ಪ್ರಮಾಣವಚನ ಸ್ವೀಕರಿಸಬೇಕೆಂದು ತುದಿಗಾಲಲ್ಲಿ ನಿಂತಿದ್ದ ಯಡಿಯೂರಪ್ಪ ಆಸೆಗೆ ಬಿಜೆಪಿ ಹೈಕಮಾಂಡ್ ತಣ್ಣೇರೆರಚಿದೆ – ಕಹಳೆ ನ್ಯೂಸ್
ಬೆಂಗಳೂರು: ಎಷ್ಟು ಸಾಧ್ಯವೋ ಅಷ್ಟು ಬೇಗನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಬೇಕೆಂದು ತುದಿಗಾಲಲ್ಲಿ ನಿಂತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆಸೆಗೆ ಬಿಜೆಪಿ ಹೈಕಮಾಂಡ್ ತಣ್ಣೇರೆರಚಿದೆ. ಹೀಗಾಗಿ ವರಿಷ್ಠರ ಮನವೊಲಿಕೆಗೆ ಹಾಗೂ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಮನವರಿಕೆ ಮಾಡಿಕೊಡಲು ಬಿಎಸ್ವೈ ತಮ್ಮ ಆಪ್ತ ಬಳಗವನ್ನು ದೆಹಲಿಗೆ ಕಳುಹಿಸಿದ್ದಾರೆ. ಸ್ಪೀಕರ್ ಹಾಗೂ ಸುಪ್ರೀಂಕೋರ್ಟ್ ಎದುರು ಬಾಕಿ ಇರುವ ಕಾಂಗ್ರೆಸ್ ಜೆಡಿಎಸ್ನ 15 ಶಾಸಕರ ರಾಜೀನಾಮೆ ಮತ್ತು ಅನರ್ಹತೆ ಅರ್ಜಿಗಳು ಇತ್ಯರ್ಥ ಆಗುವವರೆಗೆ...







