Wednesday, April 29, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ವಿದ್ಯಾರ್ಥಿಗಳಿಗೆ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ -ಕಹಳೆ ನ್ಯೂಸ್

ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ಮಂಗಳವಾರ ಕಡಬದ ಸರಸ್ವತಿ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಬಾಲ ವರ್ಗದ ಬಾಲಕರ ವಿಭಾಗದಲ್ಲಿ ಎಂಟನೇ ತರಗತಿಯ ಸನ್ಮಯ್ ಎನ್ ದ್ವಿತೀಯ ಸ್ಥಾನ ಹಾಗೂ ಆರನೇ ತರಗತಿಯ ಸಂಹಿತ್ ಜೋಸ್ಸಿ ಲೋಬೋ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಬಾಲ ವರ್ಗ ಬಾಲಕಿಯರ ವಿಭಾಗದಲ್ಲಿ ಏಳನೇ ತರಗತಿಯ ಸಾನ್ವಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ ಜೀವನದ ಕಾನೂನು ಗಟ್ಟಿಯಾಗಿದ್ದರೆ ಅನ್ಯ ಕಾನೂನಿನ ಅವಶ್ಯಕತೆ ಇಲ್ಲ : ಆಂಜನೇಯ ರೆಡ್ಡಿ -ಕಹಳೆ ನ್ಯೂಸ್

ಪುತ್ತೂರು : ಪಠ್ಯ ಪುಸ್ತಕದಲ್ಲಿ ಉತ್ತಮ ವಿಚಾರಗಳು ಮಾತ್ರ ಇರುತ್ತವೆ. ಆದರೆ ಸಮಾಜದಲ್ಲಿ ಋಣಾತ್ಮಕ ಸಂಗತಿಗಳು ಬೇಗ ಪ್ರಚಾರ ಪಡೆಯುತ್ತವೆ. ನಾವು ಯಾವಾಗಲೂ ಒಳ್ಳೆ ವಿಚಾರಗಳನ್ನು ಚಿಂತನೆ ಮಾಡುತ್ತಿರಬೇಕು. ನಮ್ಮ ಜೀವನದ ಕಾನೂನು ಗಟ್ಟಿಯಾಗಿದ್ದರೆೆ ಹೊರಗಿನ ಕಾನೂನಿನ ಅವಶ್ಯಕತೆ ಇಲ್ಲ ಎಂದು ಪುತ್ತೂರಿನ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಬುಧವಾರ ಆಯೋಜಿಸಲಾದ ಕಾನೂನು ಮಾಹಿತಿ ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆ ನಾಳೆ (ಜು.17ರಂದು) ಅಂಗನವಾಡಿ ,ಶಾಲೆಗಳಿಗೆ ರಜೆ..!! – ಕಹಳೆ ನ್ಯೂಸ್

ಪುತ್ತೂರು: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯನ್ನು ಗಮನದಲ್ಲಿಟ್ಟುಕೊಂಡು, ಜುಲೈ 17, 2025 ರಂದು ಪುತ್ತೂರು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಾಲೂಕು ತಹಶೀಲ್ದಾರರ ಕಾರ್ಯಾಲಯದಿಂದ ಜಾರಿಗೊಂಡಿರುವ ಪ್ರಕಟಣೆಯ ಪ್ರಕಾರ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಈ ಆದೇಶ ಅನ್ವಯವಾಗಲಿದೆ. ಈ ನಿರ್ಧಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ ತೆಗೆದುಕೊಳ್ಳಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ವಿವೇಕ ನಾವಿನ್ಯ- 2025” ; “ ಕಲಿತ ವಿದ್ಯೆಯು ಎಂದಿಗೂ ಕದಿಯಲಾಗದ ಶಾಶ್ವತ ಸಂಪತ್ತು ” – ಖ್ಯಾತ ಕಲಾವಿದರಾದ ಭೋಜರಾಜ್ ವಾಮಂಜೂರು -ಕಹಳೆ ನ್ಯೂಸ್

ಪುತ್ತೂರು : ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ವಿಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅಪಾರ ಆಸಕ್ತಿ ಹೊಂದಿರುತ್ತಾರೆ. ಇಂತಹ ಅಭಿರುಚಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮೊದಲಿಗೆ ಮನೆಯಿಂದ ಆಗಬೇಕು. ಯಾವಾಗ ತಂದೆ-ತಾಯಿ ತಮ್ಮ ಮಕ್ಕಳ ಆಸಕ್ತಿಗಳನ್ನು ಗುರುತಿಸಿ ಬೆಳೆಸುತ್ತಾರೋ, ಅಂತಹ ಮಗು ಯಶಸ್ಸನ್ನು ಕಾಣಲು ಸಾಧ್ಯವಾಗುತ್ತದೆ. ವಿವೇಕಾನಂದ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರತಿಭೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಸಮಾನ ಅವಕಾಶಗಳನ್ನು ನೀಡಿ, ವಿದ್ಯಾರ್ಜನೆಯ ಜೊತೆಗೆ ಪ್ರತಿಯೊಬ್ಬ ವಿದ್ಯಾರ್ಥಿಯು ಅಳವಡಿಸಿಕೊಳ್ಳಲೇಬೇಕಾದ ಸಂಸ್ಕಾರಗಳನ್ನು ಒಳಗೊಂಡ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಇಕೋ ಹಾಗೂ ಹೆಲ್ತ್ ಕ್ಲಬ್ ಉದ್ಘಾಟನೆ -ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಇಕೋ ಹಾಗೂ ಹೆಲ್ತ್ ಕ್ಲಬ್ ನ ಉದ್ಘಾಟನೆಯು ನೆರವೇರಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕರಾದ ಡಾ. ಕೆ.ಎನ್ ಸುಬ್ರಹ್ಮಣ್ಯ ವಿನೂತನ ರೀತಿಯಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ಆಧುನಿಕ ಜಗತ್ತಿನಲ್ಲಿ ಪರಿಸರದ ಬಗೆಗಿನ ಕಾಳಜಿ ಅತೀ ಅಮೂಲ್ಯವಾದದ್ದು. ಪರಿಸರದಲ್ಲಿನ ಜೀವವೈವಿಧ್ಯತೆಯನ್ನು ಕಾಪಾಡದೇ ಇದ್ದಲ್ಲಿ ಪರಿಸರ ಅಸಮತೋಲನ ಹೊಂದಿ ಮನುಕುಲ ಸರ್ವನಾಶವಾಗುವುದರಲ್ಲಿ ಯಾವುದೇ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಲಘು ಉದ್ಯೋಗ ಭಾರತಿಯೊಂದಿಗೆ ಒಡಂಬಡಿಕೆ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು: ದೇಶದ ಆರ್ಥಿಕತೆಗೆ ಹೆಚ್ಚಿನ ಆದಾಯವನ್ನು ಸಣ್ಣ ಕೈಗಾರಿಕೆಯು ನೀಡುತ್ತಿದ್ದು ಇದರ ಬೆಳವಣಿಗೆಯಲ್ಲಿ ಯುವಜನತೆಯ ಪಾತ್ರವು ಮುಖ್ಯವಾಗಿದೆ. ಈ ಸಣ್ಣ ಕೈಗಾರಿಕೆಯು ಹೆಚ್ಚು ಉದ್ಯೋಗಾವಕಾಶವನ್ನು ಸೃಷ್ಟಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಅರಿವು ಮೂಡಿಸುವುದರಲ್ಲಿ ಈ ರೀತಿಯ ಸಂಸ್ಥೆಗಳ ನಡುವಿನ ಒಪ್ಪಂದ ಬಹುಮುಖ್ಯ ಪಾತ್ರವಹಿಸುತ್ತದೆ. ಅಲ್ಲದೇ ಇದು ಗ್ರಾಮೀಣ ಮಟ್ಟದಲ್ಲಿ ಉದ್ಯಮವನ್ನು ಸ್ಥಾಪಿಸಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಲು ಲಘು ಉದ್ಯೋಗ ಭಾರತಿ ಹೆಚ್ಚು ಅವಕಾಶ ನೀಡುತ್ತಿದೆ ಎಂದು  ಲಘು...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ವೀರಕಂಭ ಮಜಿ ಶಾಲೆಗೆ ಕಂಪ್ಯೂಟರ್ ಮೇಜುಗಳ ಹಸ್ತಾಂತರ- ಕಹಳೆ ನ್ಯೂಸ್

ಬಂಟ್ವಾಳ : ಇಂದಿನ ವೈಜ್ಞಾನಿಕ ಯುಗದಲ್ಲಿ ತಂತ್ರಜ್ಞಾನದ ಕಲಿಕೆಯು ಬಹಳ ಮುಖ್ಯ. ನಿತ್ಯ ಜೀವನದಲ್ಲಿ ತಂತ್ರಜ್ಞಾನದ ಇತಿಮಿತಿಯೊಳಗೆ ಕಲಿಕೆಯು ನಡೆಯಬೇಕಾಗುತ್ತದೆ ಮೊಬೈಲ್ ಆಗಲಿ ಕಂಪ್ಯೂಟರ್ ಆಗಲಿ ದುರುಪಯೋಗ ಮಾಡದೆ ಅಗತ್ಯಕಷ್ಟೇ ಬಳಸುವುದರ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಲು ಸಾಧ್ಯವಿದೆ ಇಲ್ಲವಾದರೆ ವ್ಯಸನವಾಗಬಹುದು ಎಂಬುದಾಗಿ ಲಯನ್ಸ್ ಕ್ಲಬ್ ಪ್ರಾಂತ್ಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ವೀರಕಂಭ ಮಜಿ ಶಾಲೆಗೆ ಕಂಪ್ಯೂಟರ್ ಮೇಜುಗಳ ಹಸ್ತಾಂತರ ಮಾಡಿ ಮಾತನಾಡಿದರು....
ಕುಂದಾಪುರಶಿಕ್ಷಣಸುದ್ದಿ

ಭತ್ತದ ನೇಜಿ ನೆಡುವ ಕಾರ್ಯದಲ್ಲಿ ಭಾಗಿಯಾದ ಕುಂದಾಪುರ ತಾಲ್ಲೂಕಿನ ಗುರುಕುಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ತಾಲ್ಲೂಕಿನ ಬಾಂಡ್ಯ ಗ್ರಾಮದ, ಕೆಳ ಬಾಂಡ್ಯದ ಕೃಷಿ ಗದ್ದೆಗಳಲ್ಲಿ ಭಾನುವಾರ ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಭತ್ತದ ನೇಜಿ ನೆಡುವ ಕಾರ್ಯದಲ್ಲಿ ಭಾಗಿಯಾದರು. ಆಗೊಮ್ಮೆ, ಈಗೊಮ್ಮೆ ಭೋ ಎಂದು ಸುರಿಯುವ ಪುನರ್‌ವಸು ಮಳೆ. ಅಕ್ಕ-ಪಕ್ಕದಲ್ಲೆಲ್ಲ ಕೆಸರು ತುಂಬಿದ ಗದ್ದೆಗಳು, ಮೊಳಕಾಲೆತ್ತರಕ್ಕೆ ಉಡುಪನ್ನು ಕಟ್ಟಿಕೊಂಡು ಗದ್ದೆಗಿಳಿದ ಮಕ್ಕಳಲ್ಲಿ ನಾವೇನು ಈ ಕ್ಷೇತ್ರಕ್ಕೆ ಹೊಸಬರಲ್ಲ ಎನ್ನುವ ಹುಮ್ಮಸ್ಸು. ಸ್ಥಳೀಯ ಮಹಿಳೆಯರೊಂದಿಗೆ ಕೈಜೋಡಿಸಿ ಕ್ಷಣಾರ್ಧದಲ್ಲಿ ಸಾಲು ಸಾಲು ನೇಜಿ ಗಿಡಗಳನ್ನು...
1 14 15 16 17 18 80
Page 16 of 80