ನೂರಕ್ಕೆ ನೂರು 15 ಕ್ಷೇತ್ರಗಳಲ್ಲಿ ಗೆಲುವು ನಮ್ಮದೆ; ಸಿಎಂ ಯಡಿಯೂರಪ್ಪ ವಿಶ್ವಾಸ – ಕಹಳೆ ನ್ಯೂಸ್
ಬೆಂಗಳೂರು: ಮುಂದಿನ ತಿಂಗಳ ಮೂರನೇ ತಾರೀಖಿನ ಒಳಗೆ ಮತ್ತೊಂದು ಬಾರಿ 15 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಹೋಗುತ್ತೇನೆ. ಶನಿವಾರದಿಂದ ಚುನಾವಣಾ ಪ್ರಚಾರ ಆರಂಭವಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನ ಧವಳಗಿರಿ ನಿವಾಸದಲ್ಲಿ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಅವರು, ಕ್ಷೇತ್ರಗಳಲ್ಲಿ ವಾತಾವರಣ ನಮ್ಮ ನಿರೀಕ್ಷೆಗೂ ಮೀರಿ ತುಂಬಾ ಚೆನ್ನಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ನೂರಕ್ಕೆ ನೂರು 15 ಕ್ಷೇತ್ರಗಳಲ್ಲಿಯೂ ನಮ್ಮದೇ ಗೆಲುವು. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ...







