Monday, May 4, 2026

ಉಡುಪಿ

ಉಡುಪಿಕುಂದಾಪುರಸುದ್ದಿ

ಕುಂದಾಪುರ :ಕಂಡ್ಲೂರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಛಾಯಾಗ್ರಾಹಕ-ಕಹಳೆ ನ್ಯೂಸ್

ಕುಂದಾಪುರ : ಗಂಡ ಹೆಂಡತಿ ನಡುವೆ ನಡೆದ ಗಲಾಟೆ ಪೊಲೀಸ್ ಮೆಟ್ಟಿಲೇರಿದ ಪರಿಣಾಮ ಮನನೊಂದು ಪತಿ ಮನೆಯವರ ಎದುರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಡ್ಲೂರು ಎಂಬಲ್ಲಿ ಮಂಗಳವಾರ ಮಧ್ಯಾಹ್ನದ ಸುಮಾರಿಗೆ ನಡೆದಿದೆ. ನದಿಗೆ ಹಾರಿ ನಾಪತ್ತೆಯಾಗಿರುವವರನ್ನು ಕಾಳಾವರ ಜನತಾ ಕಾಲನಿ ನಿವಾಸಿ ಹರೀಶ್ (44) ಎಂದು ಗುರುತಿಸಲಾಗಿದ್ದು, ಇವರು ವೃತ್ತಿಯಲ್ಲಿ ಪೋಟೋಗ್ರಾಫರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಹರಿಶ್ ಸುಮಾರು 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಯಾಗಿದ್ದು,...
ಉಡುಪಿಸುದ್ದಿ

ಉಡುಪಿಯಲ್ಲಿ ನಡೆದಿದ್ದ ಭಾರೀ ಬೆಂಕಿ ಅವಘಡ ; ಅಗ್ನಿ ಅವಘಡದಲ್ಲಿ ಪತಿಯ ಜೊತೆ ಪತ್ನಿಯ ದುರ್ಮರಣ-ಕಹಳೆ ನ್ಯೂಸ್

ಉಡುಪಿ : ಎಸಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿ ದಂಪತಿಗಳಿಬ್ಬರು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ನಿನ್ನೆ ಉಡುಪಿಯ ಮನೆಯೊಂದರಲ್ಲಿ ಎಸಿ ಶಾರ್ಟ್ ಸರ್ಕ್ಯೂಟ್ ಅಗ್ನಿ ಅವಘಡ ಸಂಭವಿಸಿದ್ದು, ರಮಾನಂದ ಶೆಟ್ಟಿ(55) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಬೆಂಕಿ ಕೆನ್ನಾಲೆಗೆ ಉಸಿರಾಡಲು ಸಾಧ್ಯವಾಗದೆ ಮೆದುಳು ಹಾಗೂ ಶ್ವಾಸಕೋಶ ಬ್ಲಾಕ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಮಾನಂದ ಶೆಟ್ಟಿಯವರ ಪತ್ನಿ ಅಶ್ವಿನಿ(50) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ....
ಉಡುಪಿಸುದ್ದಿ

ಉಡುಪಿ: ರಜತಾದ್ರಿಯಲ್ಲಿ ಸಂಸದರ ಕಚೇರಿ ಉದ್ಘಾಟನೆ-ಕಹಳೆ ನ್ಯೂಸ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಅಧಿಕೃತ ಕಚೇರಿಯನ್ನು ಮಣಿಪಾಲದ 'ರಜತ್ರಾದ್ರಿ'ಯ 'ಸಿ' ಬ್ಲಾಕ್ ನಲ್ಲಿ ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಸಂಸದ ಕೋಟ, ಜನಪರ ಕೆಲಸ ಕಾರ್ಯಗಳನ್ನು ಮಾಡಲು, ಸಾರ್ವಜನಿಕರ ಬೇಡಿಕೆ, ಕುಂದು ಕೊರತೆಗಳನ್ನು ಆಲಿಸಲು ಲೋಕಸಭಾ ಕ್ಷೇತ್ರದ ಸಂಸದರ ಅಧಿಕೃತ ಕಛೇರಿಯನ್ನು...
ಉಡುಪಿಕುಂದಾಪುರಸುದ್ದಿ

ಲಯನ್ಸ್ ಕ್ಲಬ್ ಕ್ರೌನ್‍ವತಿಯಿಂದ ಮೂರು ದಿನಗಳ ಕಾಲ ನಡೆದ ಹಲಸು ಮತ್ತು ಕೃಷಿ ಮೇಳ-ಕಹಳೆ ನ್ಯೂಸ್

 ಕುಂದಾಪುರ :ರೈತವ್ಯಾಪ್ತಿ ವರ್ಗದವರಿಗೆ, ಹಾಗೂ ಗ್ರಾಹಕರಿಗೆ ಅನುಕೂಲವಾಗುವಂತಹ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಕ್ರೌನ್ ಆಯೋಜಿಸಿರುವುದು ಅಭಿನಂದನೀಯ. ಮುಖ್ಯವಾಗಿ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಇಂಥಹ ಕಾರ್ಯಕ್ರಮಗಳು ಪೂರಕವಾಗಬೇಕು. ಈ ಮೂರು ದಿನಗಳಲ್ಲಿ ಸುಮಾರು 20,000 ಗಿಡಗಳ ವ್ಯಾಪಾರ ಮಾರಾಟವಾಗಿರುವುದು ಕೇಳಿ ಸಂತೋಷವಾಯಿತು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕುಂದಾಪುರದ ನೆಹರು ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಹಲಸು ಮತ್ತು ಕೃಷಿ ಮೇಳ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ...
ಉಡುಪಿಕುಂದಾಪುರಸುದ್ದಿ

ರಕ್ತದಾನದಿಂದ ಆರೋಗ್ಯವಂತ ಭಾರತ ನಿರ್ಮಾಣವಾಗುತ್ತದೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ-ಕಹಳೆ ನ್ಯೂಸ್

ಕುಂದಾಪುರ : ದತ್ತಾಶ್ರಮ ಆದಿಶಕ್ತಿ ಮಠ ಚಾರಿಟೇಬಲ್ ಟ್ರಸ್ಟ್ ಆನಗಳ್ಳಿ, ಗೆಳೆಯರ ಬಳಗ ಆನಗಳ್ಳಿ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ರಿಜಾಯ್ ಇವೆಂಟ್ ಗ್ರೂಪ್, ಹಾಗೂ ರಕ್ತ ನಿಧಿ ಕೆಎಂಸಿ ಆಸ್ಪತ್ರೆ ಮಣಿಪಾಲ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಹಯೋಗದೊಂದಿಗೆ. ಬೃಹತ್ ರಕ್ತದಾನ ಶಿಬಿರ ನಡೆಯಿತು. ರಕ್ತದಾನ ಮಹಾದಾನ, ಯುವ ತರುಣರೇ ಭಾರತೀಯ ಸಮಾಜದಲ್ಲಿ ಆರೋಗ್ಯವಂತ ಭಾರತ ನಿರ್ಮಾಣವಾಗಬೇಕಾದರೆ ರಕ್ತದಾನ ಮಾಡಬೇಕು, ಒಂದೊಂದು ಹನಿ ರಕ್ತವು...
ಉಡುಪಿಸುದ್ದಿ

ಉಡುಪಿ :ಮನೆಯಲ್ಲಿ ಅಗ್ನಿ ಅವಘಡ- ಬಾರ್ ಮಾಲಕ ಸಾವು ,ಪತ್ನಿ ಗಂಭೀರ -ಕಹಳೆ ನ್ಯೂಸ್

ಉಡುಪಿ: ನಗರದ ಬಾರ್ ಮಾಲಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲಕ ಸಾವನ್ನಪ್ಪಿ ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಬಾರ್ ಮಾಲಕ ರಮಾನಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಘಟನೆಯಲ್ಲಿ ಅವರ ಪತ್ನಿ ಅಶ್ವಿನಿ ಅವರಿಗೂ ಗಂಭೀರ...
ಉಡುಪಿಸುದ್ದಿ

ಉಡುಪಿ ಪತ್ರಿಕಾ ಭವನ ಪರಿಸರದಲ್ಲಿ ಪತ್ರಕರ್ತರಿಂದ ಡೆಂಗ್ಯು ಬಗ್ಗೆ ಜಾಗೃತಿ, ಲಾರ್ವ ಸಮೀಕ್ಷೆ -ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಡೆಂಗ್ಯು ರೋಗ ಹರಡುವ ಈಡೀಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡುವ ದಿನದ ಪ್ರಯುಕ್ತ ಶುಕ್ರವಾರ ಉಡುಪಿ ಪತ್ರಿಕಾ ಭವನದ ಪರಿಸರದಲ್ಲಿ ಪತ್ರಕರ್ತರು ಲಾರ್ವ ಸಮೀಕ್ಷೆ ನಡೆಸಿ, ಲಾರ್ವಗಳನ್ನು ನಾಶ ಪಡಿಸಿ, ಸಾರ್ವಜನಿಕರಿಗೆ ಕರಪತ್ರಪ ವಿತರಿಸಿ ಡೆಂಗ್ಯು ಕಾಯಿಲೆ ಕುರಿತು ಅರಿವು ಮೂಡಿಸಲಾಯಿತು. ಉಡುಪಿ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಾಣಾಧಿಕಾರಿ ಡಾ. ಪ್ರಶಾಂತ್ ಭಟ್ ನೇತೃತ್ವದಲ್ಲಿ...
ಉಡುಪಿಕ್ರೈಮ್ಸುದ್ದಿ

ನಟೋರಿಯಸ್ ಗರುಡ ಗ್ಯಾಂಗ್ ಗೆ ಆರ್ಥಿಕ ನೆರವು ಮತ್ತು ಆಶ್ರಯ ನೀಡಿದ ಆರೋಪ : ಯುವತಿ ಬಂಧನ- ಕಹಳೆ ನ್ಯೂಸ್

ಉಡುಪಿ : ಉಡುಪಿಯಲ್ಲಿ ಗರುಡ ಗ್ಯಾಂಗ್ ಅಟ್ಟಹಾಸ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ಬಂಧನವಾಗಿದೆ. ಹೆದ್ದಾರಿಯಲ್ಲಿ ತಲ್ವಾರ್ ಹಿಡಿದು ಅಟ್ಟಹಾಸ ತೋರಿದ್ದಲ್ಲದೇ ಯುವಕನ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಆರ್ಥಿಕ ಸಹಾಯ ಮಾಡುತ್ತಿದ್ದ ಯುವತಿಯೊಬ್ಬಳನ್ನು ಉಡುಪಿ ಪೋಲಿಸರು ಬಂಧಿಸಿದ್ದಾರೆ‌. ಆರೋಪಿ ಇಸಾಕ್ ಎಂಬ ಯುವಕನ ಗೆಳತಿ, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದ ಸಫರಾ ಎಚ್ ಅಲಿಯಾಸ್ ಸಾಜಿದಾ (21) ಬಂಧಿತ ಯುವತಿ. ದ.ಕ ಜಿಲ್ಲೆ...
1 55 56 57 58 59 120
Page 57 of 120