ವಿಶ್ವಾಸಮತ ಯಾಚನೆ ಮುಂದೂಡಿಕೆಯಾದರೆ ನಾನೇ ಹೊರ ನಡೆಯುತ್ತೇನೆ:ಸಿದ್ದರಾಮಯ್ಯ – ಕಹಳೆ ನ್ಯೂಸ್
ಬೆಂಗಳೂರು- ವಿಶ್ವಾಸಮತ ಯಾಚನೆ ಮುಂದೂಡಿಕೆಯಾದರೆ ನಾನೇ ಹೊರ ನಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಇವತ್ತೇ ವಿಶ್ವಾಸ ಮತ ಸಾಬೀತುಪಡಿಸೋಣ. ಒಂದು ವೇಳೆ ಇಂದು ವಿಶ್ವಾಸಮತ ಸಾಬೀತು ಮುಂದೂಡಿಕೆಯಾದರೆ ನಾನೇ ಸದನದಿಂದ ಹೊರ ನಡೆಯುತ್ತೇನೆ ಎಂಬ ಸಂದೇಶವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ರವಾನಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಡಿ.ಕೆ.ಶಿವಕುಮಾರ್ ಮೂಲಕ ಮುಖ್ಯಮಂತ್ರಿಗೆ ಈ ಸಂದೇಶ ರವಾನಿಸಿದ್ದಾರೆ ಎಂದು...







