ಸಿದ್ದಾರ್ಥ ಸಾವಿಗೆ ದೇಶದ ಆಡಳಿತದ ಆರ್ಥಿಕ ದುಸ್ಥಿತಿ ಕಾರಣ – ಎಂ.ವೆಂಕಪ್ಪ ಗೌಡ ಆರೋಪ – ಕಹಳೆ ನ್ಯೂಸ್
ಸುಳ್ಯ: ಕಾಫಿಡೇ ಮಾಲಕ, ಉದ್ಯಮಿ ಸಿದ್ದಾರ್ಥ ಸಾವಿಗೆ ದೇಶದ ಆಡಳಿತ ಉಂಟು ಮಾಡಿರುವ ಆರ್ಥಿಕ ದುಸ್ಥಿತಿಯೇ ಕಾರಣ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ, ಸುಳ್ಯ ನಗರ ಪಂಚಾಯಿತಿ ಸದಸ್ಯ ಎಂ. ವೆಂಕಪ್ಪ ಗೌಡ ಆರೋಪಿಸಿದ್ದಾರೆ. ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದಾರ್ಥ ಸಾವಿಗೆ ಈ ದೇಶ ಇಂದು ಎದುರಿಸುತ್ತಿರುವ ಆರ್ಥಿಕ ಪರಿಸ್ಥಿತಿಯೇ ಇದಕ್ಕೆ ಕಾರಣ ಎಂದು ತಿಳಿದು ಬರುತ್ತದೆ. ಹಲವು ಉದ್ಯಮಿಗಳು ದೇಶ ಬಿಟ್ಟು ಪರಾರಿಯಾಗಿದ್ದಾರೆ. ಕಿಂಗ್ಫಿಶರ್, ಜೆಟ್ ಏರ್ವೇಸ್...







