Tuesday, April 28, 2026

ರಾಜಕೀಯ

ರಾಜಕೀಯ

ಶಾಸಕರು ಮಡಿಕೇರಿ ರೆಸಾರ್ಟ್‍ಗೆ ಶಿಫ್ಟ್ – ಕಹಳೆ ನ್ಯೂಸ್

ಮಡಿಕೇರಿ: ರಾಜಕಾರಣದಲ್ಲಾದ ಭಾರೀ ಬದಲಾವಣೆಯಿಂದಾಗಿ ಜೆಡಿಎಸ್ ತನ್ನ ಉಳಿದ ಶಾಸಕರನ್ನು ಉಳಿಸಿಕೊಳ್ಳಲು ಇಂದು ಸಂಜೆ 5ರ ವೇಳೆಗೆ ಮಡಿಕೇರಿ ರೆಸಾರ್ಟ್‍ಗೆ ಶಿಫ್ಟ್ ಮಾಡಲು ಮುಂದಾಗಿದೆ. ಶಾಸಕರೊಂದಿಗೆ ಸಿಎಂ ಕುಮಾರಸ್ವಾಮಿ ಸಭೆ ನಡೆಸಲಿದ್ದು, ಸಭೆ ಬಳಿಕ ಮಡಿಕೇರಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ವಿಶೇಷ ಬಸ್ ಮೂಲಕ ಉಳಿದ ಶಾಸಕರನ್ನು ಮಡಿಕೇರಿಗೆ ಕರೆದೊಯ್ಯಲಾಗುತ್ತದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಪ್ಯಾಡಿಂಗ್ ಟನ್ ರೆಸಾರ್ಟಿನಲ್ಲಿ ರೂಮುಗಳು ಬುಕ್ಕಿಂಗ್ ಆಗಿವೆ. ಅಷ್ಟೇ ಅಲ್ಲದೇ ಮೂರು ರಾತ್ರಿ ಉಳಿದುಕೊಳ್ಳಲು...
ರಾಜಕೀಯ

ಸರ್ಕಾರಕ್ಕೆ ಏನೂ ಆಗಲ್ಲ- ಹೆಚ್.ಡಿ.ಕೆ– ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಕಾರಣದ ಬೆಳವಣಿಗೆ ಬಗ್ಗೆ ನನಗೇನೂ ಆತಂಕವಿಲ್ಲ. ಸರ್ಕಾರಕ್ಕೆ ಏನೂ ಆಗಲ್ಲ. ನನಗೆ ನನ್ನ ಜವಾಬ್ದಾರಿ ಮುಖ್ಯ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಅಮೆರಿಕದಿಂದ ಬೆಂಗಳೂರಿಗೆ ವಾಪಸ್ ಆದ ಬಳಿಕ ಮೈತ್ರಿ ಸರ್ಕಾರದ ಶಾಸಕರ ರಾಜೀನಾಮೆ ಕುರಿತಂತೆ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕೆ ‘ಬಿಜೆಪಿಯವರು ಏನು ಮಾಡುತ್ತಾರೆ, ಬೇರೆಯವರು ಏನು ಮಾಡುತ್ತಾರೆ ಎಂಬುದು ನನಗೆ ಸಂಬಂಧವಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ಜವಾಬ್ದಾರಿ ನಿರ್ವಹಣೆ ಮಾಡುವ ಬಗ್ಗೆ ಗಮನಹರಿಸಿದ್ದೇನೆ. ರೈತರ...
ರಾಜಕೀಯ

ಸಿದ್ದರಾಮಯ್ಯನವರೇ.. ನೀವೊಬ್ಬ ಪರಿಪೂರ್ಣ ನಟ; ಶೋಭಾ ಕರಂದ್ಲಾಜೆ ಟ್ವೀಟ್ – ಕಹಳೆ ನ್ಯೂಸ್

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಒಬ್ಬ ಪರಿಪೂರ್ಣ ನಟ ಎಂದು ಸಂಸದೆ ಶೋಭಾ ಕರಂದ್ಲಾಜೆ ಟ್ವಿಟರ್‍ ನಲ್ಲಿ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಅವರು, ‘ಮೈತ್ರಿ ಸರ್ಕಾರ, ಮುಖ್ಯಮಂತ್ರಿ ಇಲ್ಲವೇ ದೇವೇಗೌಡರ ವಿರುದ್ಧ ಯಾರೂ ಮಾತನಾಡಬಾರದೆಂದು ನಮ್ಮ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡುತ್ತಿದ್ದೇನೆ. ಮೈತ್ರಿ ಭಂಗಕ್ಕಾಗಿ ವಿರೋಧಿಗಳು ಹುಟ್ಟುಹಾಕುತ್ತಿರುವ ಜಗಳದ ಗಾಳಿ ಸುದ್ದಿಗಳ ಬಗ್ಗೆ ಎಚ್ಚರಿಕೆಯಿಂದಿರಿ' ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್‍ಗೆ ಸಂಸದೆ ಶೋಭಾ ಕರಂದ್ಲಾಜೆ...
ರಾಜಕೀಯ

ಕರಾವಳಿಯ ಯೋಜನೆಗಳಿಗೆ ವೇಗ ನಿರೀಕ್ಷೆ – ಕಹಳೆ ನ್ಯೂಸ್

ಮಂಗಳೂರು: ಕೇಂದ್ರ ಬಜೆಟ್‍ನಲ್ಲಿ ಭಾರತ್‍ಮಾಲಾ, ಸಾಗರಮಾಲಾ ಯೋಜನೆಗಳ ಎರಡನೇ ಹಂತಕ್ಕೆ ಹೆಚ್ಚಿನ ಅನುದಾನ ಮೀಸಲಿಟ್ಟಿರುವುದರಿಂದ ಕರಾವಳಿಯಲ್ಲಿ ವಿವಿಧ ಯೋಜನೆಗಳಿಗೆ ವೇಗ ದೊರಕುವ ನಿರೀಕ್ಷೆ ಮೂಡಿಸಿದೆ. ನೂತನ ಬಜೆಟ್‍ನಲ್ಲಿ ಭಾರತ್ ಮಾಲಾ, ಸಾಗರ್‍ಮಾಲಾಗಳಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 80,250 ಕೋ.ರೂ. ಮೀಸಲಿಟ್ಟಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರತ ಮಾಲಾದಡಿ ಒಟ್ಟು 4 ಯೋಜನೆಗಳು ಮಂಜೂರುಗೊಂಡಿದ್ದು, 6 ಪ್ರಸ್ತಾವನೆಯಲ್ಲಿವೆ. ಸಾಗರ ಮಾಲಾದಡಿ 7 ಯೋಜನೆಗಳಿದ್ದು, ಕೆಲವು ಮಂಜೂರಾಗಿದ್ದರೆ, ಇನ್ನು ಕೆಲವು ಡಿಪಿಆರ್,...
ರಾಜಕೀಯ

ರಾಜೀನಾಮೆ ಕೊಟ್ಟರೂ ಮುಂಬೈಗೆ ತೆರಳದ ಮೂವರು ಕಾಂಗ್ರೆಸ್ ಶಾಸಕರು, ಕಾರಣ ಗೊತ್ತಾ…? – ಕಹಳೆ ನ್ಯೂಸ್

ಬೆಂಗಳೂರು : ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ 14 ಶಾಸಕರು ರಾಜೀನಾಮೆ ನೀಡಿದ್ದು, ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ರಾಜೀನಾಮೆ ನೀಡಿದ ಶಾಸಕರೆಲ್ಲಾ ಮುಂಬೈ ಸೇರಿಕೊಂಡಿದ್ದು, ಕೆಲವರು ಬೆಂಗಳೂರಿನಲ್ಲೇ ಉಳಿದಿದ್ದಾರೆ. ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡಿರುವ ಶಾಸಕರ ಮನವೊಲಿಕೆಗೆ ಪ್ರಯತ್ನ ನಡೆಸಿದ್ದಾರೆ. ಕಾಂಗ್ರೆಸ್ ಶಾಸಕರಾದ ರಾಮಲಿಂಗಾರೆಡ್ಡಿ, ಸೌಮ್ಯಾ ರೆಡ್ಡಿ, ಮುನಿರತ್ನ ರಾಜೀನಾಮೆ ಕೊಟ್ಟಿದ್ದರೂ, ಮುಂಬೈಗೆ ತೆರಳದೇ ಬೆಂಗಳೂರಿನಲ್ಲೇ ತಂಗಿದ್ದಾರೆ. ರಾಜೀನಾಮೆ ನೀಡಿದ ಶಾಸಕರೆಲ್ಲಾ ಮುಂಬೈನಲ್ಲಿ ತಂಗಿದ್ದಾರೆ. ಆದರೆ, ಮುನಿರತ್ನ, ರಾಮಲಿಂಗಾರೆಡ್ಡಿ...
ರಾಜಕೀಯ

74 ಫಲಾನುಭವಿಗಳಿಗೆ ಚೆಕ್ ವಿತರಿಸಿದ ಶಾಸಕ ರಾಜೇಶ್ ನಾಯಕ್ – ಕಹಳೆ ನ್ಯೂಸ್

ಬಂಟ್ವಾಳ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2018-19ನೇ ಸಾಲಿನ ಬಂಟ್ವಾಳ ವಿಧಾನ ಸಭಾ ಕ್ಷೇತ್ರಕ್ಕೆ ವಿವಿಧ ಯೋಜನೆಯಡಿ 192 ಫಲಾನುಭವಿಗಳಿಗೆ 114.60 ಲಕ್ಷ ರೂ. ಸಹಾಯಧನ ಬಿಡುಗಡೆಯಾಗಿದೆ. ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಶನಿವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಶ್ರಮಶಕ್ತಿ ಯೋಜನೆಯಲ್ಲಿ ಬಿಡುಗಡೆಯಾದ ಸಹಾಯ ಧನವನ್ನು 74 ಮಂದಿ ಫಲಾನುಭವಿಗಳಿಗೆ ಚೆಕ್ ವಿತರಿಸಿ ಮಾತನಾಡಿದರು. ಶ್ರಮಶಕ್ತಿ ಯೋಜನೆಯಲ್ಲಿ 74 ಮಂದಿ ಫಲಾನುಭವಿಗಳಿಗೆ 19.50 ಲಕ್ಷ ರೂ. ಸ್ವಯಂ ಉದ್ಯೋಗದಡಿ, 20...
ರಾಜಕೀಯ

ಈ ಮೈತ್ರಿ ಸರ್ಕಾರ ಮುಂದುವರಿಯಬೇಕು, ಇದು ನಮ್ಮೆಲ್ಲರ ಬಯಕೆ – ಮಲ್ಲಿಕಾರ್ಜುನ ಖರ್ಗೆ – ಕಹಳೆ ನ್ಯೂಸ್

ಬೆಂಗಳೂರು : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಸುಗಮವಾಗಿ ಮುಂದುವರಿಯಬೇಕು ಎಂಬುದು ನಮ್ಮೆಲ್ಲರ ಬಯಕೆಯಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಈ ಮೈತ್ರಿ ಸರ್ಕಾರ ಮುಂದುವರಿಯಬೇಕು. ಇವೆಲ್ಲ ನಮ್ಮನ್ನು ವಿಭಜಿಸಲು ಸುಳ್ಳು ಸುದ್ದಿಗಳನ್ನು ಮಾಧ್ಯಮಗಳಿಗೆ ನೀಡಲಾಗುತ್ತಿದೆಯಷ್ಟೆ, ಸರ್ಕಾರ ಮುರಿಯಲು ಯಾರಿಗೂ ಮನಸ್ಸಿಲ್ಲ ಎಂದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ತಮ್ಮನ್ನು ಮುಖ್ಯಮಂತ್ರಿ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿದೆ ಎಂದು ಕೇಳಿದ್ದಕ್ಕೆ, ಈ ಬಗ್ಗೆ...
ರಾಜಕೀಯ

ತಮ್ಮ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿದ ಪ್ರಧಾನಿ ನಮೋ – ಕಹಳೆ ನ್ಯೂಸ್

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಗೆ  ಭೇಟಿ ನೀಡಿದ್ದಾರೆ. ಬಿಜೆಪಿ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ಕೂಡ ನೀಡಿದ್ದಾರೆ. ಲೋಕಸಭೆಯ ಚುನಾವಣೆಯಲ್ಲಿ ಪಕ್ಷ ಜಯಗಳಿಸಿದ ನಂತರ ತಮ್ಮ ಕ್ಷೇತ್ರಕ್ಕೆ ಅವರು ಎರಡನೆಯ ಬಾರಿ ಭೇಟಿ ನೀಡುತ್ತಿದ್ದಾರೆ. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮದಿನದಂದು ಬಿಜೆಪಿಯ ಸದಸ್ಯತ್ವ ನೋಂದಣಿ ಆರಂಭವಾಗಲಿದ್ದು, ಈ ಕಾರ್ಯಕ್ರಮವನ್ನು ನಾನೂ ಕಾಶಿಯಿಂದ ಆರಂಭಿಸುತ್ತೇನೆ. ಇದು ಅಭಿಯಾನವು ಜನರನ್ನು ಎಲ್ಲ ಸಂದರ್ಭದಲ್ಲಿಯೂ...
1 152 153 154 155 156 232
Page 154 of 232