Thursday, April 30, 2026

ರಾಜಕೀಯ

ರಾಜಕೀಯ

ಟಿಪ್ಪು ಜಯಂತಿಯನ್ನು ರದ್ದು ಮಾಡಿ ಸರ್ಕಾರವು ದೊಡ್ಡ ಅಪರಾಧ ಮಾಡಿದೆ – ಸಿದ್ದರಾಮಯ್ಯ ಆರೋಪ – ಕಹಳೆ ನ್ಯೂಸ್

ಬೆಂಗಳೂರು : ಮುಸ್ಲೀಮರ ಮೇಲಿನ ದ್ವೇಷದಿಂದಾಗಿ ಬಿಜೆಪಿ ಸರ್ಕಾರವು ಟಿಪ್ಪು ಜಯಂತಿಯನ್ನು ರದ್ದು ಮಾಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದರು. ಎಸ್‌.ಎಂ.ಕೃಷ್ಣ ಮನೆಗೆ ಭೇಟಿ ನೀಡಿ ಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಜಯಂತಿಯನ್ನು ರದ್ದು ಮಾಡಿ ಸರ್ಕಾರವು ದೊಡ್ಡ ಅಪರಾಧ ಮಾಡಿದೆ ಎಂದು ಹೇಳಿದರು. ಟಿಪ್ಪು ಅಲ್ಪಸಂಖ್ಯಾತರಿಗೆ ಸೇರಿದವರು ಎಂಬ ಕಾರಣಕ್ಕೆ ನಾವು ಟಿಪ್ಪು ಜಯಂತಿ ಆಚರಿಸುತ್ತಿರಲಿಲ್ಲ, ಆತ ಸ್ವಾತಂತ್ರ್ಯ ಹೋರಾಟಗಾರ, ಮೈಸೂರು ಸಂಸ್ಥಾನಕ್ಕೆ...
ರಾಜಕೀಯ

ಸಮ್ಮಿಶ್ರ ಸರ್ಕಾರ ಪತನವಾಗಲು ಕಾಂಗ್ರೆಸ್ಸಿಗರೇ ಕಾರಣ: ಪ್ರಜ್ವಲ್‌ ರೇವಣ್ಣ – ಕಹಳೆ ನ್ಯೂಸ್

ಹಾಸನ: ಕಾಂಗ್ರೆಸ್‌, ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಪತನವಾಗಲು ಕಾಂಗ್ರೆಸ್ಸಿಗರೇ ಕಾರಣ ಎಂದು ಸಂಸದ ಪ್ರಜ್ವಲ್‌ ರೇವಣ್ಣ ಆರೋಪಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಕೆಲವರು ಮಂತ್ರಿಯಾಗುವ ಬಯಕೆಯಲ್ಲಿ ಹಣ ಪಡೆದು ಸರ್ಕಾರ ಬೀಳಿಸಿದ್ದಾರೆ. ಆದರೆ, ಸರ್ಕಾರ ಪತನಕ್ಕೆ ನಮ್ಮ ತಂದೆ ಎಚ್‌.ಡಿ.ರೇವಣ್ಣ ಅವರನ್ನು ಹೊಣೆಯಾಗಿಸಲಾಗುತ್ತಿದೆ ಎಂದು ದೂರಿದರು. ಕೋತಿ ತಾನು ಮೊಸರು ತಿಂದು ಮೇಕೆ ಮೂತಿಗೆ ಒರೆಸಿತು ಎಂಬಂತೆ ಸರ್ಕಾರದ ಪತನಕ್ಕೆ ನಮ್ಮ ತಂದೆಯ ಮೇಲೆ ಗೂಬೆ ಕೂರಿಸಲಾಗುತ್ತಿದೆ....
ರಾಜಕೀಯ

ಸ್ಪೀಕರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ `ವಿಶ್ವೇಶ್ವರ ಹೆಗಡೆ ಕಾಗೇರಿ’ ಆಯ್ಕೆ!- ಕಹಳೆ ನ್ಯೂಸ್

ಬೆಂಗಳೂರು : ವಿಧಾನಸಭೆ ಸ್ಪೀಕರ್ ಅಭ್ಯರ್ಥಿಯಾಗಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು, ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರು ಬಿಜೆಪಿ ನೀಡಿದ್ದ ಸೂಚನೆಯಂತೆ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದರು. ಆದರೆ, ದಿಢೀರ್ ಅಭ್ಯರ್ಥಿ ಬದಲಾವಣೆಯ ನಿರ್ಧಾರ ತೆಗೆದುಕೊಂಡ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಬೆಳಗ್ಗೆ ನಾಮಪತ್ರ ಸಲ್ಲಿಸುವಂತೆ ಕಾಗೇರಿಗೆ ಸೂಚನೆ ನೀಡಿದ್ದಾರೆ. ಸಿಎಂ ಬಿ.ಎಸ್. ಯಡಿಯೂರಪ್ಪ...
ರಾಜಕೀಯ

ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಕುಮಾರ್ – ಕಹಳೆ ನ್ಯೂಸ್

ಬೆಂಗಳೂರು: ಸ್ಪೀಕರ್ ಜವಾಬ್ದಾರಿಯಿಂದ ಬಿಡುಗಡೆಗೊಳ್ಳಬೇಕೆಂದು ಬಯಸಿದ್ದೇನೆ. ಕಳೆದ 14 ತಿಂಗಳ ಕಾಲ ಈ ಸ್ಥಾನವನ್ನು ಜವಾಬ್ದಾರಿಯಿಂದ ನಿಭಾಯಿಸಿದ್ದೇನೆ. ನಿಮಗೆಲ್ಲರಿಗೂ ವಂದಿಸಿ, ರಾಜೀನಾಮೆ ಪತ್ರ ನೀಡುತ್ತಿದ್ದೇನೆ ಎಂದು ರಮೇಶ್ ಕುಮಾರ್ ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. "ನಾನು ಯಾರ ಒತ್ತಡಕ್ಕೂ ಮಣಿದು ಕೆಲಸ ಮಾಡುವವನಲ್ಲ. ನಾನು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ್ದೇನೆ. ನನಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು. 2018ರ ಚುನಾವಣೆ ಫಲಿತಾಂಶದ ನಂತರ ನನಗೆ ಸ್ವೀಕರ್ ಸ್ಥಾನ ವಹಿಸಿಕೊಳ್ಳುವಂತೆ ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಸೂಚಿಸಿದ್ದರು....
ರಾಜಕೀಯ

ಬ್ರೇಕಿಂಗ್ : ಬಿಜೆಪಿ ಸೇರಲು ಮುಂದಾದ 6 ಜನ ದೋಸ್ತಿಗಳು..! – ಕಹಳೆ ನ್ಯೂಸ್

ಬೆಂಗಳೂರು - ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು ಮುಂಬೈ ಸೇರಿಕೊಂಡಿದ್ದ 17 ಶಾಸಕರಿಗೆ ವಿಧಾನಸಭೆ ಬಾಗಿಲು ಬಂದ್ ಆಗಿದೆ. ಸ್ಪೀಕರ್ ರಮೇಶ್ ಕುಮಾರ್ ಶಾಸಕರನ್ನು ಅನರ್ಹಗೊಳಿಸಿದ ಬೆನ್ನಲ್ಲೇ ಬಿಜೆಪಿ ಮತ್ತೊಮ್ಮೆ ಆಪರೇಷನ್ ಕಮಲಕ್ಕೆ ಮುಂದಾಗಿದೆ ಎನ್ನಲಾಗಿದ್ದು, ದೋಸ್ತಿ ಪಕ್ಷಗಳ ಆರು ಜನರು ಬಿಜೆಪಿಯತ್ತ ಮುಖ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜೆಡಿಎಸ್ ಒಬ್ಬ ಶಾಸಕ ಸೇರಿದಂತೆ ಒಟ್ಟು ಆರು ಮಂದಿ ಬಿಜೆಪಿ ಸೇರಲು ಮುಂದಾಗಿದ್ದರು. ಅನರ್ಹತೆ ಭೀತಿಯಿಂದಾಗಿ ಇಷ್ಟು ದಿನ...
ರಾಜಕೀಯ

ಬಿಎಸ್‍ವೈಯಿಂದ ರೈತರಿಗೆ ಭರ್ಜರಿ ಕೊಡುಗೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿ, ಇಂದು ಸದನದಲ್ಲಿ ವಿಶ್ವಾಸಮತ ಯಾಚನೆ ಮಂಡಿಸಿದರು. ಈ ವೇಳೆ ಮಾತನಾಡಿದ ಅವರು, ರೈತರಿಗೆ ಬಂಪರ್ ಕೊಡುಗೆಯನ್ನು ಘೋಷಿಸಿದ್ದಾರೆ. ವಿಶ್ವಾಸ ನಿರ್ಣಯ ಮಂಡಿಸಿದ ಬಳಿಕ ಮಾತನಾಡಿದ ಸಿಎಂ ಬಿಎಸ್‍ವೈ, ಜನಪರ ಆಡಳಿತ ನಡೆಸುವುದು ನಮ್ಮ ಗುರಿ. ಯಾವುದೇ ಕಾರಣಕ್ಕೂ ಸೇಡಿನ ರಾಜಕಾರಣ ಮಾಡುವುದಿಲ್ಲ. ಎಲ್ಲ ಮರೆತು ವಿಪಕ್ಷವನ್ನು ಗಣನೆಗೆ ತೆಗೆದುಕೊಂಡು ಸಹಬಾಳ್ವೆಯಿಂದ ಆಡಳಿತ ನಡೆಸುತ್ತೇನೆ ಎಂಬ ಭರವಸೆಯನ್ನು ನೀಡಿದ್ದಾರೆ....
ರಾಜಕೀಯ

ನಮಗೆ ಪ್ರಚೋದಿಸಿದವರ ಸುಮ್ನೆ ಬಿಡಲ್ಲ, ಬೆಂಗಳೂರಿಗೆ ಬಂದು ಬಂಡವಾಳ ಬಿಚ್ಚಿಡುತ್ತೇವೆ: ಅನರ್ಹ ಶಾಸಕ ಮುನಿರತ್ನ – ಕಹಳೆ ನ್ಯೂಸ್

ಅಪ್ಪ - ಮಕ್ಕಳದು ಜಾಸ್ತಿ ಆಯ್ತು, ಈ ಸಮ್ಮಿಶ್ರ ಸರ್ಕಾರ ತೆಗಿಬೇಕು ಎಂದವರೇ ಈಗ ಈ ರೀತಿ ಮಾಡಿದ್ದಾರೆ. ನಮಗೆ ಪ್ರಚೋದನೆ ನೀಡಿ ಈಗ ಒಳ್ಳೆಯವರಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಇಲ್ಲಿಗೆ ಬಿಡಲ್ಲ, ಬೆಂಗಳೂರಿಗೆ ಬಂದು ಬಂಡವಾಳ ಬಯಲಿಗೆಳೆಯುತ್ತೇವೆ ಎಂದು ಅನರ್ಹ ಶಾಸಕ ಮುನಿರತ್ನ ಗುಡುಗಿದ್ದಾರೆ. ನಮಗೆ ಮೊದಲೇ ಹೇಳಿದ್ದರು, ರಾಜೀನಾಮೆ ನೀಡಿದಾಗ ನಿಮ್ಮ ಜೊತೆಗಿದ್ದೇವೆ ಎಂದವರದೆಲ್ಲಾ ನಾಟಕ, ಸುಳ್ಳು ಹೇಳುತ್ತಿದ್ದಾರೆ. ಜೆಡಿಎಸ್‍ನವರನ್ನು ಸಮಾಧಾನಪಡಿಸಲು ಆ ರೀತಿ ಹೇಳುತ್ತಿದ್ದಾರೆ. ಅವರಿಗೆ ಸರ್ಕಾರ ಉರುಳುವುದು...
ರಾಜಕೀಯ

ಅನರ್ಹ ಶಾಸಕರ ಬಗ್ಗೆ ಬಿಜೆಪಿ ‘ಕಾಳಜಿ’ ವ್ಯಕ್ತಪಡಿಸುತ್ತಿದೆ ; ಕಾಂಗ್ರೆಸ್ ಪಕ್ಷದಿಂದ ಆಕ್ಷೇಪ – ಕಹಳೆ ನ್ಯೂಸ್

ಬೆಂಗಳೂರು: ಅನರ್ಹ ಶಾಸಕರ ಬಗ್ಗೆ ಬಿಜೆಪಿ ‘ಕಾಳಜಿ’ ವ್ಯಕ್ತಪಡಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಪಕ್ಷಾಂತರ ಶಾಸಕರನ್ನು ವಿಧಾನಸಭಾ ಅಧ್ಯಕ್ಷರು ಅನರ್ಹಗೊಳಿಸಿದ್ದಾರೆ. ಅದಕ್ಕೆ ಬಿಜೆಪಿ ನಾಯಕರು ಹೊಟ್ಟೆ ಉರಿದುಕೊಳ್ಳುವುದು ಯಾಕೆ, ಅವರ ಮೇಲೆ ಈ ಪರಿಯ ಕಾಳಜಿ ಯಾಕೆ, ಅವರೇನು ಇವರ ಪಕ್ಷದ ಶಾಸಕರೇ ಎಂದು...
1 144 145 146 147 148 232
Page 146 of 232