ಉಡುಪಿ : ಆರು ಲಕ್ಷಕ್ಕೂ ಹೆಚ್ಚು ಮಕ್ಕಳಿಂದ ಶತಕೋಟಿಯೆಡೆಗೆ ರಾಮ ಜಪ – ಕಹಳೆ ನ್ಯೂಸ್
ಉಡುಪಿ : ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣದ ಶತಮಾನಗಳ ಕನಸು ನನಸಾಗುತ್ತಿದೆ. ಆದ್ದರಿಂದ ನೂತನ ಮಂದಿರದಲ್ಲಿ ಶ್ರೀರಾಮನ ಪ್ರತಿμÁ್ಠಪನೆಯವರೆಗೆ ದೇಶದಲ್ಲಿ ಎಲ್ಲ ವಯೋಮಾನದ, ಎಲ್ಲ ಜಾತಿ ಸಮುದಾಯಗಳ ವಿವಿಧ ವೃತ್ತಿ ಕ್ಷೇತ್ರಗಳ ರಾಮನ ವಿಶೇಷ ಸ್ಮರಣೆ, ಸೇವಾ ಕಾರ್ಯಗಳು ನಡೆಯುತ್ತಿವೆ. ಅಯೋಧ್ಯಾ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಎಲ್ಲೆಡೆ ಇದನ್ನು ಉಲ್ಲೇಖಿಸುತ್ತಿದ್ದಾರೆ. ಅದರಂತೆ ಈ ಅಧಿಕ ಮಾಸದಲ್ಲಿ ದಶಕೋಟಿ ಸಾಮೂಹಿಕ...







