Recent Posts

Saturday, May 9, 2026

ರಾಜಕೀಯ

ರಾಜಕೀಯ

ಕೂಡಲೇ ಮನೆ ಖಾಲಿ ಮಾಡಿ: 1.5 ತಿಂಗಳಾದರೂ ಸರ್ಕಾರಿ ಮನೆ ಮರಳಿಸದ ಮಾಜಿ ಡಿಸಿಎಂ – ಪರಮೇಶ್ವರ್‍ ಗೆ ಬಿಡಿಎ ನೋಟಿಸ್ – ಕಹಳೆ ನ್ಯೂಸ್

ಬೆಂಗಳೂರು : ಅವಧಿ ಮುಗಿದ ನಂತರವೂ ಸರ್ಕಾರಿ ನಿವಾಸ ಖಾಲಿ ಮಾಡದ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ವಾರದೊಳಗೆ ನಿವಾಸ ಖಾಲಿ ಮಾಡುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನೋಟಿಸ್ ಜಾರಿಗೊಳಿಸಿದೆ. ರಾಜ್‍ಮಹಲ್ ವಿಲಾಸ 2ನೇ ಹಂತದ ಸದಾಶಿವನಗರದಲ್ಲಿ ಬಿಡಿಎ ನಿರ್ಮಿಸಿರುವ ವಸತಿ ಗೃಹ (94/ಎ)ವನ್ನು ಬಾಡಿಗೆ ಆಧಾರದ ಮೇಲೆ ಸರ್ಕಾರಕ್ಕೆ ಹಂಚಿಕೆ ಮಾಡಲಾಗಿದೆ. ಸದರಿ ವಸತಿ ಗೃಹವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಕಚೇರಿ ಉಪಯೋಗಕ್ಕಾಗಿ...
ರಾಜಕೀಯ

ಹಳೆ ಪ್ರಕರಣವೊಂದನ್ನು ತನಿಖೆಗೆ ಆದೇಶಿಸಿದ ಮುಖ್ಯಮಂತ್ರಿ ಬಿ.ಎಸ್.ವೈ – ಕಹಳೆ ನ್ಯೂಸ್

ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾಗಿದ್ದ ಕೃಷಿ ಭಾಗ್ಯ, ಯೋಜನೆಯಲ್ಲಿ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ. ಕೃಷಿ ಹೊಂಡ ನಿರ್ಮಾಣ ಸೇರಿದಂತೆ ಸಿದ್ದರಾಮಯ್ಯ ಸರ್ಕಾರದ ಅವಧಿಯ ಐದು ಯೋಜನೆಗಳಲ್ಲಿ, ಅಕ್ರಮ ನಡೆದಿರುವ ಶಂಕೆ ಮೇಲೆ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ. ಮೂಲಗಳ ಪ್ರಕಾರ 2014-15ರಲ್ಲಿ ಆರಂಭಗೊಂಡ 921 ಕೋಟಿ ರೂ. ಮೊತ್ತದ ಕೃಷಿ ಭಾಗ್ಯ ಯೋಜನೆ ಮತ್ತು...
ರಾಜಕೀಯ

ಜಿ.ಟಿ ದೇವಗೌಡ ರಾಜಕೀಯ ನಿವೃತ್ತಿ – ಕಹಳೆ ನ್ಯೂಸ್

ಮೈಸೂರು: ಜಿ.ಟಿ ದೇವಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದು ಜೆಡಿಎಸ್ ಪಕ್ಷದಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ತನ್ನ ರಾಜಕೀಯ ಜೀವನದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡ ಹಿರಿಯ ರಾಜಕಾರಣಿ. ಚಾಮುಂಡೇಶ್ವರಿ ಕ್ಷೇತ್ರವನ್ನು ಭದ್ರ ಕೊಟೆಯನ್ನಾಗಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒಂದು ಲಕ್ಷಕ್ಕಿಂತಲೂ ಅಧಿಕ ಮತಗಳಿಂದ ಸೋಲಿಸಿದ ಹೆಗ್ಗಳಿಕೆ ಇವರದ್ದು. ಇತ್ತೀಚಿಗೆ ಇವರ ಹೇಳಿಕೆಗಳು ನೋಡುವಾಗ ಇವರು ಬಿಜೆಪಿಗೆ ವಾಲಿದ್ದಾರೆಯೇ ಎಂಬ ಅನುಮಾನ ಮೂಡುತ್ತಿದೆ, ಇದಕ್ಕೆ ಪುಷ್ಟಿ ಎಂಬಂತೆ ಲೋಕಸಭೆ ಚುನಾವಣೆ ವೇಳೆ ಜೆಡಿಎಸ್...
ರಾಜಕೀಯ

ಡಿಕೆ ಶಿವಕುಮಾರ್ ಮನವಿಗೆ ಸ್ಪಂದಿಸಿದ ವಿಶೇಷ ಕೋರ್ಟ್; ಇಡಿ ಕಸ್ಟಡಿಯಲ್ಲಿ ಶೇವಿಂಗ್‍ಗೆ ಅನುಮತಿ – ಕಹಳೆ ನ್ಯೂಸ್

ನವದೆಹಲಿ : ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಶೇವಿಂಗ್ ಮಾಡಿಕೊಳ್ಳಲು ನಿರಾಕರಿಸಿದ್ದ ಇಡಿ ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಡಿಕೆಶಿ ಪರ ವಕೀಲರು ಇಡಿ ವಿಶೇಷ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಇಂದು ಆ ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಮೂರ್ತಿಗಳು ಡಿಕೆ ಶಿವಕುಮಾರ್ ಅವರಿಗೆ ಶೇವಿಂಗ್ ಮಾಡಿಕೊಳ್ಳಲು ಅಥವಾ ಬೇರೆಯವರಿಂದ ಮಾಡಿಸಿಕೊಳ್ಳಲು ಅನುಮತಿ ನೀಡಿದೆ. ತಮ್ಮನ್ನು ನೋಡಲು ಬರುವ ಕುಟುಂಬಸ್ಥರ ಭೇಟಿಯ ವೇಳೆ ಇಡಿ ಅಧಿಕಾರಿಗಳು ಇರಬಾರದೆಂದು ಕೋರ್ಟ್‍ನಲ್ಲಿ ಡಿಕೆಶಿ ಮನವಿ...
ರಾಜಕೀಯ

ಮೈಕ್ರೋ ಫೈನಾನ್ಸ್ ಕಂಪೆನಿಗಳಿಗೆ ಖಡಕ್ ಎಚ್ಚರಿಕೆ ಕೂಟ್ಟ ಬಿ.ಎಸ್.ವೈ – ಕಹಳೆ ನ್ಯೂಸ್

ಬೆಂಗಳೂರು: ನೆರೆ ಸಂತ್ರಸ್ತರು ವಾಸವಾಗಿರುವ ರಾಯಚೂರಿನ ಗಂಜಿ ಕೇಂದ್ರದಲ್ಲಿ, ರೈತರ ಬಡ್ಡಿ ವಸೂಲಿ ಮಾಡುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು, ರಾಯಚೂರು ಭಾಗದ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಇಂದು ಖುದ್ದು ಕರೆ ಮಾಡಿ ಎಚ್ಚರಿಕೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ದೂರವಾಣಿ ಮೂಲಕ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪನವರು, ನೆರೆಪೀಡಿತ ಪ್ರದೇಶದಲ್ಲಿ ಇಂತಹ ಪ್ರಕರಣಗಳು ಕಂಡು ಬಂದರೆ ಶಿಸ್ತು ಕ್ರಮ ಕೈಗೊಳ್ಳುವಂತೆ ರಾಯಚೂರು ಜಿಲ್ಲಾಧಿಕಾರಿಗೆ...
ರಾಜಕೀಯ

ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ ಎಚ್.ವಿಶ್ವನಾಥ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಿದ್ದು ಮುಂದಿನ ದಿನಗಳಲ್ಲಿ ಹತ್ತು ಮಂದಿ ಉಪಮುಖ್ಯಮಂತ್ರಿಗಳನ್ನೂ ನೇಮಿಸಿದರೂ ಯಾವುದೇ ಆಶ್ಚರ್ಯ ಇಲ್ಲ ಎಂದು ಜೆಡಿಎಸ್ ಅನರ್ಹ ಶಾಸಕ ಎಚ್.ವಿಶ್ವನಾಥ್ ಹೇಳಿದ್ದಾರೆ. ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಸ್ಥಾನಮಾನಕ್ಕೆ ಯಾವುದೇ ಸಂವಿಧಾನಾತ್ಮಕ ಮಹತ್ವ ಇಲ್ಲ. ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ, ಯಾರನ್ನು ಬೇಕಾದರೂ ಉಪಮುಖ್ಯಮಂತ್ರಿಗಳನ್ನಾಗಿ ಮಾಡಲಿ. ಸೆ.11ರಂದು ಸುಪ್ರಿಂಕೋರ್ಟ್ ಮುಂದೆ ಅನರ್ಹ ಶಾಸಕರ ಅರ್ಜಿ ವಿಚಾರಣೆಗೆ ಬರಲಿದ್ದು,...
ರಾಜಕೀಯ

ಪ್ರತಿಪಕ್ಷದ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ತಿರುಗೇಟು – ಕಹಳೆ ನ್ಯೂಸ್

ಹುಬ್ಬಳ್ಳಿ: ಜಾರಿ ನಿರ್ದೇಶನಾಲಯದಿಂದ ಡಿಕೆಶಿ ಬಂಧನ, ವಿನಯ ಕುಲಕರ್ಣಿ, ಕೆ.ಜೆ.ಜಾರ್ಜ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿರುವ ರಾಜ್ಯ ಸರ್ಕಾರದ ಕ್ರಮ ರಾಜಕೀಯ ದ್ವೇಷ ಎಂಬ ಪ್ರತಿಪಕ್ಷದ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ತಿರುಗೇಟು ನೀಡಿದ್ದು, ಸಿಬಿಐ ಬಿಜೆಪಿ ನಿರ್ಮಾಣ ಮಾಡಿರುವ ಸಂಸ್ಥೆಯಲ್ಲ, ಐಟಿ, ಇಡಿ ಸಂಸ್ಥೆಗಳು ಬಿಜೆಪಿ ಸರ್ಕಾರ ಬಂದ ಬಳಿಕ ರಚನೆಯಾಗಿಲ್ಲ ಎಂದು ಹೇಳಿದ್ದಾರೆ. ಆರೋಪ ಬಂದ ತಕ್ಷಣ ಅಧಿಕಾರದಲ್ಲಿರುವ ಪಕ್ಷಗಳ ಮೇಲೆ ದೂರುವುದು ಸರಿಯಲ್ಲ....
ರಾಜಕೀಯ

ಮಧ್ಯಂತರ ಚುನಾವಣೆಗೆ ಸಿದ್ದರಾಮಯ್ಯ ಕನಸು ಕಾಣುತ್ತಿದ್ದಾರೆ: ನಳಿನ್ ಕುಮಾರ್ ಕಟೀಲ್ ವ್ಯಂಗ್ಯ – ಕಹಳೆ ನ್ಯೂಸ್

ಹುಬ್ಬಳ್ಳಿ : ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯನವರು ನಿದ್ದೆ ಮಾಡುತ್ತಿದ್ದರು. ಈಗ ಅಧಿಕಾರದಲ್ಲಿಲ್ಲ ಹಾಗಾಗಿ ಕನಸು ಕಾಣುತ್ತಿದ್ದಾರೆ. ಅಧಿಕಾರದಲ್ಲಿದ್ದಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಕನಸು ನನಸಾಗಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಬಿಜೆಪಿಯಲ್ಲಿ ಯಾವುದೇ ಅಸಮಾಧಾನವಿಲ್ಲ. ಅದು ಇರುವುದು ಮಾಧ್ಯಮಗಳಲ್ಲಿ. ಸಚಿವ ಆರ್. ಅಶೋಕ್ ಅವರ ಆರೋಗ್ಯ ಸರಿ ಇರಲಿಲ್ಲ. ಹಾಗಾಗಿ ನಿನ್ನೆಯ ಸಭೆಗೆ ಅವರು ಗೈರಾಗಿದ್ದರು. ಮಧ್ಯಂತರ ಚುನಾವಣೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕನಸು...
1 135 136 137 138 139 232
Page 137 of 232