ಶ್ರೀರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಅಂಗವಾಗಿ ಜ.22ರಂದು ಬಂಟ್ವಾಳ ತಾಲೂಕಿನ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಸ್ಥಗಿತಗೊಳಿಸುವಂತೆ ಮನವಿ – ಕಹಳೆ ನ್ಯೂಸ್ಕಾನಂದ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಶ್ರೀರಾಮೋತ್ಸವ- ‘ವೀರರಾಮ ಸ್ಮರಣೆ’- ಕಹಳೆ ನ್ಯೂಸ್
ಬಂಟ್ವಾಳ : ಜ.22 ರಂದು ಸೋಮವಾರ ಆಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ತಾಲೂಕಿನ ಎಲ್ಲಾ ಅಂಗಡಿಗಳನ್ನು, ವ್ಯವಹಾರಗಳನ್ನು, ಉದ್ಯಮಗಳನ್ನು ಸ್ವಯಂಪ್ರೇರಿತವಾಗಿ ಸ್ಥಗಿತಗೊಳಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಂಬುದು ಕಳಕಳಿಯ ಮನವಿ ಎಂದು ಅಕ್ಷತೆ ವಿತರಣಾ ಸಮಿತಿ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹಸಂಚಾಲಕ ಪ್ರಸಾದ ಕುಮಾರ್ ರೈ ಹೇಳಿದರು. ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಕಾರ್ಯಕರ್ತರು ಪ್ರತಿ ಅಂಗಡಿಗಳಿಗೆ ತೆರಳಿ...







