Saturday, July 25, 2026

ಧಾರವಾಡ

ಜಿಲ್ಲೆಧಾರವಾಡಸುದ್ದಿ

ಹೆಂಡತಿ ದಪ್ಪಗಿದ್ದಾಳೆಂದು ಕತ್ತು ಹಿಸುಕಿ ಕೊಲೆಗೈದ ಪತಿ : ವರದಕ್ಷಿಣೆ ಕಿರುಕುಳ ಆರೋಪ -ಕಹಳೆ ನ್ಯೂಸ್

ಧಾರವಾಡ: ಹೆಂಡತಿ ದಪ್ಪಗಿದ್ದಾಳೆ ಎಂದು ಪಾಪಿ ಪತಿ ಕತ್ತು ಹಿಸುಕಿ ಕೊಲೆಗೈದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ನಡೆದಿದೆ. ಪ್ರಿಯಾಂಕ್ ಕಮಲಾಕರ್ (29) ಕೊಲೆಯಾದ ಮಹಿಳೆ. ಬಸವರಾಜ್ ವಡ್ಡರ್ ಕೊಲೆ ಮಾಡಿದ ಪತಿ.‌ 2024 ರಲ್ಲಿ ಪ್ರಿಯಾಂಕ್‌ಳನ್ನ ಮದುವೆಯಾಗಿದ್ದ ಬಸವರಾಜ್ ಮದುವೆಯಾದ  ಒಂದೇ ವರ್ಷದಲ್ಲಿ ಬಂಗಾರ ತರುವಂತೆ ಕಿರುಕುಳ ನೀಡುತಿದ್ದ. ತವರು ‌ಮನೆಯಿಂದ ಬಂಗಾರ, ಹಣ ತರುವಂತೆ ಕಿರುಕುಳ ನೀಡಿದ್ದಲ್ಲದೇ ನೀನು ದಪ್ಪ ಇದ್ದಿ, ಗರ್ಭಿಣಿ ಆಗಲ್ಲ...
ಜಿಲ್ಲೆಧಾರವಾಡಸುದ್ದಿ

ಧಾರವಾಡ ಕೋರ್ಟ್‌ಗೆ ಇ-ಮೇಲ್ ಬಾಂಬ್ ಬೆದರಿಕೆ : ಕಲಾಪ ಸ್ಥಗಿತ -ಕಹಳೆ ನ್ಯೂಸ್

ಧಾರವಾಡ: ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ  ಬಂದ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಕೋರ್ಟ್ ಕಲಾಪಗಳನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಹೊರಗೆ ಕಳುಹಿಸಲಾಯಿತು. ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಅನುಮಾನಾಸ್ಪದ ಇ-ಮೇಲ್ ಬಂದಿದ್ದು, ಅದರಲ್ಲಿ ಬಾಂಬ್ ಸ್ಫೋಟದ ಬಗ್ಗೆ ಬೆದರಿಕೆ ಹಾಕಲಾಗಿದೆ. ಎಂಬ ಇ-ಮೇಲ್ ವಿಳಾಸದಿಂದ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ನಿನ್ನೆ ಮಧ್ಯಾಹ್ನ 2 ಗಂಟೆಗೆ ನಿಮ್ಮ...
ಧಾರವಾಡಬೆಂಗಳೂರುರಾಜ್ಯಶಿವಮೊಗ್ಗಸುದ್ದಿ

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ : ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ದಾಳಿ -ಕಹಳೆ ನ್ಯೂಸ್

ಬೆಂಗಳೂರು/ಮೈಸೂರು/ದಾವಣಗೆರೆ: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ  ಬಿಸಿ ಮುಟ್ಟಿಸಿದೆ. ಬೆಂಗಳೂರು, ಮೈಸೂರು , ದಾವಣಗೆರೆ ಜಿಲ್ಲೆಗಳಲ್ಲಿ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. PWD ಚೀಫ್‌ ಇಂಜಿನಿಯರ್‌ ಪುರುಷೋತ್ತಮ ದಾಸ್‌ ಎಂಬುವವರಿಗೆ ಸೇರಿದ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ  ನಡೆಸಿದ್ದಾರೆ. ಮೈಸೂರಿನಲ್ಲಿ 5 ಕಡೆ, ಬೆಂಗಳೂರಿನಲ್ಲಿ 6 ಕಡೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳ ಹುಡುಕಾಟ ನಡೆಸಿದ್ದಾರೆ. ದಾವಣಗೆರೆ, ಶಿವಮೊಗ್ಗದಲ್ಲೂ ದಾಳಿ ಬೆಸ್ಕಾಂ ಇಂಜಿನಿಯರ್‌ ಆರ್.ಹೆಚ್ ಅರ್ಜುನ್‌ ಅವರ...
ಧಾರವಾಡಸುದ್ದಿ

ದಾವಣಗೆರೆ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ `ಶಾಮನೂರು ಶಿವಶಂಕರಪ್ಪ’ ಅಂತಿಮ ದರ್ಶನಕ್ಕೆ ಸಿದ್ಧತೆ.!-ಕಹಳೆ ನ್ಯೂಸ್

ದಾವಣಗೆರೆ : ಹಿರಿಯ ರಾಜಕಾರಣಿ, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದು, ದಾವಣಗೆರೆಯ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿಂದ ದಾವಣಗೆರೆಯ ನಿವಾಸಕ್ಕೆ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರರವನ್ನು ರವಾನೆ ಮಾಡಲಾಗಿದೆ. ಮೊದಲು ಹಿರಿಯ ಪುತ್ರ ಎಸ್.ಎಸ್‌. ಬಕ್ಕೇಶ್ ಮನೆಯಲ್ಲಿ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಲಾಗಿದ್ದು,. ಬಳಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12.30ಕ್ಕೆ ಪಿ.ಜೆ‌.ಬಡಾವಣೆಯಲ್ಲಿರುವ ಹೈಸ್ಕೂಲ್ ಮೈದಾನಕ್ಕೆ ಶಾಮನೂರು ಶಿವಶಂಕರಪ್ಪ ಪಾರ್ಥಿವ...
ಜಿಲ್ಲೆಧಾರವಾಡಸುದ್ದಿ

ರಾಜ್ಯದಲ್ಲಿ `ಆನ್ ಲೈನ್ ಗೇಮ್’ಗೆ ಮತ್ತೊಂದು ಬಲಿ : ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ.-ಕಹಳೆ ನ್ಯೂಸ್

ಧಾರವಾಡ : ರಾಜ್ಯದಲ್ಲಿ ಆನ್ ಲೈನ್ ಗೇಮ್ ಗೆ ಮತ್ತೊಂದು ಬಲಿಯಾಗಿದ್ದು, ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದುಕೊಂಡುಕೊಂಡು ಬಸವರಾಜ ಸಕ್ರಪ್ಪನ್ನವರ್ (28) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಸವರಾಜ್ ಆನ್ ಲೈನ್ ಗೇಮ್ ಚಟಕ್ಕೆ ಬಿದ್ದು ಹಣ ಕಳೆದುಕೊಂಡಿದ್ದ. ಯು ಕಿ ಟೆಕ್ಸ್ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಬಸವರಾಜ್...
ಧಾರವಾಡಸುದ್ದಿ

ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ಕಾರು ಹೊತ್ತಿ ಉರಿದು ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನ.!- ಕಹಳೆ ನ್ಯೂಸ್

ಧಾರವಾಡ : ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಮೃತಪಟ್ಟ ಪ್ರಕರಣ ಮಾಸುವ ಮುನ್ನ ಮತ್ತೊಂದು ದುರಂತ ಸಂಭವಿಸಿದ್ದು, ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರ ವಲಯದಲ್ಲಿ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಪರಿಣಾಮ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನವಾಗಿದ್ದಾರೆ. ಹಾವೇರಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಮೃತಪಟ್ಟವರು. ನಿನ್ನೆ...
ಧಾರವಾಡಸಂತಾಪಸುದ್ದಿ

ಹೃದಯಘಾತಕ್ಕೆ ಬಲಿಯಾದ ಹಾಸ್ಯ ಕಲಾವಿದ ಮೌನೇಶ್ ಆಚಾರ್ಯ ಮಾಣಿ -ಕಹಳೆ ನ್ಯೂಸ್

ಹಾಸ್ಯ ಕಲಾವಿದನಾಗಿ ಗುರುತಿಸಿಕೊಂಡಿರುವ ಮೌನೇಶ್ ಆಚಾರ್ಯ ಮಾಣಿ ಕಾಪಿಕಾಡು(42) ಇಂದು ಬೆಳಗ್ಗೆ ಹೃದಯಘಾತದಿಂದ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಾಣಿ ಕಾಪಿಕಾಡಿನ ಮೌನೇಶ್ ಆಚಾರ್ಯ ಅವರು ರಂಗಭೂಮಿ ಕಲಾವಿದರೂ ಹೌದು. ನೆಲ್ಯಾಡಿಯ 'ನಮ್ಮ ಕಲಾವಿದರು' ತಂಡದಲ್ಲಿ ಕಲಾವಿದನಾಗಿ ಹಾಸ್ಯ, ಪೋಷಕ ಪಾತ್ರದಲ್ಲಿ ಗುರುತಿಸಿಕೊಂಡಿರುವವರು. ಸಾಮಾಜಿಕ ಜಾಲತಾಣಗಳಲ್ಲೂ ಇವರ ಹಾಸ್ಯ ಅಭಿನಯ ಪ್ರಖ್ಯಾತಿಯನ್ನು ಪಡೆದಿದೆ. ಮೃತರು ಪತ್ನಿ, ಮಗು, ತಾಯಿ ಹಾಗೂ ತಮ್ಮನನ್ನು ಅಗಲಿದ್ದಾರೆ. ಮೃತರಿಗೆ ಹಲವಾರು ಕಲಾವಿದರು ಹಾಗೂ ಗಣ್ಯರು ಸಂತಾಪ...
ಧಾರವಾಡಸುದ್ದಿ

ನಿಲ್ಲದ ಹೃದಯಾಘಾತ : ಜೀವ ಕಳೆದುಕೊಂಡ ಐಎಎಸ್ ಆಕಾಂಕ್ಷಿ ಜೀವಿತಾ! -ಕಹಳೆ ನ್ಯೂಸ್

ಧಾರವಾಡ: ರಾಜ್ಯಾದ್ಯಂತ ಸರಣಿ ಹೃದಯಾಘಾತ ಪ್ರಕರಣಗಳು ಜನತೆಯನ್ನು ಭೀತಿಗೆ ತಳ್ಳುತ್ತಿದೆ. ಮಂಗಳವಾರ ಯುಪಿಎಸ್‌ಸಿಗೆ ತಯಾರಿ ನಡೆಸುತ್ತಿದ್ದ 26 ವರ್ಷದ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ನಗರದ ಪುರೋಹಿತ್‌ ನಗರದಲ್ಲಿ 26 ವರ್ಷದ ಜೀವಿತಾ ಕುಸಗೂರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜೀವಿತಾ ತಲೆ ಸುತ್ತು ಬರುತ್ತಿರುವುದಾಗಿ ಹೇಳಿ ಸುಸ್ತಾಗಿ ಕುಳಿತಿದ್ದರು. ತಕ್ಷಣ ಕುಟುಂಬಸ್ಥರು ಆಕೆಯನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಜೀವಿತಾ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಮಾರ್ಗ ಮಧ್ಯೆಯೇ...
1 2
Page 1 of 2