Thursday, May 14, 2026

ಉಡುಪಿ

ಉಡುಪಿಸುದ್ದಿ

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ : ಜನತೆ ಶಾಂತಿ ಕಾಪಾಡುವಂತೆ ಪೇಜಾವರ ಶ್ರೀ ಮನವಿ – ಕಹಳೆ ನ್ಯೂಸ್

ಉಡುಪಿ : ದೇಶದ ಅವಿಭಾಜ್ಯ ಅಂಗವಾಗಿರುವ ಮಣಿಪುರ ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಬೆಳವಣಿಗೆಗಳಿಂದ ಮನಸ್ಸಿಗೆ ತುಂಬ ವಿμÁದವಾಗಿದೆ ಎಂದು ಶ್ರೀ ಪೇಜಾವರ ಮಠ ಉಡುಪಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಜಗತ್ತಿಗೇ ಅಹಿಂಸೆ ಶಾಂತಿಯ ಮಂತ್ರವನ್ನು ಅತ್ಯಂತ ಪರಿಣಾಮಕಾರಿಯಾಗಿ ಬೋಧಿಸಿದ ಭಾರತದ ಯಾವುದೇ ಭಾಗದಲ್ಲಿ ಇಂಥ ವಿಲಕ್ಷಣ ಬೆಳವಣಿಗೆಗಳು ನಡೆಯಬಾರದು. ಅದು ನಮಗೆ ಬದುಕು ಕೊಟ್ಟ ನೆಲಕ್ಕೆ ನಾವು ಮಾಡುವ...
ಉಡುಪಿಸುದ್ದಿ

ಆಸ್ಪತ್ರೆ ನಿರ್ಲಕ್ಷ್ಯದಿಂದ ಮೃತಪಟ್ಟ ವಿದ್ಯಾರ್ಥಿನಿ ನಿಖಿತಾ ಪ್ರಕರಣ : ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಧನ ಹಸ್ತಾಂತರ – ಕಹಳೆ ನ್ಯೂಸ್

ಉಡುಪಿ : ನಿರಂತರ ಹೋರಾಟದ ಫಲಶ್ರುತಿಯಾಗಿ ಉಡುಪಿಯ ಖಾಸಗಿ ಅಸ್ಪತ್ರೆಯು ಮಾನವೀಯ ನೆಲೆಯಲ್ಲಿ ಇತ್ತೀಚಿಗೆ ಆಸ್ಪತ್ರೆಯಲ್ಲಿ ನಿಧನರಾದ ಕಾಲೇಜು ವಿದ್ಯಾರ್ಥಿನಿ ನಿಖಿತಾ ಅವರ ಕುಟುಂಬಕ್ಕೆ 20 ಲ. ರೂ.ಗಳ ಪರಿಹಾರ ಧನವನ್ನು ಹಸ್ತಾಂತರ ಮಾಡಿದೆ. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಡಾ. ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಅವರು ಕುಟುಂಬದ ನೋವಿಗೆ ಸ್ಪಂದಿಸಿದ ಆಸ್ಪತ್ರೆ ವೈದ್ಯರು ಹಾಗೂ ವೈದ್ಯಕೀಯ ಸಂಘಟನೆಗಳ ಸ್ಪಂದನೆ ಶ್ಲಾಘನೀಯ. ಈ ಬಗ್ಗೆ ಧ್ವನಿಯೆತ್ತಿ ಸಂಘಟಿತವಾದ ಅಳಲು...
ಉಡುಪಿಯಕ್ಷಗಾನ / ಕಲೆಸುದ್ದಿ

ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟದ ಪ್ರಥಮ ವರ್ಷದ ವಾರ್ಷಿಕೋತ್ಸವ ರಂಗ ಸಂಗಮದಲ್ಲಿ ಆರು ನಾಟಕಗಳ ಯಶಸ್ವಿ ಪ್ರದರ್ಶನ –ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟದ ಪ್ರಥಮ ವರ್ಷದ ವಾರ್ಷಿಕೋತ್ಸವ ರಂಗ ಸಂಗಮ ದಲ್ಲಿ ನಡೆದ ಆರು ನಾಟಕಗಳ ಆಯ್ದ ಭಾಗಗಳ ರಂಗ ದೃಶ್ಯಾವಳಿ ಯಶಸ್ವಿಯಾಗಿ ಪ್ರದರ್ಶನಗೊಂಡಿತು. ಎರಡು ಪಾಶ್ಚಾತ್ಯ ಒಂದು ಮಲೆಯಾಳಂ ಹಾಗೂ ಮೂರು ತುಳುನಾಟಕಗಳ ಆಯ್ದ ಭಾಗಗಳನ್ನು ಉಡುಪಿ ಜಿಲ್ಲೆಯ ವಿವಿಧ ತಂಡಗಳ ಕಲಾವಿದರು ಅಭಿನಯಿಸಿ ಪ್ರದರ್ಶಿಸಿದರು. ವಿಲಿಯಂ ಶೇಕ್ಸ್ಪಿಯರ್ ಬರೆದ “ಮ್ಯಾಕ್ ಬೆತ್” ನಾಟಕದಲ್ಲಿ ಪೂಜಾ ಪೂಜಾರಿ, ಪ್ರಥಮ್ ಶೆಟ್ಟಿ, ಶಶಿರಾಜ್ ಆಚಾರ್ಯ,...
ಉಡುಪಿಸುದ್ದಿ

ವಾರೀಸುದಾರರಿಲ್ಲದ ಶವಗಳ ಅಂತ್ಯ ಸಂಸ್ಕಾರ ಮಾಡಿದ ಸಮಾಜ ಸೇವಕ ನಿತ್ಯಾನಂದ ಒಳಕಾಡು – ಕಹಳೆ ನ್ಯೂಸ್

ಉಡುಪಿ : ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪಿದ ಮುಕೇಶ್ 45 ವರ್ಷ, ನಾಗರಾಜ 33 ವರ್ಷ ಪ್ರಾಯದ ಅನಾಥ ಶವವನ್ನು ಹಾಗೂ ಹೊಸಬೆಳಕು ಆಶ್ರಮದಲ್ಲಿ ಸಾವನ್ನಪ್ಪಿದ 45 ವರ್ಷ ಪ್ರಾಯದ ಬಸವರಾಜು ಎನ್ನುವ ಮೂವರ ಅಂತ್ಯ ಕ್ರಿಯೆಯನ್ನು ಇಂದು ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ನೇರವೇರಿಸಲಾಯಿತು. ಮೃತರ ವಾರೀಸುದಾರರ ಪತ್ತೆಗೆ ಮಾಧ್ಯಮ ಪ್ರಕಟಣೆ ನೀಡಲಾಗಿದ್ದು, ಕಾಯುವಿಕೆಯ ಕಾಲಮಿತಿ ಕಳೆದರೂ ವರೀಸುದಾರರು ಸಂಪರ್ಕಿಸದೆ ಇರುವುದರಿಂದ ಕಾನೂನು ಪ್ರಕ್ರಿಯೆ ನಡೆದ ಬಳಿಕ...
ಉಡುಪಿರಾಜಕೀಯರಾಜ್ಯಸುದ್ದಿ

ಬಿಜೆಪಿ ಶಾಸಕರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ : ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ – ಕಹಳೆ ನ್ಯೂಸ್

ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಿರುವ ಸ್ಪೀಕರ್ ರವರ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಗೂಂಡಾರಾಜ್ ಆಡಳಿತ ಚಾಲ್ತಿಯಲ್ಲಿದೆ. ವಿಧಾನಸಭೆಯ ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಶಾಸಕರು ಸದನದಲ್ಲಿ ಗೂಂಡಾಗಿರಿ ನಡೆಸಿರುವುದನ್ನು ರಾಜ್ಯದ ಜನತೆ ಮರೆತಿಲ್ಲ. ಆಗ ಯಾವುದೇ ಅವಸರದ ಕ್ರಮ ಕೈಗೊಂಡಿರುವುದಿಲ್ಲ. ಪ್ರಜಾಪ್ರಭುತ್ವ...
ಉಡುಪಿರಾಜಕೀಯರಾಜ್ಯಸುದ್ದಿ

ಟೋಲ್‌ಗೇಟ್‌ಗಳಲ್ಲಿ ಪತ್ರಕರ್ತರ ವಾಹನಗಳಿಗೆ ಉಚಿತ ಪ್ರವೇಶ: ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ – ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲೆಯ ಪಡುಬಿದ್ರಿ ಹೆಜಮಾಡಿ ಹಾಗೂ ಬೈಂದೂರು ಶಿರೂರು ಟೋಲ್‌ಗೇಟ್‌ನಲ್ಲಿ ಮಾಧ್ಯಮದವರ ವಾಹನಗಳಿಗೆ ಉಚಿತ ಪ್ರವೇಶ ಕಲ್ಪಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗ ಇಂದು ಕೇಂದ್ರ ಸಚಿವೆ ಹಾಗೂ ಉಡುಪಿ - ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಮಣಿಪಾಲ ರಜತಾದ್ರಿ ಯಲ್ಲಿರುವ ಸಂಸದರ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು. ಜಿಲ್ಲಾ ಸಂಘದಲ್ಲಿ ಸುಮಾರು 170 ಮಂದಿ ಸದಸ್ಯರಿದ್ದು, ಇವರಿಗೆ ರಾಜ್ಯ...
ಉಡುಪಿಸುದ್ದಿ

ಮರವಂತೆ ತ್ರಾಸಿ ಬೀಚ್‌ಗೆ ಇಳಿದ ಯುವಕ ನಾಪತ್ತೆ..! –ಕಹಳೆ ನ್ಯೂಸ್

ಮರವಂತೆ ತ್ರಾಸಿ ಬೀಚ್‌ನಲ್ಲಿ ಪ್ರವಾಸಿಗ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಯುವಕನ್ನು ಗದಗ ಜಿಲ್ಲೆ ಮಂಡರಗಿ ತಾಲೂಕಿನ ಮೆವಂಡಿಯ ಫೀರ್ ನದಾಫ್ ಎಂದು ತಿಳಿದು ಬಂದಿದ್ದು, ಈತ ತನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದಾನೆ. ಈ ವೇಳೆ ಸ್ನಾನಕ್ಕಾಗಿ ಸಮುದ್ರಕ್ಕೆ ಯುವಕರು ಇಳಿದಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆದಿದೆ. ಆದರೆ ಇನ್ನೂ ಯುವಕ ಮಾತ್ರ ಪತ್ತೆಯಾಗಿಲ್ಲ...
ಉಡುಪಿಸುದ್ದಿ

“ಈ ಮೀಡಿಯಾ” ಕನ್ನಡ ವೆಬ್ ಸೈಟ್ ಅನಾವರಣಗೊಳಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಉಡುಪಿ: ಈ ಮೀಡಿಯಾ ಕನ್ನಡ ವೆಬ್ ಸೈಟ್ ಇದರ ಅನಾವರಣ ಕಾರ್ಯಕ್ರಮ ಹೋಟೆಲ್ K1 ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಈ ಮೀಡಿಯಾ ವೆಬ್ ಸೈಟ್ ಅನಾವರಣಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ಹೆಜಮಾಡಿ,...
1 86 87 88 89 90 121
Page 88 of 121