ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವಸತಿ ನಿಲಯದಲ್ಲಿ ಜರೂರು ದಾಖಲಾತಿ ಪ್ರಕ್ರಿಯೆ ಪ್ರಾರಂಭಿಸುವ ಬಗ್ಗೆ ಕುಂದಾಪುರ ಶಾಸಕರಿಂದ ಮನವಿ -ಕಹಳೆ ನ್ಯೂಸ್
ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2024 - 25ನೇ ಸಾಲಿಗೆ ವಿದ್ಯಾರ್ಥಿಗಳ ಶಾಲಾ ಹಾಗೂ ಕಾಲೇಜು ದಾಖಲಾತಿ ಪ್ರಾರಂಭವಾಗಿದ್ದು, ಸರಕಾರಿ ವಸತಿ ನಿಲಯಗಳಲ್ಲಿ ದಾಖಲಾತಿ ಪ್ರಾರಂಭವಾಗಿರುವುದಿಲ್ಲ. ಇದರಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದ್ದು , 5 ರಿಂದ 10ನೇ ತರಗತಿ ವಿದ್ಯಾರ್ಥಿಗಳಾಗಿರುವುದರಿಂದ ಪಿ.ಜಿ ಮಾಡಿ ಸಹ ಅವರನ್ನು ಇಡಲು ಸಾಧ್ಯವಾಗದ ಕಾರಣ ಅವರ ಶೈಕ್ಷಣಿಕ ಪ್ರಗತಿಗೆ ಅಡಚಣೆ ಉಂಟಾಗುತ್ತಿದೆ. ಹೊರ ಜಿಲ್ಲೆಗಳ ವಿದ್ಯಾರ್ಥಿಗಳು ಸಹ...





