Monday, April 27, 2026

ರಾಜಕೀಯ

ರಾಜಕೀಯಸುದ್ದಿ

ಮೈಸೂರಿನಲ್ಲಿ ಪ್ರತಾಪ್ ಸಿಂಹ ಸೋಲಾದರೆ, ಅದು ನನ್ನ ಸೋಲು; ಯಡಿಯೂರಪ್ಪ –ಕಹಳೆ ನ್ಯೂಸ್

ಮೈಸೂರು: ಮೈಸೂರಿನಲ್ಲಿ ಪ್ರತಾಪ್ ಸಿಂಹ ಸೋಲಾದರೆ, ಅದು ನನ್ನ ಸೋಲು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಿಳಿಸಿದರು. ಮೈಸೂರಿನಲ್ಲಿ ಪ್ರತಾಪ್ ಸಿಂಹ ಪರ ಪ್ರಚಾರಕ್ಕೆ ಆಗಮಿಸಿ ಸಮಾವೇಶದಲ್ಲಿ ಮಾತನಾಡಿದ ಅವರು, ವೀರಶೈವ ಸಮಾಜದಲ್ಲಿ ಗೊಂದಲವನ್ನು ಉಂಟುಮಾಡುವ ಪಿತೂರಿ ನಡೆಯುತ್ತಿದೆ. ಯಾವುದಾದರೂ ಕಾರಣಕ್ಕೆ ಪ್ರತಾಪ್‍ಸಿಂಹಗೆ ಹಿನ್ನಡೆ ಉಂಟಾದರೆ ಅದು ಯಡಿಯೂರಪ್ಪನ ಸೋಲು. ಪ್ರತಾಪ್‍ಸಿಂಹ ಗೆಲುವಿನ ಮೇಲೆ ನನ್ನ ಭವಿಷ್ಯ ನಿರ್ಮಾಣವಾಗುತ್ತದೆ ಎಂದರು. ಚಾಮುಂಡೇಶ್ವರಿ ಸೋಲನ್ನು ಸಿದ್ದರಾಮಯ್ಯ ಜೀವನದಲ್ಲಿ ಮರೆಯಲು ಸಾಧ್ಯವಿಲ್ಲ. ದೇವೇಗೌಡ...
ರಾಜಕೀಯಸುದ್ದಿ

ಬಿರುಸಿನ ಮಾತಿನ ವೇಳೆ ಸಿದ್ದರಾಮಯ್ಯ ಎಡಮಟ್ಟು – ಕಹಳೆ ನ್ಯೂಸ್

ಮೈಸೂರು: ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿ ಸಿ.ಎಚ್. ವಿಜಯಶಂಕರ್ ಪರವಾಗಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಿ.ಟಿ. ದೇವೇಗೌಡ ಬಿರುಸಿನ ಪ್ರಚಾರ ನಡೆಸಿದ್ದಾರೆ. ಕಡಕೋಳದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಏಪ್ರಿಲ್ 19 ರಂದು ಮತದಾನ ನಡೆಯಲಿದೆ ಎಂದು ಬಾಯಿತಪ್ಪಿ ಹೇಳಿದ್ದಾರೆ. ಭಾಷಣ ಮಾಡುವ ಸಂದರ್ಭದಲ್ಲಿ ಮಾತಿನ ಅಬ್ಬರದಲ್ಲಿ ಎಡವಟ್ಟು ಮಾಡಿಕೊಂಡ ಅವರು, ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ಏಪ್ರಿಲ್ 19 ರಂದು ಮತದಾನ...
ರಾಜಕೀಯಸುದ್ದಿ

ನಿಖಿಲ್‍ರನ್ನು ರಾಜಕೀಯಕ್ಕೆ ಕರೆ ತಂದಿರುವುದರ ಹಿಂದಿನ ಸತ್ಯವೇನು ಗೊತ್ತಾ..? – ಕಹಳೆ ನ್ಯೂಸ್

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಕುಟುಂಬದಿಂದ ಮೂವರು ಕಣಕ್ಕಿಳಿದಿದ್ದಾರೆ. ದೇವೇಗೌಡರು ತುಮಕೂರಿನಿಂದ, ಪ್ರಜ್ವಲ್ ರೇವಣ್ಣ ಹಾಸನದಿಂದ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪುತ್ರನ ಗೆಲುವಿಗಾಗಿ ಭರ್ಜರಿ ಪ್ರಚಾರ ನಡೆಸುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿಯನ್ನು ರಾಜಕೀಯಕ್ಕೆ ಕರೆ ತಂದಿರುವುದರ ಹಿಂದಿನ ಗುಟ್ಟು ಬಿಚ್ಚಿಟ್ಟಿದ್ದಾರೆ. ಮಂಡ್ಯ ಜಿಲ್ಲೆ ಕೆ.ಎಂ. ದೊಡ್ಡಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನನಗೀಗಾಗಲೇ 2...
ರಾಜಕೀಯಸುದ್ದಿ

ಲೋಕಸಭಾ ಚುನಾವಣಾ ಪ್ರಚಾರ ಭಾಷಣದ ವೇಳೆ ಮತದಾರರಿಗೆ ಬೆದರಿಕೆ: ಮನೇಕಾ ಗಾಂಧಿ, ಸಾಕ್ಷಿ ಮಹಾರಾಜ್

ನವದೆಹಲಿ - ಲೋಕಸಭಾ ಚುನಾವಣಾ ಪ್ರಚಾರ ಭಾಷಣದ ವೇಳೆ ಮತದಾರರಿಗೆ ಬೆದರಿಕೆ ಹಾಕುವ ಧಾಟಿಯಲ್ಲಿ ಮಾತನಾಡಿರುವ ಕೇಂದ್ರ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಸಚಿವೆ ಮನೇಕಾ ಗಾಂಧಿ ಮತ್ತು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ನೀಡಿದೆ. ಈ ರೀತಿಯ ಹೇಳಿಕೆಗಳನ್ನು ನೀಡಿದ ಬಗ್ಗೆ ಪ್ರತ್ಯುತ್ತರ ನೀಡುವಂತೆ ಆಯೋಗ ಕೋರಿದೆ. ಮನೇಕಾ ಗಾಂಧಿ ಅವರು, ಚುನಾವಣಾ ಪ್ರಚಾರ ವೇಳೆ ಮುಸ್ಲಿಮರು ತಮಗೆ ಮತ ಹಾಕಬೇಕು....
ರಾಜಕೀಯಸುದ್ದಿ

ರಾಹುಲ್ ಗಾಂಧಿ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ – ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ಮೋದಿ ಅವರನ್ನು ಚೌಕಿದಾರ್ ಚೋರ್ ಹೈ ಎಂದು ಹೇಳಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಸುಪ್ರೀಂಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದಾರೆ. ರಫೇಲ್ ಯುದ್ಧ ವಿಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ತೀರ್ಪಿನ ಪರಿಶೀಲನೆಗಾಗಿ ಕೇಂದ್ರ ಸರ್ಕಾರವು ಸಲ್ಲಿಸಿದ ಪ್ರಾಥಮಿಕ ಆಕ್ಷೇಪವನ್ನು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದ ಬಳಿಕ ಪ್ರತಿಕ್ರಿಯಿಸಿದ್ದ ರಾಹುಲ್ ಗಾಂಧಿ, ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಚೌಕಿದಾರ್ ಚೋರ್...
ರಾಜಕೀಯಸುದ್ದಿ

ಕಡಬ ಜಿ.ಪಂ.ಸದಸ್ಯರ ಬೂತ್‍ನ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ – ಕಹಳೆ ನ್ಯೂಸ್

ಕಡಬ: ಲೋಕಸಭಾ ಚುನಾವಣಾ ಕಾವು ಜೋರಾಗಿರುವಂತೆಯೇ ಪಕ್ಷಾಂತರ ಪರ್ವವೂ ಜೋರಾಗತೊಡಗಿದೆ. ವಿವಿಧ ಪಕ್ಷಗಳ ಮುಖಂಡರಲ್ಲದೆ ಕಾರ್ಯಕರ್ತರೂ ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಕಡಬ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ. ವರ್ಗೀಸ್ ರವರ ಬೂತ್ ನ ಹಲವು ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರದಂದು ಬಿಜೆಪಿಗೆ ಸೇರ್ಪಡೆಗೊಂಡರು. ಕಾಂಗ್ರೆಸ್ ಪಕ್ಷವು ಜನತೆಗೆ ಮೋಸ ಮಾಡುತ್ತಿದ್ದು, ದೇಶ ರಕ್ಷಣೆ ಮಾಡುವ ನರೇಂದ್ರ ಮೋದಿಯವರ ನಾಯಕತ್ವವನ್ನು ಮೆಚ್ಚಿ ಕಡಬ ಪರಿಸರದ ಮೂವತ್ತಕ್ಕೂ ಅಧಿಕ ಕಾರ್ಯಕರ್ತರು ಬಿಜೆಪಿಗೆ...
ರಾಜಕೀಯಸುದ್ದಿ

ಕಾಂಗ್ರೆಸ್ ಪಕ್ಷಕ್ಕೆ ದೇಶದ ಹಿತಾಸಕ್ತಿಯನ್ನು ಕಾಪಾಡಬೇಕೆಂಬ ಯಾವುದೇ ಕಾಳಜಿ ಇಲ್ಲ : ಪ್ರಧಾನಿ ಮೋದಿ

ಮಹಾರಾಷ್ಟ್ರ: ಕಾಂಗ್ರೆಸ್ ಪಕ್ಷಕ್ಕೆ ದೇಶದ ಹಿತಾಸಕ್ತಿಯನ್ನು ಕಾಪಾಡಬೇಕೆಂಬ ಯಾವುದೇ ಕಾಳಜಿ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ತೊಲಗಿಸುವ ಮೂಲಕ ಬಡತನ ತೊಲಗಿಸಿ ಎಂಬ ಹೊಸ ಸ್ಲೋಗನ್ ಅನ್ನು ಮೋದಿ ಘೋಷಿಸಿದರು. ಕಳೆದ ಐದು ವರ್ಷಗಳಲ್ಲಿ ಇಡೀ ವಿಶ್ವವೇ ಬಲಿಷ್ಠ ಮತ್ತು ದೃಢ ನಿರ್ಧಾರದ ಸರ್ಕಾರವನ್ನು ಕಂಡಿದೆ. ಇದಕ್ಕೂ ಮುನ್ನ ದೇಶದಲ್ಲಿ ಹತ್ತು ವರ್ಷಗಳ ಕಾಲ ರಿಮೋಟ್ ಕಂಟ್ರೋಲ್ ಸರ್ಕಾರ ಅಧಿಕಾರದಲ್ಲಿತ್ತು. ಅಷ್ಟೇ ಅಲ್ಲ ಹಗರಣಗಳ...
ರಾಜಕೀಯಸುದ್ದಿ

ದೇವೇಗೌಡರು ಇನ್ನಿಬ್ಬರು ಮಕ್ಕಳಿಗಾಗಿ ಸಾಮ್ರಾಜ್ಯ ಸ್ಥಾಪಿಸಲು ತುಮಕೂರು ಜಿಲ್ಲೆಗೆ ಕಾಲಿಟ್ಟಿದ್ದಾರೆ : ಪುಟ್ಟಸ್ವಾಮಿ ವ್ಯಂಗ್ಯ – ಕಹಳೆ ನ್ಯೂಸ್

ಚಿತ್ರದುರ್ಗ: ಎಚ್.ಡಿ.ದೇವೇಗೌಡರು ತಮ್ಮ ಇನ್ನಿಬ್ಬರು ಮಕ್ಕಳಿಗಾಗಿ ತನ್ನ ಸಾಮ್ರಾಜ್ಯ ಸ್ಥಾಪಿಸಲು ತುಮಕೂರು ಜಿಲ್ಲೆಗೆ ಕಾಲಿಟ್ಟಿದ್ದಾರೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಪುಟ್ಟಸ್ವಾಮಿ ವ್ಯಂಗ್ಯವಾಡಿದರು. ಶುಕ್ರವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪುಟ್ಟಸ್ವಾಮಿ ಅವರು ಮಾತನಾಡಿದರು. ದೇವೇಗೌಡರು ಹಾಸನದಿಂದ ರಾಮನಗರಕ್ಕೆ ಬಂದು ಅದನ್ನು ಕುಮಾರಸ್ವಾಮಿಗೆ ಬಿಟ್ಟುಕೊಟ್ಟರು. ಮಂಡ್ಯವನ್ನು ಮೊಮ್ಮಗ ನಿಖಿಲ್ ಗೆ, ಈಗ ಮತ್ತೊಬ್ಬ ಮಗ ಬಾಲಕೃಷ್ಣ ಅವರಿಗೆ ತುಮಕೂರಿನಲ್ಲಿ ಸಾಮ್ರಾಜ್ಯ ನಿರ್ಮಾಣಕ್ಕೆ ಬಂದಿದ್ದಾರೆ ಎಂದು ಜರಿದರು. ಮೋದಿ ಅವರ ಮಹಾಘಟಬಂಧನ...
1 181 182 183 184 185 232
Page 183 of 232