Sunday, June 21, 2026

ಆರೋಗ್ಯ

ಆರೋಗ್ಯದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆ – ರಾಜ್ಯದಲ್ಲಿಂದು 463 ಮಂದಿಗೆ ಕೊರೊನಾ ; ಬೆಂಗಳೂರು ನಗರದಲ್ಲಿ 429, ದಕ್ಷಿಣ ಕನ್ನಡದಲ್ಲಿ 14 ಸೋಂಕು – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆಯಾಗಿದೆ. ನಿನ್ನೆ ಶೇ.2.07 ರಷ್ಟಿದ್ದ ಪಾಸಿಟಿವಿಟಿ ದರ ಇಂದು ಶೇ.2.15ಕ್ಕೆ ಏರಿಕೆಯಾಗಿದೆ. 463 ಹೊಸ ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರು ನಗರದಲ್ಲೇ 429 ಪ್ರಕರಣಗಳು ವರದಿಯಾಗಿದೆ. ಇಂದು ಬೆಂಗಳೂರು ನಗರದಲ್ಲಿ 429 ಪ್ರಕರಣ ದಾಖಲಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 3,651ಕ್ಕೆ ಏರಿಕೆ ಕಂಡಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 2.15ಕ್ಕೆ ಏರಿಕೆ ಕಂಡಿದೆ. ಆದರೆ ಇಂದು...
ಅಂತಾರಾಷ್ಟ್ರೀಯಆರೋಗ್ಯಸುದ್ದಿ

ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ; ಶಾಂಫೈ ನಗರದಲ್ಲಿ ಲಾಕ್‌ಡೌನ್ ಜಾರಿ – ಕಹಳೆ ನ್ಯೂಸ್

ಬೀಜಿಂಗ್: ಚೀನಾದ ನಗರ ಶಾಂಘೈನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ. ಸರಕು ಸಾಗಣೆಗೆ ಪ್ರಮುಖ ಬಂದರು ತಾಣವಾಗಿದ್ದ ಶಾಂಘೈನಲ್ಲಿ ಲಾಕ್‌ಡೌನ್ ಘೋಷಿಸಿರುವುದು ಭಾರತಕ್ಕೆ ದೊಡ್ಡ ಪೆಟ್ಟು ನೀಡಿದೆ. ಭಾರತದ ಔಷಧೀಯ ಉದ್ಯಮಕ್ಕೆ ಆತಂಕ ಎದುರಾಗಿದೆ. ಕೋವಿಡ್ ಏಕಾಏಕಿ ನಿಗ್ರಹಿಸಲು ಚೀನಾ ಹಂತಹಂತವಾಗಿ ಲಾಕ್‌ಡೌನ್ ಅನ್ನು ವಿಧಿಸಿದೆ. ಇದರಿಂದಾಗಿ ಅದರ ಎರಡು ಪ್ರಮುಖ ಬಂದರುಗಳಾದ ಶಾಂಘೈ ಮತ್ತು ಶೆನ್‌ಜೆನ್‌ನಲ್ಲಿ ಸರಕು ಸಾಗಣೆ ವಿಳಂಬವಾಗಿದೆ. ಶೆನ್‌ಜೆನ್‌ನಲ್ಲಿ ಕಾರ್ಗೋ ಕಾರ್ಯಾಚರಣೆಗಳು...
ಅಂತಾರಾಷ್ಟ್ರೀಯಆರೋಗ್ಯರಾಜಕೀಯರಾಷ್ಟ್ರೀಯಸುದ್ದಿ

ಹಿಂದಿನ ಸರ್ಕಾರಗಳ ವೈದ್ಯಕೀಯ ಶಿಕ್ಷಣ ನೀತಿ ಸರಿಯಿದ್ದಿದ್ದರೆ ನೀವು ವಿದೇಶಗಳಿಗೆ ಹೋಗುತ್ತಿರಲಿಲ್ಲ : ಭಾರತಕ್ಕೆ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ನವದೆಹಲಿ: ಯುದ್ಧಪೀಡಿತ ಉಕ್ರೇನ್‌ನಿಂದ ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಿದ್ದಾರೆ. ಇದೇ ವೇಳೆ ವೈದ್ಯಕೀಯ ಶಿಕ್ಷಣ ನೀತಿ ವಿಚಾರವಾಗಿ ಹಿಂದಿನ ಸರ್ಕಾರಗಳ ವಿರುದ್ಧ ಪ್ರಧಾನಿ ಮೋದಿ ಹರಿಹಾಯ್ದಿದ್ದಾರೆ. ಹಿಂದಿನ ಸರ್ಕಾರಗಳ ನೀತಿಗಳ ವೈಫಲ್ಯದಿಂದಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಭಾರತೀಯ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ವಿದೇಶಗಳಿಗೆ ಹೋಗುವಂತಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಭಾರತದಲ್ಲಿ ವೈದ್ಯಕೀಯ ಶಿಕ್ಷಣ ನೀತಿಗಳಲ್ಲಿ ಸುಧಾರಣೆ ತರುವುದಾಗಿ ವಿದ್ಯಾರ್ಥಿಗಳಿಗೆ...
ಆರೋಗ್ಯರಾಜ್ಯಸುದ್ದಿ

ರಾಜ್ಯದಲ್ಲಿ ಮುಂದುವರಿದ ಓಮಿಕ್ರಾನ್‌ ಸ್ಫೋಟ ; ಇಂದು ಒಂದೇ ದಿನ 12 ಪ್ರಕರಣ ದೃಢ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ ರೂಪಾಂತರಿ ಓಮಿಕ್ರಾನ್‌ ಹಾವಳಿ ಮುಂದುವರಿದಿದೆ. ಇಂದು ಒಂದೇ ದಿನ 12 ಓಮಿಕ್ರಾನ್‌ ಸೋಂಕು ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ಒಂದರಲ್ಲೇ 10 ಓಮಿಕ್ರಾನ್‌ ಸೋಂಕು ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ ಮೊದಲ ಬಾರಿಗೆ ಓಮಿಕ್ರಾನ್‌ ಕಾಣಿಸಿಕೊಂಡಿದ್ದು, ವಿದೇಶದಿಂದ ಬಂದಿದ್ದ 9 ವರ್ಷದ ಬಾಲಕಿಯಲ್ಲಿ ಸೋಂಕು ಪತ್ತೆಯಾಗಿದೆ. ಮಂಗಳೂರಿನಲ್ಲಿ 27 ವರ್ಷದ ಯುವಕನಿಗೆ ಸೋಂಕು ತಗುಲಿದೆ. ಡಿ.14ರಂದು ಬ್ರಿಟನ್‌ನಿಂದ ವಾಪಸ್ಸಾಗಿದ್ದ ಬೆಂಗಳೂರಿನ ಮಹಿಳೆಗೆ ಓಮಿಕ್ರಾನ್‌ ತಗುಲಿತ್ತು. ನಂತರ ಮಹಿಳೆ ಕುಟುಂಬದ...
ಆರೋಗ್ಯಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ (Omicron Variant) ಆತಂಕ ಹಾಗೂ ಕೊರೊನಾ(Corona Virus) ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಾಸ್ಟೆಲ್ (Hostel) ಗಳಲ್ಲಿ ಹೊಸ ಮಾರ್ಗಸೂಚಿ (New Guideline)ಜಾರಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗುವುದು. ವಿದ್ಯಾರ್ಥಿಗಳು ಒಟ್ಟಿಗೆ ಊಟ ಮಾಡುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತರಲಾಗಿದ್ದು,...
ಆರೋಗ್ಯಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಕೋವಿಡ್-19 ರೂಪಾಂತರಿ ಒಮಿಕ್ರಾನ್ ಭೀತಿ – ಕೋವಿಡ್ ನೆಗೆಟಿವ್ ವರದಿ ಬಂದರೂ ಏಳು ದಿನ ಕ್ವಾರಂಟೈನ್ ಕಡ್ಡಾಯ : ಆರೋಗ್ಯ ಸಚಿವ ಸುಧಾಕರ್ – ಕಹಳೆ ನ್ಯೂಸ್

ಬೆಂಗಳೂರು: ಕೋವಿಡ್-19 ರೂಪಾಂತರಿ ಒಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲರಿಗೂ ಇಂದಿನಿಂದ ವಿಮಾನ ನಿಲ್ದಾಣದಲ್ಲಿ ಆರ್ ಟಿಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಅವರು ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.   ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಆರ್ ಟಿಪಿಸಿಆರ್ ಟೆಸ್ಟ್ ನಿಂದ ನೆಗೆಟಿವ್ ವರದಿ ಬಂದರೂ ಅವರ ಮನೆಯಲ್ಲೇ ಏಳು ದಿನಗಳ ಕಾಲ ಕ್ವಾರಂಟೈನ್ ನಲ್ಲಿ...
ಆರೋಗ್ಯಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ, ಊಹಾಪೋಹಗಳಿಗೆ ಜನ ಕಿವಿ ಕೊಡಬಾರದು : ಪುನರುಚ್ಚರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಇಲ್ಲ. ಈ ಕುರಿತಂತೆ ಊಹಾಪೋಹಗಳಿಗೆ ಜನ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರುಚ್ಚರಿಸಿದರು. ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ. ಜನಜೀವನ ಎಂದಿನಂತೆ ಇರಲಿದೆ. ಹೆಚ್ಚು ಜನರು ಸೇರುವಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ಕ್ಲಸ್ಟರ್ ಆಗಿರುವಲ್ಲಿ...
ಆರೋಗ್ಯಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಬಂದ್ ಮಾಡಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ – ಕಹಳೆ ನ್ಯೂಸ್

ತುಮಕೂರು: ಈವರೆಗೂ ಶಾಲಾ ಮಕ್ಕಳಲ್ಲಿ ಎಲ್ಲೂ ಕೋವಿಡ್ ಪ್ರಕರಣಗಳು ಪತ್ತೆಯಾಗಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡಲು ನಿರ್ಧರಿಸಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೋಮವಾರ ಸ್ಪಷ್ಟಪಡಿಸಿದರು.   ಸುದ್ದಿಗಾರರೊಂದಿಗೆ ಮಾತನಾಡಿ, 'ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ ಪೋಷಕರು ಗಾಬರಿ, ಆತಂಕಪಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ಏನಾದರೂ ಸಲಹೆ, ಸೂಚನೆಗಳನ್ನು ನೀಡಿದರೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು' ಎಂದು ಹೇಳಿದರು....
1 8 9 10 11 12 14
Page 10 of 14