ಕರೊನಾಕ್ಕೆ ಆಯುರ್ವೇದ ಚಿಕಿತ್ಸೆ ಸಕ್ಸಸ್ ; ಕೊರೊನಾ ರೋಗಿಗಳ ಪಾಲಿಗೆ ಸಂಜೀವಿನಿಯಾದ ಡಾ ಗಿರಿಧರ್ ಕಜೆ ಔಷಧಿ – ಒಬ್ಬ ರೋಗಿಗೆ ಕನಿಷ್ಠ 60 ರೂ. ನಿಂದ 180 ರೂ.ನಲ್ಲಿ ಚಿಕಿತ್ಸೆ – ಕಹಳೆ ನ್ಯೂಸ್
ಬೆಂಗಳೂರು: ಜಗತ್ತನ್ನೇ ತಲ್ಲಣಗೊಳಿಸಿರುವ ಕರೊನಾ ಮಹಾಮಾರಿಗೆ ಭಾರತೀಯ ಪುರಾತನ ವೈದ್ಯ ಪದ್ಧತಿಯಾದ ಆಯುರ್ವೇದದಿಂದ ಪರಿಹಾರ ಸಾಧ್ಯ ಎಂಬುದು ಬೆಂಗಳೂರಿನಲ್ಲಿ ನಡೆದ ಕ್ಲಿನಿಕಲ್ ಟ್ರಯಲ್ನಿಂದ ದೃಢಪಟ್ಟಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗೆ ಅನುಗುಣವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ 10 ಸೋಂಕಿತರ ಮೇಲೆ ನಡೆಸಲಾದ ಪ್ರಯೋಗ ಯಶಸ್ವಿಯಾಗಿದ್ದು, ಕೇವಲ 9 ದಿನದಲ್ಲಿ ಎಲ್ಲರೂ ಗುಣಮುಖರಾಗಿ ನೆಗೆಟಿವ್ ವರದಿಯೊಂದಿಗೆ ಮನೆಗೆ ತೆರಳಿದ್ದಾರೆ. ಆಯುರ್ವೆದ ವೈದ್ಯ ಡಾ. ಗಿರಿಧರ ಕಜೆ ನೇತೃತ್ವದಲ್ಲಿ ನಡೆದ ಈ ಯಶಸ್ಸಿನ ಅಭಿಯಾನವನ್ನು ಗಂಭೀರವಾಗಿ...







