Sunday, September 6, 2026

ರಾಜಕೀಯ

ಕೃಷಿಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಡದಿ ಟೌನ್‌ಶಿಪ್: ಎಕರೆಗೆ ₹3 ಕೋಟಿಗೂ ಹೆಚ್ಚು ಪರಿಹಾರ? ಸಿಎಂ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ ನೀಡಲಾಗುವ ಪರಿಹಾರ ಮೊತ್ತವನ್ನು ಎಕರೆಗೆ ₹3 ಕೋಟಿಗೂ ಹೆಚ್ಚು ಹೆಚ್ಚಿಸುವ ಸಾಧ್ಯತೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ. ಜೆಡಿಎಸ್–ಬಿಜೆಪಿ ಜಂಟಿ ಪಾದಯಾತ್ರೆಯ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಭೂಮಿಗೆ ಬದಲಾಗಿ ಪರಿಹಾರ ಪಡೆಯಲು ಬಯಸುವವರಿಗೆ ಹೆಚ್ಚಿನ ಮೊತ್ತ ನೀಡುವ ಕುರಿತು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಈವರೆಗೆ ರಚಿಸಲಾದ ಸಮಿತಿಯ ಶಿಫಾರಸಿನ ಪ್ರಕಾರ, ಭೂಸ್ವಾಮಿಗಳಿಗೆ ಎಕರೆಗೆ...
ರಾಜಕೀಯರಾಷ್ಟ್ರೀಯಸುದ್ದಿ

‘ನಿಮ್ಮ ತಂದೆಯ ಮನೆಯಿಂದ ಶುದ್ಧ ಪೆಟ್ರೋಲ್ ಬರುತ್ತದೆಯೇ’: ಎಥೆನಾಲ್ ನೀತಿಯನ್ನು ಸಮರ್ಥಿಸಿಕೊಂಡ ಬಿಜೆಪಿ ಸಂಸದ ಜನಾರ್ದನ ಮಿಶ್ರಾ- ಕಹಳೆ ನ್ಯೂಸ್

ರೇವಾ: 'ನಿಮ್ಮ ತಂದೆಯ ಮನೆಯಿಂದ ಶುದ್ಧ ಪೆಟ್ರೋಲ್ ಬರುತ್ತದೆಯೇ': ಎಥೆನಾಲ್ ನೀತಿಯನ್ನು ಸಮರ್ಥಿಸಿಕೊಂಡ ಬಿಜೆಪಿ ಸಂಸದ ಜನಾರ್ದನ ಮಿಶ್ರಾ  ಎಥೆನಾಲ್ ಕೆಲಸ ಮಾಡುವುದಿಲ್ಲ, ಶುದ್ಧ ಪೆಟ್ರೋಲ್ ಕೆಲಸ ಮಾಡುತ್ತದೆ ಎಂದು ಹೇಳುವ ಚಳುವಳಿ ನಡೆಯುತ್ತಿದೆ. ನಿಮ್ಮ ತಂದೆಯ ಮನೆಯಿಂದ ಶುದ್ಧ ಪೆಟ್ರೋಲ್ ಬರುತ್ತದೆಯೇ? ದೇಶದಲ್ಲಿ ಶುದ್ಧ ಪೆಟ್ರೋಲ್ ಇಲ್ಲದಿದ್ದರೆ, ಅದು ಎಲ್ಲಿಂದ ಬರುತ್ತದೆ ಎಂದು ಬಿಜೆಪಿ ಸಂಸದ ಜನಾರ್ದನ ಮಿಶ್ರಾ ಪ್ರಶ್ನಿಸಿದ್ದಾರೆ. ದೇಶದಲ್ಲಿ ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಮಾಡುವ ಬಗ್ಗೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ಬಿಜೆಪಿಯಲ್ಲಿ ಬದಲಾವಣೆಯ ಗಾಳಿ – ಹೈಕಮಾಂಡ್ ನಾಯಕರ ಸರಣಿ ಭೇಟಿ ; ತೀವ್ರ ಕುತೂಹಲ – ಕಹಳೆ ನ್ಯೂಸ್

ಬೆಂಗಳೂರು: ದೇಶದಲ್ಲಿ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡು, ಅಲ್ಲಿ ಸರ್ಕಾರ ರಚನೆಯಾಗಿ ಆಡಳಿತವೂ ಆರಂಭವಾಗಿದೆ. ಇದರ ಬೆನ್ನಲ್ಲೇ ಈಗ ಕರ್ನಾಟಕ (Karnataka) ರಾಜ್ಯ ಬಿಜೆಪಿಯಲ್ಲಿ (BJP) ರಾಜಕೀಯ ಚಟುವಟಿಕೆಗಳು ಗರಿ ಗೆದರಿವೆ. ಕಾಂಗ್ರೆಸ್ (Congress) ಆಡಳಿತಕ್ಕೆ ಕೌಂಟರ್ ಕೊಡಲು ಮತ್ತು ಮುಂಬರುವ ಚುನಾವಣೆಗಳಲ್ಲಿ ಶತಾಯಗತಾಯ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಹೈಕಮಾಂಡ್ ಈಗ ಕರ್ನಾಟಕದ ಕಡೆಗೆ ಸಂಪೂರ್ಣ ಫೋಕಸ್ ಮಾಡಿದೆ. ಪಕ್ಷದ ಒಳಗೆ ಮತ್ತು ಹೊರಗೆ ಭಾರಿ ‘ರಿಪೇರಿ’ಗೆ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯಸುದ್ದಿ

ಮೋದಿಯವರ ವಿರುದ್ಧ ಸಚಿವ ಶಿವರಾಜ್ ತಂಗಡಗಿ ಅವಮಾನಕಾರಿ ಹೇಳಿಕೆ : ಡಾ. ಭರತ್ ಶೆಟ್ಟಿ ತೀವ್ರ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಅವಮಾನಕಾರಿ ಕವನ ವಾಚಿಸಿ ಹೇಳಿಕೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಬಿಜೆಪಿ ಮುಖಂಡ ಡಾ. ಭರತ್ ಶೆಟ್ಟಿ ತೀವ್ರ  ನೀಡಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಾ. ಭರತ್ ಶೆಟ್ಟಿ, “ಸಚಿವ ಸ್ಥಾನದಲ್ಲಿರುವವರು ಈ ರೀತಿಯ ವೈಯಕ್ತಿಕ ಮತ್ತು ಅಸಭ್ಯ ಹೇಳಿಕೆಗಳನ್ನು ನೀಡುವುದು ಅತ್ಯಂತ ದುರದೃಷ್ಟಕರ....
ಕೃಷಿದೆಹಲಿರಾಜಕೀಯರಾಜ್ಯರಾಷ್ಟ್ರೀಯವಾಣಿಜ್ಯಸುದ್ದಿ

ರೈತರಿಗೆ AI ಸಹಕಾರಿ; ‘ಭಾರತ್‌ ವಿಸ್ತಾರ್‌’ ಘೋಷಿಸಿದ ನಿರ್ಮಲಾ ಸೀತಾರಾಮನ್‌ – ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ತಮ್ಮ ಬಜೆಟ್ ಭಾಷಣದಲ್ಲಿ ಕೃಷಿಯನ್ನು ಸುಲಭ ಮತ್ತು ಹೆಚ್ಚು ಸಂಘಟಿತವಾಗಿಸಲು ವಿನ್ಯಾಸಗೊಳಿಸಲಾದ ಹೊಸ AI ಆಧಾರಿತ ಸಾಧನ ‘ಭಾರತ್ ವಿಸ್ತಾರ್’ ಅನ್ನು ಘೋಷಿಸಿದ್ದಾರೆ. ‘ಭಾರತ್ ವಿಸ್ತಾರ್’ ಕೃಷಿ ಸಂಪನ್ಮೂಲಗಳನ್ನು ಪ್ರವೇಶಿಸಲು ವಾಸ್ತವಿಕ ಸಂಯೋಜಿತ ವ್ಯವಸ್ಥೆ. ಕೃಷಿ-ಸ್ಟಾಕ್ ಪೋರ್ಟಲ್‌ಗಳು ಮತ್ತು ಕೃಷಿ ಪದ್ಧತಿಗಳ ಕುರಿತು ICAR ಪ್ಯಾಕೇಜ್ ಅನ್ನು AI ವ್ಯವಸ್ಥೆಗಳೊಂದಿಗೆ ಸಂಯೋಜಿಸುವ ಬಹುಭಾಷಾ AI ಸಾಧನವಾದ ಭಾರತ್ ವಿಸ್ತಾರ್ ಅನ್ನು ಪ್ರಾರಂಭಿಸಲಾಗುವುದು...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ : ಶಾಸಕ ಹರೀಶ್ ಪೂಂಜ- ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತುರ್ತು ದುರಸ್ತಿ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಅಗತ್ಯ ಅನುದಾನವನ್ನು ಒದಗಿಸುವಂತೆ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು. ಶಾಸಕರ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರವು ಬೆಳ್ತಂಗಡಿ ತಾಲೂಕಿನ 14 ವಿವಿಧ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕಟ್ಟಡ ದುರಸ್ತಿ ಹಾಗೂ ಶೌಚಾಲಯಗಳ ಅಭಿವೃದ್ಧಿಗಾಗಿ ಒಟ್ಟು ರೂ.57.93 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿದೆ. ಈ ಅನುದಾನದಿಂದ ಶಾಲೆಗಳ ಮೂಲಭೂತ...
ಉಡುಪಿಕುಂದಾಪುರಜಿಲ್ಲೆಬೆಂಗಳೂರುರಾಜಕೀಯರಾಜ್ಯಸುದ್ದಿ

ಸಾಮಾಜಿಕ ಬದ್ಧತೆ ಹೊಂದಿದ್ದ ನಾಯಕ ಅಜಿತ್‌ ಪವಾರ್‌ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ -ಕಹಳೆ ನ್ಯೂಸ್

ಬೆಂಗಳೂರು: ಮಹಾರಾಷ್ಟ್ರ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅಜಿತ್‌ ಪವಾರ್‌, ಸಾಮಾಜಿಕ ಬದ್ಧತೆ ಹೊಂದಿದ್ದ ನಾಯಕರಾಗಿದ್ದರು. ಜನರ ಮಧ್ಯೆ ಇರುವ ನಾಯಕನಾಗಿ ಜನಾನುರಾಗಿ ಹೆಸರಾಗಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಬಣ್ಣಿಸಿದರು. ವಿಧಾನಸಭೆಯಲ್ಲಿ ಸಂತಾಪ ಸೂಚಿಸಿ ಮಾತನಾಡಿದ ಸಚಿವರು, ಮಹಾರಾಷ್ಟ್ರಕ್ಕೆ ಗಡಿ ಭಾಗದಲ್ಲಿರುವ ಕಾರಣ ಬೆಳಗಾವಿಯಲ್ಲಿ ಅಜಿತ್‌ ಪವಾರ್‌ ಅವರ ಅನುಯಾಯಿಗಳು ಸಾಕಷ್ಟಿದ್ದಾರೆ. ಗ್ರಾಮೀಣಾಭಿವೃದ್ಧಿ, ನೀರಾವರಿ, ಕೈಗಾರಿಕಾ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಅಜಿತ್‌ ಪವಾರ್‌,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬಂಟ್ವಾಳರಾಜಕೀಯರಾಜ್ಯಸುದ್ದಿ

ಇ–ಸ್ವತ್ತು 2.0 ತಾಂತ್ರಿಕ ವೈಫಲ್ಯ: ಗ್ರಾಮೀಣ ಜನರಿಗೆ ತೀವ್ರ ಸಂಕಷ್ಟ – ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು: ಶಾಸಕ ಕಿಶೋರ್ ಕುಮಾರ್ ಪುತ್ತೂರು -ಕಹಳೆ ನ್ಯೂಸ್

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದ ಶೂನ್ಯ ವೇಳೆಯಲ್ಲಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು, ಉದಯವಾಣಿ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ “ಜಾರಿಯಾದ ತಿಂಗಳಲ್ಲೇ ಕೈಕೊಟ್ಟ ಇ–ಸ್ವತ್ತು 2.0” ಎಂಬ ವರದಿಯನ್ನು ಉಲ್ಲೇಖಿಸಿ, ರಾಜ್ಯದ ಗ್ರಾಮೀಣ ಭಾಗದ ಜನರು ಎದುರಿಸುತ್ತಿರುವ ಗಂಭೀರ ಸಮಸ್ಯೆಯನ್ನು ಸದನದ ಗಮನಕ್ಕೆ ತಂದರು. ಗ್ರಾಮೀಣ ನಾಗರಿಕರು ತಮ್ಮ ಆಸ್ತಿ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸುಲಭವಾಗಿ ಪಡೆಯಲು ಸರ್ಕಾರವು ಡಿಸೆಂಬರ್ 01 ರಿಂದ ಇ–ಸ್ವತ್ತು...
1 2 3 232
Page 1 of 232