Tuesday, April 28, 2026

ರಾಜಕೀಯ

ರಾಜಕೀಯಸುದ್ದಿ

ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷವಾದ ಪೂಜೆ ಸಲ್ಲಿಸಿದ ಯಡಿಯೂರಪ್ಪ – ಕಹಳೆ ನ್ಯೂಸ್

ನಂಜನಗೂಡು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಭಿಷೇಕ ಸಮಯಕ್ಕೆ ಆಗಮಿಸಿದ ಅವರು ಶ್ರೀಕಂಠೇಶ್ವರ ದೇವಾಲಯದ ಗರ್ಭಗುಡಿಯಲ್ಲಿ ಶ್ರೀಕಂಠೇಶ್ವರನಿಗೆ ಅಭಿಷೇಕ ಸಲ್ಲಿಸಿ ಬಿಲ್ವಪತ್ರೆ, ಹೂವುಗಳನ್ನು ಸಮರ್ಪಿಸಿದರು. ಸುಮಾರು 25 ನಿಮಿಷಗಳ ಕಾಲ ಶಾಂತವಾಗಿ ದೇವರ ಮುಂದೆ ಕುಳಿತು ಧ್ಯಾನದಲ್ಲಿ ಮಗ್ನರಾಗಿ ವರ ಬೇಡಿದರು. ನಂತರ ದೇಗುಲದ ಅರ್ಚಕರು ಪ್ರಸಾದ ನೀಡಿ ಶುಭ ಹಾರೈಸಿದರು. ದೇವಾಲಯದ ವತಿಯಿಂದ...
ರಾಜಕೀಯಸುದ್ದಿ

ಕಾಂಗ್ರೆಸ್‌ಗೆ 70 ಮುಖಂಡರ ಸಾಮೂಹಿಕ ರಾಜೀನಾಮೆಯ ಎಚ್ಚರಿಕೆ – ಕಹಳೆ ನ್ಯೂಸ್

ಮೈಸೂರು: ಶಾಸಕ ತನ್ವೀರ್ ಸೇಠ್ ಅವರಿಗೆ ಮಂತ್ರಿ ಸ್ಥಾನ  ಕೈ ತಪ್ಪಿದ್ದಕ್ಕೆ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಟ್ಟು 70 ಮಂದಿ ಕಾಂಗ್ರೆಸ್ ಪದಾಧಿಕಾರಿಗಳ ನಿಯೋಗ ಕೆಪಿಸಿಸಿ ಕಚೇರಿಗೆ ತೆರಳಿ ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಶಾಸಕ ತನ್ವೀರ್ ಸೇಠ್ ಅವರ ಬೆಂಬಲಿಗರಾದ ಮೈಸೂರಿನ 5 ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು, ಮಂಚೂಣಿ ಘಟಕದ ಅಧ್ಯಕ್ಷರು, 23 ವಾರ್ಡ್ ಅಧ್ಯಕ್ಷರು ರಾಜೀನಾಮೆಗೆ ಮುಂದಾಗಿದ್ದಾರೆ. ಒಟ್ಟು ಐದು ಬಾರಿ ತನ್ವೀರ್...
ರಾಜಕೀಯಸುದ್ದಿ

ಯಡಿಯೂರಪ್ಪ ವಿರುದ್ಧ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ – ಕಹಳೆ ನ್ಯೂಸ್

ಚನ್ನಪಟ್ಟಣ :  ಜಿಂದಾಲ್‌ಗೆ ಬಳ್ಳಾರಿಯಲ್ಲಿ ಭೂಮಿ ಪರಭಾರೆ ವಿರುದ್ಧ ಹೋರಾಟ ನಡೆಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ಜಿಂದಾಲ್‌ನಿಂದ 20 ಕೋಟಿ ರು. ಕಿಕ್‌ಬ್ಯಾಕ್‌ ಅನ್ನು ಚೆಕ್‌ ಮೂಲಕ ಯಡಿಯೂರಪ್ಪ ಪಡೆದಿದ್ದನ್ನು ನಾನೇ ಬಹಿರಂಗ ಪಡಿಸಿದ್ದೆ. ಇದನ್ನು ಮರೆತಿರುವ ಅವರು ನನ್ನ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಸೋಮವಾರ ನಡೆಸಿದ ಜನತಾದರ್ಶನದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಂದಾಲ್‌ಗೆ ಜಮೀನಿನ...
ರಾಜಕೀಯಸುದ್ದಿ

Jindal Land Deal: ಜಿಂದಾಲ್ ಮತ್ತು ಐಎಂಎ ಪ್ರಕರಣದಲ್ಲಿ ಮೌನ ಮುರಿದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು? – ಕಹಳೆ ನ್ಯೂಸ್

ನವದೆಹಲಿ: ಜಿಂದಾಲ್ ಮತ್ತು ಐಎಂಎ ಪ್ರಕರಣ ಸಂಬಂಧ ಮೊದಲ ಬಾರಿಗೆ ಮಾಜಿ ಸಿಎಂ ಸಿದ್ದರಾಮಯ್ಯನವರು ಮೌನ ಮುರಿದಿದ್ಧಾರೆ. ಈ ಕುರಿತಂತೆ ನಗರದಲ್ಲಿ ಮಾತಾಡಿದ ಅವರು, "ಮೈತ್ರಿ ಸರ್ಕಾರ ಜಿಂದಾಲ್‍ಗೆ ಭೂಮಿ ನೀಡುವ ವಿಚಾರದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಹಾಗಾಗಿ ಈ ವಿಚಾರ ಸಂಪುಟ ಉಪ ಸಮಿತಿಗೆ ನೀಡುವಂತೆ ನಾನೇ ಸಲಹೆ ನೀಡಿದ್ದೆ" ಎಂದರು. ಇನ್ನು ಸರ್ಕಾರದ ಭಾಗವಾಗಿರುವ ಕಾರಣ ನಾನು ಜಿಂದಾಲ್ ಬಗ್ಗೆ ಏನು? ಮಾತನಾಡಲಿಕ್ಕೆ ಹೋಗಿಲ್ಲ. ಐಎಂಎ ಪ್ರಕರಣದ...
ರಾಜಕೀಯಸುದ್ದಿ

ಎಲೆಕ್ಷನ್ ಸಮೀಕ್ಷೆಗೆ ರಾಹುಲ್ ಗಾಂಧಿಯಿಂದ 24 ಕೋಟಿ ವಸೂಲಿ? ರಮ್ಯಾ ಕೂಡ 8 ಕೋಟಿ ಪಡೆದುಕೊಂಡ್ರಾ? – ಕಹಳೆ ನ್ಯೂಸ್

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಮೀಕ್ಷೆ ಮಾಡುವ ನೆಪದಲ್ಲಿ ರಾಹುಲ್ ಗಾಂಧಿ ಅವರಿಂದ ಸುಮಾರು 24 ಕೋಟಿ ರೂ. ಹಣ ಪಡೆಯಲಾಗಿದೆ ಎಂದು ದಿ ಸಂಡೇ ಗಾರ್ಡಿಯನ್ ವರದಿ ಪ್ರಕಟಿಸಿದೆ. ಪ್ರಮುಖವಾಗಿ ಕಾಂಗ್ರೆಸ್ ಪಕ್ಷದ ಚುನಾವಣಾ ತಂತ್ರಗಾರಿಕೆ ಜವಾಬ್ದಾರಿ ವಹಿಸಿದ್ದ ಪ್ರವೀಣ್ ಚಕ್ರವರ್ತಿ ಅವರಿಗೆ 24 ಕೋಟಿ ರೂ. ಸಂದಾಯ ಆಗಿದೆ ಎಂದು ವಿವರಿಸಲಾಗಿದೆ. ಈ ಹಣದಲ್ಲಿ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ಜವಾಬ್ದಾರಿ ವಹಿಸಿಕೊಂಡಿದ್ದ ರಮ್ಯಾ ಅವರಿಗೆ...
ರಾಜಕೀಯಸುದ್ದಿ

ಶೋಭಾ ಅವರಿಗೆ ಸಚಿವಸ್ಥಾನ ಸಿಗದಿದ್ದರೆ ಅದಕ್ಕೆ ನಾವು ಹೊಣೆಯಲ್ಲ – ಐವಾನ್ ಡಿಸೋಜ – ಕಹಳೆ ನ್ಯೂಸ್

ಬೆಳ್ತಂಗಡಿ: ರಾಜ್ಯದ ಬಿಜೆಪಿ ಮುಖಂಡರುಗಳು ಕೇಂದ್ರ ಸರಕಾರದ ವಿರುದ್ದ ಅಲ್ಲಿನ ಮುಖಂಡರುಗಳಿಗೆ ಮಾತನಾಡಲು ಧೈರ್ಯವಿಲ್ಲದೆ ರಾಜ್ಯ ಸರಕಾರದ ವಿರುದ್ದ ಪ್ರತಿಭಟನೆ ಮಾಡುತ್ತಿದ್ದಾರೆ, ಅವರು ಧರಣಿ ಮಾಡಬೇಕಾದುದು ಕೇಂದ್ರ ಸರಕಾರ ರಾಜ್ಯದ ಬಗ್ಗೆ ಅನುಸರಿಸುತ್ತಿರುವ ಮಲತಾಯಿ ಧೋರಣೆಯ ವಿರುದ್ದವಾಗಿದೆ. ಶೋಭಾ ಅವರಿಗೆ ಸಚಿವಸ್ಥಾನ ಸಿಗದಿದ್ದರೆ ಅದಕ್ಕೆ ನಾವು ಹೊಣೆಯಲ್ಲ ಎಂದರು. ರಾಜ್ಯ ಸರಕಾರ ಸತ್ತು ಹೋಗಿದೆ ನಿರ್ಜೀವವಾಗಿದೆ ಎಂದೆಲ್ಲ ಹೇಳುತ್ತಿರುವ ವಿರೋಧ ಪಕ್ಷದ ನಾಯಕರುಗಳು ಮೊದಲು ಅಂಕಿ ಅಂಶಗಳನ್ನು ಪರಿಶೀಲಿಸಿ ಮಾತನಾಡಲಿ...
ರಾಜಕೀಯಸುದ್ದಿ

ಟಿ.ಡಿ.ಪಿ. ವಿರುದ್ಧ ಕಿಡಿಕಾರಿದ ಜಗನ್‍ಮೋಹನ್ ರೆಡ್ಡಿ – ಕಹಳೆ ನ್ಯೂಸ್

ಭಾರೀ ಬಹುಮತದಿಂದ ಅಧಿಕಾರಕ್ಕೇರಿರುವ ವೈ.ಎಸ್.ಆರ್.ಕಾಂಗ್ರೆಸ್ ಮತ್ತು ವಿರೋಧ ಪಕ್ಷ ತೆಲುಗುದೇಶಂ ನಡುವೆ, ಮುಂಗಾರು ಅಧಿವೇಶನದ ಮೊದಲ ದಿನವೇ ವಾಕ್ಸಮರವೇ ನಡೆದು ಹೋಗಿದೆ. ತೆಲುಗುದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ವಿರುದ್ದ ಅಕ್ಷರಷಃ ಕಿಡಿಕಾರಿರುವ ಸಿಎಂ ವೈ ಎಸ್ ಜಗನ್ಮೋಹನ್ ರೆಡ್ಡಿ, ನಾನು ಮನಸ್ಸು ಮಾಡಿದರೆ, ಹಾಲೀ ಅಸೆಂಬ್ಲಿಯಲ್ಲಿ ನಿಮ್ಮ ಪಕ್ಷದ ಶಾಸಕರೇ ಇಲ್ಲದಂತೆ ಮಾಡುತ್ತೇನೆ ಹುಷಾರ್ ಎಂದು ಫಿಲ್ಮೀ ಸ್ಟೈಲಿನಲ್ಲಿ ವಾಗ್ದಾಳಿ ನಡೆಸಿದ್ದಾರೆ. ನಾನು ಕಣ್ಣು ಮಿಟುಕಿಸಿದರೆ ಸಾಕು, ನಿಮ್ಮ...
ರಾಜಕೀಯಸುದ್ದಿ

ಮೈತ್ರಿಕೂಟ ಅಧಿಕಾರಕ್ಕೆ ಬಂದಲ್ಲಿ ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಹುದ್ದೆ – ಕಹಳೆ ನ್ಯೂಸ್

ಮುಂಬೈ: ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಜೊತೆ ಬಿಜೆಪಿ ಮೈತ್ರಿ ಮುಂದುವರೆಯಲಿದೆ. ಮೈತ್ರಿಕೂಟ ಅಧಿಕಾರಕ್ಕೆ ಬಂದಲ್ಲಿ ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಹುದ್ದೆ ನೀಡಲಾಗುವುದು ಎಂದು ಬಿಜೆಪಿ ಹಿರಿಯ ನಾಯಕ ಸುಧೀರ್‌ ಮುಗಂಟಿವಾರ್‌ ಹೇಳಿದ್ದಾರೆ. ಇದೇ ವೇಳೆ ಸೀಟು ಹಂಚಿಕೆ ಬಗ್ಗೆ ಶೀಘ್ರದಲ್ಲೇ ಉಭಯ ಪಕ್ಷಗಳ ಮುಖಂಡರು ಚರ್ಚಿಸಿ ಸೂಕ್ತ ನಿರ್ಧಾರಕ್ಕೆ ಬರಲಿದ್ದಾರೆ. ಸಿಎಂ ಹುದ್ದೆ ವಿಚಾರವಾಗಿ ಯಾವುದೇ ಗೊಂದಲವಿಲ್ಲ. ಚುನಾವಣೆಯಲ್ಲಿ ನಾವು 228 ಕ್ಷೇತ್ರಗಳ ಪೈಕಿ 220ಕ್ಕೂ ಹೆಚ್ಚು ಸೀಟುಗಳನ್ನು...
1 155 156 157 158 159 232
Page 157 of 232