ಡಾ. ಧನಂಜಯ ಸರ್ಜಿ, ಎಸ್.ಎಲ್. ಬೋಜೇಗೌಡರ ಗೆಲುವು ಗ್ಯಾರಂಟಿ : ಕಾರ್ಯಕರ್ತರ ಸಭೆಯಲ್ಲಿ ಜನಪ್ರಿಯ ಸಂಸದರಾದ ಬಿ.ವೈ.ರಾಘವೇಂದ್ರ ವಿಶ್ವಾಸ – ಕಹಳೆ ನ್ಯೂಸ್
ಮೈಸೂರು : ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಎಸ್.ಎಲ್.ಬೋಜೇಗೌಡರ ನೂರಕ್ಕೆ ನೂರರಷ್ಟು ಖಚಿತ ಎಂದು ಜನಪ್ರಿಯ ಸಂಸದರಾದ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಇಲ್ಲಿನ ನಜರಾಬಾದ್ ವಸಂತ ಮಹಲ್ ರಸ್ತೆಯ ವಿಕೆ ಪಂಕ್ಷನ್ ಹಾಲ್ ನಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಸಮಯ ಅವಕಾಶ ಕೂಡ ಕಡಿಮೆ ಇರುವುದರಿಂದ ಇಬ್ಬರೂ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಬೇಕು, ಮತದಾರರನ್ನು ವೈಯಕ್ತಿಕವಾಗಿ ಭೇಟಿ ಮಾಡುವ...