ಮೀರತ್ನಲ್ಲಿ ಬೃಹತ್ ರ್ಯಾಲಿ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ – ಕಹಳೆ ನ್ಯೂಸ್
ಮೀರತ್ : ''ಭಾರತದ 130 ಕೋಟಿ ಜನರು ಈಗಿನ ಸರಕಾರವನ್ನೇ ಮತ್ತೆ ಚುನಾಯಿಸಲು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಈ ಬಾರಿಯ ಚುನಾವಣೆಯು ಚೌಕೀದಾರ್(ಕಾವಲುಗಾರ)ಹಾಗೂ ದಾಗ್ದಾರ್(ಭ್ರಷ್ಟ)ನಡುವಿನ ಹೋರಾಟವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಉತ್ತರಪ್ರದೇಶದ ಮೀರತ್ನಲ್ಲಿ ಗುರುವಾರ ಬೃಹತ್ ರ್ಯಾಲಿ ನಡೆಸುವ ಮೂಲಕ ಬಿಜೆಪಿಯ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಮೋದಿ ಮಾತನಾಡಿದರು. ಭಾರತದ ಸ್ವಾತಂತ್ರ ಚಳುವಳಿಯಲ್ಲಿ ಪ್ರಮುಖ ಪಾತ್ರವಹಿಸಿರುವ ದಿಲ್ಲಿಯಿಂದ 70 ಕಿ.ಮೀ. ದೂರದಲ್ಲಿರುವ ಮೀರತ್ನಲ್ಲಿ ಚುನಾವಣಾ ಪ್ರಚಾರ ಆರಂಭಿಸಲಾಗಿದೆ. ನಾನು...







