Thursday, March 12, 2026

ರಾಜಕೀಯ

ಕ್ರೈಮ್ರಾಜಕೀಯಸುದ್ದಿಹಾಸನ

ಅಮಾವಾಸ್ಯೆ ದಿನ ಸೂರಜ್‌ ಬಳೆ ತೊಡ್ತಾನೆ, ಸೀರೆ ಉಡ್ತಾನೆ! ಬಯಲು ಮಾಡಿದ ಸಂತ್ರಸ್ತ – ಕಹಳೆ ನ್ಯೂಸ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ  ಪ್ರಕರಣದಲ್ಲಿ ಈಗ ಪೊಲೀಸ್‌ ವಶದಲ್ಲಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ  ಬಗ್ಗೆ ಸಂತ್ರಸ್ತ ಯುವಕ ಕುತೂಹಲಕಾರಿ ಹೇಳಿಕೆ ನೀಡಿದ್ದಾನೆ. ಸೂರಜ್‌ ರೇವಣ್ಣ ಅಮಾವಾಸ್ಯೆ ದಿನ ಬಳೆ  ತೊಟ್ಟು, ಸೀರೆ ಉಡುತ್ತಾರೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಹಿರಿಯ ಪುತ್ರ ಸೂರಜ್‌ ರೇವಣ್ಣನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ವಶದಲ್ಲಿಟ್ಟುಕೊಂಡಿದ್ದಾರೆ. ಸೂರಜ್ ರೇವಣ್ಣ...
ಉತ್ತರಕನ್ನಡರಾಜಕೀಯಸುದ್ದಿ

ಮಾಜಿ ಕೇಂದ್ರ ಸಚಿವ, ಮಾಜಿ ಸಂಸದ ಅನಂತ್ ಕುಮಾರ್‌ ಹೆಗ್ಡೆ ಮನೆಯಲ್ಲಿ ಅಗ್ನಿ ಅವಘಡ – ಕಹಳೆ ನ್ಯೂಸ್

ಕಾರವಾರ: ಮಾಜಿ ಕೇಂದ್ರ ಸಚಿವ, ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ(Anantkumar Hegde) ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಈ ಘಟನೆ ನಡೆದಿದೆ. ಶಿರಸಿಯ KHB ಕಾಲೋನಿಯಲ್ಲಿ ಇರುವ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ‌ ಈ ಘಟನೆ ಸಂಭವಿಸಿದೆ. ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ ಆಗಿದೆ. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಜಿಮ್ ವಸ್ತುಗಳು ನಾಶವಾಗಿವೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು,...
ಅಂತಾರಾಷ್ಟ್ರೀಯಕ್ರೀಡೆದೆಹಲಿರಾಜಕೀಯಸುದ್ದಿ

ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿಯಲಿದ್ದಾರೆ ಬಿಜೆಪಿ ಶಾಸಕಿ ಶೂಟರ್​ ಶ್ರೇಯಸಿ ಸಿಂಗ್ – ಕಹಳೆ ನ್ಯೂಸ್

ನವದೆಹಲಿ: ಕಾಮನ್ವೆಲ್ತ್‌ ಗೇಮ್ಸ್‌ ಮತ್ತು ಏಷ್ಯಾಡ್‌ನ‌ಲ್ಲಿ ಪದಕ ಜಯಿಸಿರುವ ಶೂಟರ್​ ಶ್ರೇಯಸಿ ಸಿಂಗ್(Shreyasi Singh)​ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ಗಾಗಿ(Paris Olympics 2024) ಭಾರತ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಅಚ್ಚರಿ ಎಂದರೆ ಇವರು ಬಿಹಾರದ ಜಮುಯಿ ವಿಧಾನಸಭಾ ಕ್ಷೇತ್ರದ(Member of Bihar Vidhan Sabha) ಹಾಲಿ ಶಾಸಕಿ ಎಂಬುದು. 32 ವರ್ಷದ ಶ್ರೇಯಸಿ ಸಿಂಗ್‌, ಮಾಜಿ ಸಚಿವ ದಿವಂಗತ ದಿಗ್ವಿಜಯ್‌ ಸಿಂಗ್‌ ಅವರ ಪುತ್ರಿ. ಒಲಿಂಪಿಕ್ಸ್‌ ಆಯ್ಕೆಯ ಮೊದಲ ಪಟ್ಟಿಯಲ್ಲಿ ಶ್ರೇಯಸಿ ಹೆಸರಿರಲಿಲ್ಲ. ಆದರೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಮಂಗಳೂರುರಾಜಕೀಯಸುದ್ದಿ

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ -ಕಹಳೆ ನ್ಯೂಸ್

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ ಬಿಜೆಪಿ ಹಿರಿಯ ಮುಖಂಡ ಮತ್ತೂರಿನ ಎಂ.ಬಿ‌.ಭಾನುಪ್ರಕಾಶ್ ಅವರು ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ತೆರಳುತ್ತಿದ್ದ ವೇಳೆ ಭಾನುಪ್ರಕಾಶ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.   2009 ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಅವರು, 2013-19...
ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ದಕ್ಷಿಣ ಕನ್ನಡ ವತಿಯಿಂದ ನಾಳೆ (ಜೂ.17) ಬೃಹತ್ ವಾಹನ ಜಾಥಾ ಹಾಗೂ ವಿಜಯೋತ್ಸವ ಕಾರ್ಯಕ್ರಮ ; ಅಭೂತಪೂರ್ವ ವಿಜಯ ದಾಖಲಿಸಿ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಅಭಿನಂದನಾ ಕಾರ್ಯಕ್ರಮ..!!- ಕಹಳೆ ನ್ಯೂಸ್ 

ದಕ್ಷಿಣ ಕನ್ನಡದ ಸಂಸದರಾಗಿ ಅಭೂತಪೂರ್ವಜಯ ದಾಖಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಅಭಿನಂದನೆ ಹಾಗೂ ಕಾರ್ಯಕರ್ತರ ವಿಜಯೋತ್ಸವ ಕಾರ್ಯಕ್ರಮ ನಾಳೆ  ಸಂಜೆ 4.30ಕ್ಕೆ ನಗರದ ಕುದ್ಮಲ್ ರಂಗರಾವ್ ಪುರ ಭವನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಉಡುಪಿ ಚಿಕ್ಕಮಂಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಚುನಾಯಿತರಾದ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಪೋಕ್ಸೋ ಕೇಸ್ : ಬಿಎಸ್‌ವೈ ವಿರುದ್ಧ ಅರೆಸ್ಟ್‌ ವಾರಂಟ್‌ ಜಾರಿ ; ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ! – ಕಹಳೆ ನ್ಯೂಸ್

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್‌ನಲ್ಲಿ (POCSO Case) ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದು, ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯೆತೆಯಿದೆ ಎಂದು ಸಿಐಡಿ ಅಧಿಕಾರಿ ಮೂಲಗಳು ತಿಳಿಸಿವೆ. ಪೋಕ್ಸೋ ಪ್ರಕರಣ ಕೈಗೆತ್ತಿಕೊಂಡಿದ್ದ ಸಿಐಡಿ ಬಂಧನ ವಾರಂಟ್ ಕೋರಿ ಹೈಕೋರ್ಟ್‌ಗೆ (Karnataka Highcourt) ಇಂದು (ಗುರುವಾರ) ಅರ್ಜಿ ಸಲ್ಲಿಸಿತ್ತು. ವಾದ ಪ್ರತಿವಾದಗಳನ್ನು ಆಲಿಸಿದ...
ಉಡುಪಿಕ್ರೈಮ್ರಾಜಕೀಯರಾಜ್ಯಸುದ್ದಿ

ಮಾಜಿ ಶಾಸಕ ಕೆ.ರಘುಪತಿ ಭಟ್ ಪತ್ನಿ ಪದ್ಮಪ್ರಿಯ ಆತ್ಮಹತ್ಯೆ ಪ್ರಕರಣ : ಅತುಲ್ ಖುಲಾಸೆ – ಕಹಳೆ ನ್ಯೂಸ್

ಉಡುಪಿ : 15 ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದ ಆರೋಪಿ ಅತುಲ್ ‌ರಾವ್ ನನ್ನು ಉಡುಪಿ ಜಿಲ್ಲಾ ಎರಡನೇ ಹೆಚ್ಚವರಿ ನ್ಯಾಯಾಲಯ ಖುಲಾಸೆಗೊಳಿಸಿ ಬುಧವಾರ ಆದೇಶ ನೀಡಿದೆ. 2008ರ ಜೂ.10ರಂದು ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಅಂದು ರಘುಪತಿ ಭಟ್ ಅವರ ಬಾಲ್ಯ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಮಂಗಳೂರಿನಲ್ಲಿ ಮೋದಿ ಪ್ರಮಾಣವಚನದ ವಿಜಯೋತ್ಸವ ಸಂದರ್ಭ ಚೂರಿ ಇರಿತ ; ಇಬ್ಬರು ಗಂಭೀರ – ಕಹಳೆ ನ್ಯೂಸ್

ಮಂಗಳೂರು : ಬಿಜೆಪಿ ವಿಜಯೋತ್ಸವ ಮೆರವಣಿಗೆ ಸಂದರ್ಭ ಚೂರಿ ಇರಿತವಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಘಟನೆ ನಡೆದಿದ್ದು, ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತವಾಗಿದೆ. ಬೋಳಿಯಾರು ನಿವಾಸಿಗಳಾದ ಹರೀಶ್ ‌ಹಾಗೂ ನಂದ ಕುಮಾರ್ ಗೆ ಇರಿತಕ್ಕೊಳಕ್ಕಾದವರು ಎನ್ನಲಾಗಿದೆ. ಮೋದಿ ಪದಗ್ರಹಣ ಹಿನ್ನೆಲೆಯಲ್ಲಿ ಬೋಳಿಯಾರ್ ನಲ್ಲಿ ಆಯೋಜಿಸಿದ್ದ ವಿಜಯೋತ್ಸವ ಸಂದರ್ಭ ಮಾತಿನ ಚಕಮಕಿ ನಡೆದು ಯುವಕರಿಗೆ ಚೂರಿ ಇರಿತವಾಗಿದೆ. ಚೇಳೂರು...
1 14 15 16 17 18 232
Page 16 of 232