -ಕಹಳೆ ನ್ಯೂಸ್

ಉಡುಪಿ : ಉಡುಪಿಯ ಭಂಡಾರಕೇರಿ ಮಠಾಧೀಶರಾದ ವಿದ್ವೇಶತೀರ್ಥ ಶ್ರೀಪಾದರು ಜುಲೈ 25ರಿಂದ ಸೆಪ್ಟೆಂಬರ್ 18ರವರೆಗೆ ಉಡುಪಿ ರಥಬೀದಿಯಲ್ಲಿರುವ ಭಂಡಾರಕೇರಿ ಮಠದಲ್ಲಿ 45ನೇ ಚಾರ್ತುಮಾಸ್ಯ ವೃತವನ್ನು ಕೈಗೊಳ್ಳಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠದ ದಿವಾನರಾದ ನಾಗರಾಜ್ ಆಚಾರ್ಯ ತಿಳಿಸಿದರು. ಉಡುಪಿ ಕೃಷ್ಣಮಠದ ಕನಕ ಮಂಟಪದಲ್ಲಿ  ನಡೆದ ಸುದ್ದಿಗೋಷ್ಠಿಯಲ್ಲಿ ಅವರು‌ ಮಾಹಿತಿ ನೀಡಿದರು. ಈ‌ ಅವಧಿಯಲ್ಲಿ ಶ್ರೀಗಳಿಂದ ಮಠದಲ್ಲಿ ದಿನನಿತ್ಯ ಪಟ್ಟದ ದೇವರ ಪೂಜೆ, ಧಾರ್ಮಿಕ ವಾಠ-ಪ್ರವಚನ, ಧಾರ್ಮಿಕ ಉಪನ್ಯಾಸಗಳು ನಡೆಯಲಿವೆ. ಹಾಗೆ,...
ಉಡುಪಿಸುದ್ದಿ

ನೂತನ ವಿಧಾನ ಪರಿಷತ್ ಸದಸ್ಯ ಡಾ! ಧನಂಜಯ ಸರ್ಜಿ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನ- ಕಹಳೆ ನ್ಯೂಸ್

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆದ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ನೂತನ ವಿಧಾನ ಪರಿಷತ್ ಸದಸ್ಯ ಡಾ! ಧನಂಜಯ ಸರ್ಜಿ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಸಕಲೇಶಪುರ ಶಾಸಕ...
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುಸುದ್ದಿ

ರಾಜ್ಯದಲ್ಲಿ ಇನ್ನೂ 6 ದಿನ ಮುಂದುವರಿಯಲಿದೆ ಮಳೆಯ ಆರ್ಭಟ ; ಕರಾವಳಿಗೆ 4 ದಿನ ಯೆಲ್ಲೋ ಅಲರ್ಟ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ (Karnataka) ಇನ್ನೂ 6 ದಿನ ಮಳೆಯ (Rain) ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ಇಂದಿನಿಂದ 6 ದಿನಗಳವರೆಗೆ ಮಳೆ ಮುಂದುವರಿಯಲಿದೆ ಎಂದು ಯಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಬೆಂಗಳೂರಿನಲ್ಲಿ (Bengaluru) ಇನ್ನೂ...
1 54 55 56 57 58 121
Page 56 of 121