ರಾಜ್ಯ ನಾಯಕರಿಗೆ ಅಮಿತ್ ಶಾ ಹೇಳಿದ್ದೇನು ಗೊತ್ತೇ-ಕಹಳೆ ನ್ಯೂಸ್
ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ತೀವ್ರವಾದ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ನಾಯಕರಿಗೆ ಸೂಚನೆಯೊಂದನ್ನು ನೀಡಿದ್ದಾರೆ. ನಿನ್ನೆ ರಾತ್ರಿ ದೆಹಲಿಯಲ್ಲಿ ಗೃಹ ಸಚಿವ ಬಸನರಾಜ ಬೊಮ್ಮಾಯಿ ಅವರು ಅಮಿತ್ ಶಾ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆ ವೇಳೆ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಅಮಿತ್ ಶಾ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಸನರಾಜ ಬೊಮ್ಮಾಯಿ...

