Thursday, April 30, 2026

ರಾಜಕೀಯ

ರಾಜಕೀಯಸುದ್ದಿ

ಜೂನ್‌ 20 ರಂದು ರಾಜ್ಯಸಭೆ ಬಜೆಟ್‌ ಅಧಿವೇಶನ – ಕಹಳೆ ನ್ಯೂಸ್

ಹೊಸದಿಲ್ಲಿ: ರಾಜ್ಯಸಭೆ ಬಜೆಟ್‌ ಅಧಿವೇಶನ ಜೂನ್‌ 20 ರಂದು ಆರಂಭವಾಗಲಿದ್ದು, ಜುಲೈ 26 ರ ವರೆಗೆ ನಡೆಯಲಿದೆ. ಲೋಕಸಭೆ ಕಲಾಪ ಜೂನ್‌ 17 ರಿಂದ ಆರಂಭವಾಗಲಿದೆ. ಮೊದಲ ದಿನ ಹೊಸದಾಗಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸುತ್ತಾರೆ. ಅನಂತರ ಜೂನ್‌ 19ರಂದು ಸ್ಪೀಕರ್‌ ಆಯ್ಕೆ ನಡೆಯಲಿದೆ. ಜೂನ್‌ 20ರಂದು ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಮಾತನಾಡಲಿದ್ದಾರೆ. ಇದೇ ಅಧಿವೇಶನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡನೆ ಮಾಡಲಿದ್ದಾರೆ....
ರಾಜಕೀಯಸುದ್ದಿ

ವಿಶ್ವನಾಥ್‌ ಇಂದು ರಾಜೀನಾಮೆ? – ಕಹಳೆ ನ್ಯೂಸ್

ಬೆಂಗಳೂರು: ಪಕ್ಷದಲ್ಲಿ ತಮ್ಮ ಮಾತಿಗೆ ಬೆಲೆ ಇಲ್ಲ ಎಂದು ಬೇಸರ ಹೊರಹಾಕಿದ್ದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಮಂಗಳವಾರ ದಿಢೀರ್‌ ಸುದ್ದಿಗೋಷ್ಠಿ ಕರೆದಿದ್ದಾರೆ. ಎಚ್‌.ವಿಶ್ವನಾಥ್‌ ಅವರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಸುದ್ದಿಗೋಷ್ಠಿ ಕುತೂಹಲ ಮೂಡಿಸಿದೆ. ಈ ಮಧ್ಯೆ, ವಿಶ್ವನಾಥ್‌ ಅವರು ಸೋಮವಾರ ಸಿಎಂ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಚರ್ಚಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಸುಮಾರು ಒಂದು ಗಂಟೆ ಕಾಲ ಕುಮಾರಸ್ವಾಮಿ ಜತೆ ಪ್ರಸಕ್ತ ರಾಜಕೀಯ ವಿದ್ಯಮಾನ,...
ರಾಜಕೀಯಸುದ್ದಿ

ನನ್ನ ಗೆಲುವಿಗೆ ಕೈ ಬೆಂಬಲಿಸಿದ್ದು ನಿಜ: ತುಮಕೂರು ಬಿಜೆಪಿ ಎಂಪಿ – ಕಹಳೆ ನ್ಯೂಸ್

ತುಮಕೂರು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧೆ ಮಾಡಿ ದೇವೇಗೌಡರ ವಿರುದ್ಧ ಅಭೂತಪೂರ್ವ ಗೆಲುವು ಸಾಧಿಸಿದ ಜಿ.ಎಸ್.ಬಸವರಾಜು  ಇದೇ ನನ್ನ ಕೊನೆಯ ಚುನಾವಣೆ ಎಂದಿದ್ದಾರೆ. ಇನ್ನು ಬಸವರಾಜು ಕೈ ಹಿಡಿಯಲಿದ್ದಾರೆ ಎನ್ನುವ ವದಂತಿಗೂ ಸ್ಪಷ್ಟನೆ ನೀಡಿದ್ದು, ನಾನು ಕಾಂಗ್ರೆಸ್ ಗೆ ಹೋಗುವುದು ಇಲ್ಲ. ಯಾರನ್ನು ಅಲ್ಲಿಂದ ಕರೆತರುವುದು ಇಲ್ಲ ಹೀಗೆಂದು ಹೇಳಿದ್ದಾರೆ. ನನಗೆ ಚುನಾವಣೆ ಸಂದರ್ಭದಲ್ಲಿ ಹಲವು ಕಾಂಗ್ರೆಸ್ ನಾಯಕರು ಬೆಂಬಲ ನೀಡಿದ್ದಾರೆ. ಕೆ.ಎನ್. ರಾಜಣ್ಣ ಅವರು ಬೆಂಬಲ ನೀಡಿದ್ದಾರೆ. ಇನ್ನು ರಾಜಣ್ಣ ಬೆಂಬಲಿಗರೂ...
ರಾಜಕೀಯಸುದ್ದಿ

ಯಡಿಯೂರಪ್ಪ ಅವರು ಸಿಎಂ ಆಗುವುದು ಶತಸಿದ್ಧ: ಕೇಂದ್ರ ಸಚಿವ ಸುರೇಶ್ ಅಂಗಡಿ – ಕಹಳೆ ನ್ಯೂಸ್

ಬೆಂಗಳೂರು :  ಶೀಘ್ರದಲ್ಲೇ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಂಡು ಯಡಿಯೂರಪ್ಪ ಅವರು ಸಿಎಂ ಆಗುವುದು ಶತಸಿದ್ಧ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಅವರು ಹೇಳಿದ್ದಾರೆ. ಇದೇ ವೇಳೆ ರೇಣುಕಾಚಾರ್ಯ ಅವರು ಮೈತ್ರಿ ಸರ್ಕಾರ ಪತನವಾಗಲಿದೆಯೆಂದು ರಕ್ತದಲ್ಲಿ ನಾನು ಬರೆದು ಕೊಡುತ್ತೇನೆ ಎಂದಿದ್ದಾರೆ. ಒಂದು ವೇಳೆ ಸಮ್ಮಿಶ್ರ ಸರ್ಕಾರ ಬೀಳದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದೂ ರೇಣುಕಾಚಾರ್ಯ ಸವಾಲು ಹಾಕಿದ್ದಾರೆ. ಬಿಎಸ್‌ವೈ ಸಿಎಂ ಶತಸಿದ್ಧ: ರಾಜ್ಯದಲ್ಲಿ ಜನರು  ತಿರಸ್ಕರಿಸಿದ ಸಮ್ಮಿಶ್ರ ಸರ್ಕಾರ...
ರಾಜಕೀಯಸುದ್ದಿ

ಬಿಎಸ್ ಯಡಿಯೂರಪ್ಪಗೆ ಸ್ವ-ಕ್ಷೇತ್ರದಲ್ಲೆ ಮುಖಭಂಗ – ಕಹಳೆ ನ್ಯೂಸ್

ಬಿಎಸ್ ಯಡಿಯೂರಪ್ಪ ತವರು ಶಿಕಾರಿಪುರದಲ್ಲೇ ಬಿಜೆಪಿಗೆ ಭಾರೀ ಆಘಾತಕಾರಿ ಫಲಿತಾಂಶ ಹೊರಬಿದ್ದಿದೆ ಸ್ವ-ಕ್ಷೇತ್ರ ಶಿಕಾರಿಪುರದಲ್ಲಿಯೇ ಭಾರೀ ಹಿನ್ನಡೆಯಾಗಿದ್ದು, ಪುರಸಭೆಯ 23 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ 12ರಲ್ಲಿ ಕಾಂಗ್ರೆಸ್, ಬಿಜೆಪಿ 8 ಹಾಗೂ ಪಕ್ಷೇತರರು 3 ವಾರ್ಡ್‍ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಶಿಕಾರಿಪುರ ಪುರಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲುಕಂಡಿದೆ. ಒಟ್ಟು 23 ಸ್ಥಾನಗಳ ಪೈಕಿ ಕಾಂಗ್ರೆಸ್ 12ರಲ್ಲಿ ಗೆಲುವು ಸಾಧಿಸಿದರೆ, ಕೇವಲ ಎಂಟು ಸ್ಥಾನಗಳಲ್ಲಿ ಮಾತ್ರ ಬಿಜೆಪಿ ಗೆಲುವಿನ ನಗೆ...
ರಾಜಕೀಯಸುದ್ದಿ

ಸುಷ್ಮಾರನ್ನು ಅನುಸರಿಸಲು ಹೆಮ್ಮೆ ಯೆನಿಸುತ್ತದೆ; ಡಾ.ಎಸ್‌.ಜೈಶಂಕರ್‌ – ಕಹಳೆ ನ್ಯೂಸ್

ಹೊಸದಿಲ್ಲಿ: ಸುಷ್ಮಾ ಸ್ವರಾಜ್‌ ಅವರ ಹೆಜ್ಜೆಗಳನ್ನು ಅನುಸರಿಸಲು ಹೆಮ್ಮೆ ಎನಿಸುತ್ತಿದೆ ಎಂದು ನೂತನ ವಿದೇಶಾಂಗ ಸಚಿವ ಡಾ.ಸುಬ್ರಮಣ್ಯಂ ಜೈಶಂಕರ್‌ ಅವರು ಟ್ವೀಟ್‌ ಮಾಡಿದ್ದಾರೆ. ಶುಭಹಾರೈಕೆಗಳಿಗಾಗಿ ಎಲ್ಲರಿಗೂ ಧನ್ಯವಾದಗಳು. ಈ ಜವಾಬ್ದಾರಿಯನ್ನು ನೀಡಿ ಗೌರವಿಸಲಾಗಿದೆ. ಸುಷ್ಮಾ ಸ್ವರಾಜ್‌  ಅವರ ಹೆಜ್ಜೆಗಳನ್ನು ಅನುಸರಿಸಲು ಹೆಮ್ಮೆ ಎನಿಸುತ್ತಿದೆ ಎಂದು ಬರೆದಿದ್ದಾರೆ. ಇನ್ನೊಂದು ಟ್ವೀಟ್‌ನಲ್ಲಿ ಸಹಾಯಕ ವಿದೇಶಾಂಗ ಸಚಿವ ವಿ.ಮುರಳೀಧರನ್‌ ಅವರನ್ನು ಟ್ಯಾಗ್‌ ಮಾಡಿ , 24*7 ಸೇವೆ ನೀಡಲು ವಿದೇಶಾಂಗ ಇಲಾಖೆ ಸಿದ್ದವಾಗಿದೆ. ಸಹುದ್ಯೋಗಿ ಮುರಳೀರನ್‌...
ರಾಜಕೀಯಸುದ್ದಿ

ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಮರು ಆಯ್ಕೆ – ಕಹಳೆ ನ್ಯೂಸ್

ನವದೆಹಲಿ: ನೂತನವಾಗಿ ಆಯ್ಕೆಯಾದ ಲೋಕಸಭಾ ಕಾಂಗ್ರೆಸ್ ಸಂಸದರ ಮೊದಲ ಸಭೆಯಲ್ಲಿ ಸೋನಿಯಾ ಗಾಂಧಿಯವರು ಮತ್ತೊಮ್ಮೆ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ನಾಯಕಿರಾಗಿ ಆಯ್ಕೆಯಾಗಿದ್ದಾರೆ. ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರದಲ್ಲಿ  ಸೋನಿಯಾ ಗಾಂಧಿ  ಅವರು ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ರನ್ನು  1.67 ಲಕ್ಷ ಮತಗಳಿಂದ ಸೋಲಿಸುವ ಮೂಲಕ ಜಯ ಸಾಧಿಸಿದ್ದರು.ಶನಿವಾರದಂದು ಸಂಸತ್ತಿನ ಕೇಂದ್ರ ಹಾಲ್ ನಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಸಂಸತ್ ಸದಸ್ಯರು ಹಾಜರಿದ್ದರು. ಇದೇ ವೇಳೆ ರಾಜ್ಯಸಭೆ...
ರಾಜಕೀಯಸುದ್ದಿ

‘ಜೆಡಿಎಸ್ ಪಕ್ಷವನ್ನ ಕಾಂಗ್ರೆಸ್ ಪಕ್ಷಕ್ಕೆ ಮಾರಾಟ ಮಾಡಿದ್ದಾರೆ’ – ಕಹಳೆ ನ್ಯೂಸ್

ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ಸನ್ನು ಮಾರಾಟ ಮಾಡಿದ್ದಾರೆ ಎಂದು ಮಾಲೂರು ಮಾಜಿ ಶಾಸಕ ಮಂಜುನಾಥ್ ಗೌಡ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲಾ ಜೆಡಿಎಸ್ ಅಧ್ಯಕ್ಷ ವೆಂಕಟಶಿವಾರೆಡ್ಡಿ ವಿರುದ್ಧ ಮಂಜುನಾಥ್ ಗೌಡ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಜೊತೆ ಸೇರಿಕೊಂಡು ವೆಂಕಟಶಿವಾರೆಡ್ಡಿ ಜೆಡಿಎಸ್ ಮಾರಾಟ ಮಾಡಿದ್ದಾರೆ. ಜಿಲ್ಲೆಯಲ್ಲಿ ಜೆಡಿಎಸ್ ಪುರಸಭೆ ಸ್ಥಾನಗಳ ಸೋಲಿಗೆ ವೆಂಕಟಶಿವಾರೆಡ್ಡಿ ಕಾರಣವೆಂದು ಆರೋಪಿಸಿದ್ದಾರೆ. ಮಾಲೂರು ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಪಕ್ಷದ ಮಂಜುನಾಥ್ ಗೌಡ ಕೈಜೋಡಿಸಿದ್ದು, ವೆಂಕಟಶಿವಾರೆಡ್ಡಿ ಪಕ್ಷ...
1 158 159 160 161 162 232
Page 160 of 232