ಬಿಎಸ್ವೈ ಸರ್ಕಾರದಿಂದ `ಬಡವರ ಕಲ್ಯಾಣ’ ; ಸರ್ಕಾರಿ ಮದ್ವೆಗೆ ಷರತ್ತುಗಳು ಅನ್ವಯ – ಕಹಳೆ ನ್ಯೂಸ್
ಬೆಂಗಳೂರು: ಯಡಿಯೂರಪ್ಪ ಸರ್ಕಾರದಿಂದ ಜೋಡಿಗಳಿಗೆ ಮದುವೆ ಭಾಗ್ಯವನ್ನು ಕಲ್ಪಿಸಿದೆ. ಮುಜರಾಯಿ ಇಲಾಖೆಯ ಎ ದರ್ಜೆ 100 ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಸುವುದಾಗಿ ಸರ್ಕಾರ ಪ್ರಕಟಿಸಿದೆ. ಒಂದೊಂದು ದೇವಾಲಯದಲ್ಲಿ 100 ಜೋಡಿಗೆ ಮದುವೆ ಮಾಡಿಸುವ ಗುರಿಯನ್ನು ಹಾಕಲಾಗಿದ್ದು, ಪ್ರತಿ ವರ್ಷ 10 ಸಾವಿರ ಜೋಡಿಗೆ ವಿವಾಹ ನಡೆಸಲು ಚಿಂತನೆ ನಡೆದಿದೆ. ಜಾತಿಭೇದವಿಲ್ಲದೇ ಎಲ್ಲಾ ವರ್ಗದ ಬಡವರಿಗಾಗಿ ಯೋಜನೆ ರೂಪಿಸಲಾಗಿದ್ದು ಹಿಂದೂ ಸಂಪ್ರದಾಯದಂತೆ ವಿವಾಹ ನಡೆಯಲಿದೆ. ಪ್ರತಿ ಜೋಡಿಗೆ ವಿವಾಹಕ್ಕೆ 55 ಸಾವಿರ ಖರ್ಚಿನ...







