ಪತಂಜಲಿ ಕೊರೊನಾ ಔಷಧಿ ಜಾಹೀರಾತಿಗೆ ಆಯುಷ್ ಸಚಿವಾಲಯದ ಬ್ರೇಕ್ ; ಅಧ್ಯಯನಕ್ಕೆ ಸಂಬಂಧಿಸಿದ ಡೇಟಾ ಸಲ್ಲಿಸಲು ಸೂಚನೆ – ಕಹಳೆ ನ್ಯೂಸ್
ನವದೆಹಲಿ: ಕೋವಿಡ್-19 ಸೋಂಕಿಗೆ ಯೋಗಗುರು ಬಾಬಾ ರಾಮ್ದೇವ್ ಅವರ ಪತಂಜಲಿ ಸಂಸ್ಥೆ ಆಯುರ್ವೇದ ಔಷಧಿಯನ್ನು ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ ಕೇಂದ್ರ ಆಯುಷ್ ಸಚಿವಾಲಯ ಬ್ರೇಕ್ ಹಾಕಿದ್ದು, ಈ ಕುರಿತು ಜಾಹೀರಾತು ಪ್ರಸಾರ ನಿಲ್ಲಿಸುವಂತೆ ಹೇಳಿದೆ. ಅಲ್ಲದೇ ಔಷಧಿಯ ಕುರಿತ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಪತಂಜಲಿ ಸಂಸ್ಥೆಗೆ ಸೂಚನೆ ನೀಡಿದೆ. ಪತಂಜಲಿ ಸಂಸ್ಥೆಯ ಔಷಧಿಯ ವಿವರಗಳು ಅಥವಾ ಹಕ್ಕುಗಳ ಕುರಿತ ಬಗ್ಗೆ ಯಾವುದೇ ಮಾಹಿತಿ ತಿಳಿದಿಲ್ಲ ಎಂದು ಆಯುಷ್ ಸಚಿವಾಲಯ...







