ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಶಾರದಾ ಪೂಜೆ ಹಾಗೂ ವಾಹನಪೂಜೆ- ಕಹಳೆ ನ್ಯೂಸ್
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಗಣಹೋಮ, ಶ್ರೀ ಶಾರದಾ ಪೂಜೆ ಹಾಗೂ ಆಯುಧಪೂಜೆ ಪ್ರಯುಕ್ತ ವಾಹನ ಪೂಜೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನಡೆಯಿತು. ವೇ.ಮೂ.ದೇವರಥ ಭಟ್ಟ ಹಾಗೂ ವೇ.ಮೂ.ವಾಸುದೇವ ಭಟ್ಟರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ಸಂಯೋಜನೆಗೊಂಡಿತು.ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಟ್ರಸ್ಟಿಗಳಾದ ವೈದೇಹಿ...







