ನರೇಂದ್ರ ಪ.ಪೂ.ಕಾಲೇಜಿನಲ್ಲಿ “ಜೀವನಕ್ಕಾಗಿ ಅಧ್ಯಯನ” ವಿಶೇಷ ಉಪನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್
ಪುತ್ತೂರು : “ವಿದ್ಯಾರ್ಥಿ ಜೀವನದಲ್ಲಿ ಯಶಸ್ವಿಯಾಗಲು ದೈಹಿಕ ಮತ್ತು ಮಾನಸಿಕ ಆರೋಗ್ಯ ಅತ್ಯಗತ್ಯ. ಹದಿಹರೆಯದಲ್ಲಿ ಹುಡುಗ ಹುಡುಗಿಯರು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಸಮಸ್ಯೆಗಳಿಗೆ ಒಳಗಾಗುತ್ತಾರೆ. ಈ ಸಮಯದಲ್ಲಿ ವೈಜ್ಞಾನಿಕವಾಗಿ ದೇಹದಲ್ಲಿ ಕೆಲವೊಂದು ಸಹಜ ಬದಲಾವಣೆಗಳಾಗುತ್ತವೆ. ಹದಿಹರೆಯದಲ್ಲಿ ಜವಾಬ್ದಾರಿ ಅರಿತು ನಡೆದರೆ ಉತ್ತಮ ಬದುಕು ಕಟ್ಟಿಕೊಳ್ಳಬಹುದು. “ಎಂದು ಪುತ್ತೂರಿನ ಮಕ್ಕಳ ತಜ್ಞರು ಮತ್ತು ಸೈಕೊತೆರಪಿಸ್ಟ್ ಮತ್ತು ಕರ್ನಾಟಕದ ಹದಿಹರೆಯದವರ ಹೆಲ್ತ್ ಅಕಾಡೆಮಿಯ ಕಾರ್ಯಕಾರಿ ಸಮಿತಿ ಸದಸ್ಯರಾದ ಆದ ಡಾ. ಸುಲೇಖ...







